ಹುಬ್ಬಳ್ಳಿ:ಕೆರೆಯಲ್ಲಿ ಶವ- ಉಮಚಗಿಯಲ್ಲಿ ನೀರಿಗೆ ಪರದಾಟ

ಟ್ಯಾಂಕರ್‌ ನೀರಿಗೆ ಬೇಡಿಕೆ

Team Udayavani, May 19, 2023, 5:54 PM IST

ಹುಬ್ಬಳ್ಳಿ:ಕೆರೆಯಲ್ಲಿ ಶವ- ಉಮಚಗಿಯಲ್ಲಿ ನೀರಿಗೆ ಪರದಾಟ

ಹುಬ್ಬಳ್ಳಿ: ಎಂತಹ ಬೇಸಿಗೆಯಿದ್ದರೂ ಈ ಹಳ್ಳಿಯ ಕೆರೆಯಲ್ಲಿ ನೀರಿಗೆ ಬರ ಇರಲ್ಲ. ಆದರೆ ಈ ಕೆರೆಯಲ್ಲಿ ವ್ಯಕ್ತಿಯೊಬ್ಬರು ಬಿದ್ದು ಮೂರ್‍ನಾಲ್ಕು ದಿನಗಳ ನಂತರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ತಮ್ಮೂರಿನ ಕೆರೆ ನೀರು ಕುಡಿಯಲು ಜನರು ಹಿಂದೇಟು ಹಾಕಿದ್ದಾರೆ.

ಮಳೆ ಆರಂಭವಾಗುವವರೆಗೆ ತಾತ್ಕಾಲಿಕವಾಗಿ ಟ್ಯಾಂಕರ್‌ ನೀರಿನ ಬೇಡಿಕೆಯಿಟ್ಟಿದ್ದಾರೆ. ಇದೀಗ ಕುಡಿಯುವ ನೀರಿಗಾಗಿ ಅಕ್ಕಪಕ್ಕದ ಗ್ರಾಮಗಳಿಗೆ ತೆರಳುವಂತಾಗಿದೆ.

ಇದು ಹುಬ್ಬಳ್ಳಿ ತಾಲೂಕಿನ ನವಲಗುಂದ ಮತಕ್ಷೇತ್ರದ ಉಮ್ಮಚಗಿ ಗ್ರಾಮದ ಪರಿಸ್ಥಿತಿ. ಎಂತಹ ಬರ ಬಂದರೂ ಈ ಗ್ರಾಮದ
ಕೆರೆಗೆ ಬರ ಎನ್ನುವುದಿಲ್ಲ. ಈ ಬಾರಿ ಸುತ್ತಲಿನ ಗ್ರಾಮಗಳಲ್ಲಿ ಈಗಾಗಲೇ ಒಂದಿಷ್ಟು ನೀರಿನ ಸಮಸ್ಯೆ ಉಂಟಾಗಿದ್ದರೂ ಇಲ್ಲಿ ಮಾತ್ರ ಅಂತಹ ಸಮಸ್ಯೆ ಕಂಡಿರಲಿಲ್ಲ. ಆದರೆ ಇತ್ತೀಚೆಗೆ ಗ್ರಾಮದ ವ್ಯಕ್ತಿಯೊಬ್ಬ ಕೆರೆಗೆ ಬಿದ್ದು ಮೂರ್‍ನಾಲ್ಕು ದಿನಗಳ ನಂತರ ಕೊಳತೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಇದನ್ನು ಗ್ರಾಮದ ಜನ ಕಣ್ಣಾರೆ ನೋಡಿದ್ದಾರೆ. ಹೀಗಾಗಿ ಈ ಕೆರೆಯ ನೀರಿನ ಕುಡಿಯಲು ಸುತಾರಾಮ ಒಪ್ಪುತ್ತಿಲ್ಲ. ಹೀಗಾಗಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಆಹಾಕಾರ ಎದ್ದಿದ್ದು, ಎರಡು ಕೊಡ ನೀರಿಗಾಗಿ ಇಡೀ ದಿನ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪಕ್ಕದ ರೊಟ್ಟಿಗವಾಡ ಗ್ರಾಮಸ್ಥರು ಇದೇ ಕೆರೆಯ ನೀರನ್ನು ಕುಡಿಯಲು ಬಳಸುತ್ತಿದ್ದರು. ಇತ್ತೀಚೆಗೆ ನಡೆದ ಘಟನೆಯಿಂದ ಎರಡೂ ಗ್ರಾಮದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಉಮ್ಮಚಗಿ-ರೊಟ್ಟಿಗವಾಡ ಗ್ರಾಮದ ನಡುವೆ
ಒಂದು ಸಣ್ಣ ಕೆರೆಯಿದ್ದು, ಈ ನೀರಿಗಾಗಿ ಇಡೀ ದಿನ ಬಡಿದಾಡುವಂತಾಗಿದೆ. ಬೇಸಿಗೆ ಪರಿಣಾಮ ಅಲ್ಲಿಯೂ ನೀರು ಸಂಪೂರ್ಣ ಬತ್ತಿದ್ದು, ಗಂಟೆಗೆ ಎರಡು ಕೊಡ ನೀರು ದೊರೆಯುವುದೇ ದುಸ್ತರವಾಗಿರುವಾಗ ನೀರಿಗಾಗಿ ಇಡೀ ದಿನ ಕಾಯುವಂತಾಗಿದೆ. ಇನ್ನು ಸೈಕಲ್‌, ದ್ವಿಚಕ್ರ ಮೂಲಕ ಐದು ಕಿಮೀ ದೂರದ ನಲವಡಿ, ಆರು ಕಿಲೋಮೀಟರ್‌ ದೂರದ ಕೊಡ್ಲಿವಾಡಕ್ಕೆ ಹೋಗಿ ನೀರು ತರಬೇಕು. ಹೀಗಾಗಿ ಗ್ರಾಮದ ಮಹಿಳೆಯರು ಎರಡು ಕೊಡ ಕುಡಿಯುವ ನೀರಿಗಾಗಿ ಬೇಸತ್ತು ಹೋಗಿದ್ದಾರೆ.

ಟ್ಯಾಂಕರ್‌ ನೀರಿಗೆ ಬೇಡಿಕೆ: ಘಟನೆ ನಂತರ ಗ್ರಾಮಸ್ಥರು ಯಾವುದೇ ಕಾರಣಕ್ಕೂ ಕೆರೆ ನೀರು ಕುಡಿಯಲ್ಲ ಎಂದು ಹಿಂದೇಟು ಹಾಕಿದ್ದಾರೆ. ಹೀಗಾಗಿ ಫಿಲ್ಟರ್‌ ನೀರು ಕುಡಿಯಲು ಬಳಸಿ ಎಂದು 2 ರೂ. 20 ಲೀಟರ್‌ ನೀರು ದೊರೆಯುವಂತೆ ವ್ಯವಸ್ಥೆ ಮಾಡಿದ್ದಾರೆ. ಈ ಫಿಲ್ಟರ್‌ಗೆ ಬರುವುದು ಇದೇ ಕೆರೆಯ ನೀರಾಗಿರುವುದರಿಂದ ಏನಾದರೂ ಹೆಚ್ಚು ಕಡಿಮೆಯಾದರೆ ಏನು ಮಾಡೋದು ಎಂಬುದು ಗ್ರಾಮಸ್ಥರ ಭೀತಿಯಾಗಿದೆ. ಇದರ ಬದಲಾಗಿ ಈ ಹಿಂದೆ ನೀಡುತ್ತಿದ್ದಂತೆ ತಾತ್ಕಾಲಿಕವಾಗಿ ಟ್ಯಾಂಕರ್‌ ಮೂಲಕ ನೀರು ಪೂರೈಸುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ ಗ್ರಾಪಂ ವತಿಯಿಂದ ತಾಪಂ, ತಹಶೀಲ್ದಾರ್‌, ಜಿಪಂ ಸಿಇಒ ಅವರಿಗೆ ಟ್ಯಾಂಕರ್‌ ನೀರಿಗೆ ಮಾಡಿದ ಮನವಿ ಪ್ರಯೋಜನವಾಗಿಲ್ಲ.

ಕೆರೆ ನೀರು ಹೊರಕ್ಕೆ ಪಟ್ಟು: ಮೂರ್‍ನಾಲ್ಕು ದಿನಗಳ ಕಾಲ ದೇಹ ಕೆರೆಯಲಿದ್ದು, ಮೀನು ಇತರೆ ಕೀಟಗಳು ದೇಹವನ್ನು ಸಂಪೂರ್ಣ ಕಚ್ಚಿದ್ದವು. ಹೀಗಾಗಿ ಇಂತಹ ನೀರನ್ನು ಕುಡಿಯಲು ಸಾಧ್ಯವಿಲ್ಲ. ಹೀಗಾಗಿ ಕೆರೆಯ ನೀರನ್ನು ಹೊರಕ್ಕೆ ಹರಿಸುವಂತೆ ಗ್ರಾಮಸ್ಥರ ಪಟ್ಟಾಗಿದೆ. ಆದರೆ ಮುಂದೆ ಮಳೆ ಸಮಸ್ಯೆಯಾದರೆ ಇರುವ ಇತರೆ ಬಳಕೆ, ಜಾನುವಾರುಗಳಿಗೆ ನೀರಿನ ಸಮಸ್ಯೆ ಎದುರಾದರೆ ಮತ್ತೂಂದು ಸಂಕಷ್ಟ ಅನುಭವಿಸಬೇಕಾಗುತ್ತದೆ ಎಂಬುದು ಅಧಿಕಾರಿಗಳ ಮುನ್ನಾಲೋಚನೆಯಾಗಿದೆ. ಮುಂದೆ ಚೆನ್ನಾಗಿ ಮಳೆಯಾಗುತ್ತದೆ ಈ ನೀರನ್ನು ಹೊರ ಹಾಕದು ಹೊರತು ಕುಡಿಯಲು ಬಳಸಲ್ಲ. ಅಲ್ಲಿಯವರೆಗೆ ಟ್ಯಾಂಕರ್‌ ನೀರು ಪೂರೈಸಿ ಎಂಬುದು ಒತ್ತಡವಾಗಿದೆ.

ನೀರಿನಲ್ಲಿ ಯಾವುದೇ ದೋಷವಿಲ್ಲ: ಕೆರೆಯಲ್ಲಿ ಮೃತದೇಹ ದೊರೆತ ಮಾರನೇ ದಿನವೇ ನೀರಿನ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆದರೆ ನೀರಿನಲ್ಲಿ ಯಾವುದೇ ಹಾನಿಕಾರಕ ಅಂಶ ಅಥವಾ ಕುಡಿಯಲು ಯೋಗ್ಯವಲ್ಲದ ಬ್ಯಾಕ್ಟಿರಿಯಾಗಳು ಇಲ್ಲ ಎಂದು ಪ್ರಯೋಗಾಲಯ ವರದಿ ಬಂದಿದೆ. ಪುನಃ ಮತ್ತೊಮ್ಮೆ ನೀರು ಪರೀಕ್ಷೆ ಮಾಡಿಸಿದಾಗಲೂ ಅದೇ ಫಲಿತಾಂಶ
ಬಂದಿದೆ. ಅಲ್ಲದೆ ವೈಜ್ಞಾನಿಕವಾಗಿ ವೈದ್ಯರು ಹಾಗೂ ತಂತ್ರಜ್ಞರ ಸಮಕ್ಷಮದಲ್ಲಿ ಔಷಧಿ ಸಿಂಪರಣೆ ನಿರ್ವಹಿಸಲಾಗಿದೆ. ಅಲ್ಲದೆ ಅಧಿಕಾರಿಗಳು ಆ ನೀರನ್ನು ಕುಡಿದು ಧೈರ್ಯ ಹೇಳಿದರೂ ಗ್ರಾಮಸ್ಥರು ಮಾತ್ರ ಬಳಕೆಗೆ ಹಿಂದೇಟು ಹಾಕಿದ್ದಾರೆ. ಅವರ ಆಯ್ಕೆ
ಟ್ಯಾಂಕರ್‌ ನೀರು ಎಂಬುದಾಗಿದೆ.

ಕಣ್ಣಾರೆ ಕಂಡ ನಂತರ ಅಂತಹ ನೀರು ಕುಡಿಯಲು ಹೇಗೆ ಸಾಧ್ಯ. ಎರಡು ಕೊಡ ನೀರಿಗಾಗಿ ಇಡೀ ದಿನ ಕಾಯುವ ಪರಿಸ್ಥಿತಿ
ಎದುರಾಗಿದೆ. ಬಿಸಿಲಲ್ಲಿ ದೂರದ ಗ್ರಾಮಗಳಿಗೆ ಹೋಗಿ ನೀರು ತರಬೇಕು. ಗ್ರಾಮಸ್ಥರ ನೀರಿನ ಸಮಸ್ಯೆಬಗ್ಗೆ ಅಧಿಕಾರಿಗಳಿಗೆ ಯಾಕೆ ಇಷ್ಟೊಂದು ನಿರ್ಲಕ್ಷé ಎಂಬುದು ಅರ್ಥವಾಗುತ್ತಿಲ್ಲ. ಈ ಹಿಂದೆ ಗ್ರಾಮಕ್ಕೆ ಪೂರೈಸುತ್ತಿದ್ದಂತೆ ತಾತ್ಕಾಲಿಕವಾಗಿ ಟ್ಯಾಂಕರ್‌ ನೀರು ನೀಡಬೇಕು.
ಶಿವನಗೌಡ ಪಾಟೀಲ, ಗ್ರಾಮಸ್ಥರು

ಕೆರೆಯ ನೀರನ್ನು ಎರಡು ಬಾರಿ ವೈಜ್ಞಾನಿಕವಾಗಿ ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗಿದೆ. ಯಾವುದೇ ಹಾನಿಕಾರಕ ಅಂಶಗಳು ಪತ್ತೆಯಾಗಿಲ್ಲ ಎನ್ನುವ ವರದಿ ಬಂದಿದೆ. ಆದರೂ ಹಿಂದೇಟು ಹಾಕಿದ ಪರಿಣಾಮ ಅತ್ಯಂತ ಕಡಿಮೆ ದರದಲ್ಲಿ ಫಿಲ್ಟರ್‌ ನೀರು ಕೊಡುತ್ತಿದ್ದರೂ ಬಳಸುತ್ತಿಲ್ಲ. ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಬಂದು ಪರಿಶೀಲಿಸಿದ್ದಾರೆ. ಆದರೆ ಟ್ಯಾಂಕರ್‌ ನೀರಿಗೆ ಗ್ರಾಮಸ್ಥರ ಬೇಡಿಕೆಯಾಗಿದೆ. ಲಲಿತಾ ವಡ್ಡರ, ಗ್ರಾಪಂ ಅಭಿವೃದ್ಧಿ ಅಧಿಕಾರಿ.

ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.