![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 6, 2023, 10:28 AM IST
ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆ ಮುರಾರ್ಜಿ ನಗರ ಬಸವ ಕೇಂದ್ರದ ವಿ.ಎಂ. ಕೊಟಗಿ ಬಸವ ಸಂಸ್ಕೃತಿ ಶಾಲೆಯಲ್ಲಿ ಖ್ಯಾತ ಸಂಶೋಧಕ, ವಚನ ಸಾಹಿತ್ಯದ ಪಿತಾಮಹ ಡಾ|ಫಕೀರಪ್ಪ ಗುರುಬಸಪ್ಪ ಹಳಕಟ್ಟಿ (ಡಾ. ಫ.ಗು. ಹಳಕಟ್ಟಿ) ಮತ್ತು ಶರಣ ಹಡಪದ ಅಪ್ಪಣ್ಣನವರ ಜಯಂತಿ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಗೋಕುಲ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಫ್.ಬಿ. ಸೊರಟೂರ ಮಾತನಾಡಿ, ಡಾ| ಫ.ಗು. ಹಳಕಟ್ಟಿ ಅವರು
ವಚನ ಸಾಹಿತ್ಯ ಸಂರಕ್ಷಣೆಗೆ ತಮ್ಮ ಬದುಕನ್ನು ಸಮರ್ಪಿಸಿಕೊಂಡಿದ್ದರು. ಜೀವನದಲ್ಲಿ ಎಷ್ಟೇ ಕಷ್ಟ, ನೋವು ಅನುಭವಿಸಿದರೂ ವಚನ ಸಂರಕ್ಷಣೆ ಕಾರ್ಯ ಬಿಡಲಿಲ್ಲ. ವಿಶ್ವವಿದ್ಯಾಲಯ ಮಾಡುವಷ್ಟು ಕೆಲಸವನ್ನು ಡಾ|ಫ.ಗು. ಹಳಕಟ್ಟಿ ಅವರೊಬ್ಬರೇ ಮಾಡಿದ್ದಾರೆ ಎಂದರು.
ಧಾರವಾಡ ವಿದ್ಯಾರಣ್ಯ ಹೈಸ್ಕೂಲ್ ಶಿಕ್ಷಕ ಸಂಗಮೇಶ ಹಡಪದ ಮಾತನಾಡಿ, ಶರಣ ಹಡಪದ ಅಪ್ಪಣ್ಣನವರು ವಿಶ್ವಗುರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಅಪಾರ ಸೇವೆ ಮಾಡಿದ್ದಾರೆ. ಅವರ ವಚನಗಳಲ್ಲಿ ಅಲಕ್ಷಿತ ಸಮಾಜಕ್ಕೆ ಆಗುವ
ಅನ್ಯಾಯವನ್ನು ನೇರ, ನಿಷ್ಟುರ ಮಾತುಗಳಲ್ಲಿ ಖಂಡಿಸಿದ್ದಾರೆ. ಸಮಾಜ ಪರಿವರ್ತನೆಗೆ ವಚನಗಳ ಮೂಲಕ ಮಾರ್ಗದರ್ಶನ ಮಾಡಿದ್ದಾರೆ ಎಂದರು.
ಎಸ್.ವಿ. ಕೊಟಗಿ, ಶಿವಯೋಗಿ ಮುರ್ಖಂಡೆ, ಎಂ.ಬಿ. ಕಟ್ಟಿ, ಮುರುಗೇಶ ಗಂಗಲ್, ಮೃತ್ಯುಂಜಯ ಮರೋಳ, ನಿಜಗುಣಿ ಹಳ್ಳಾಳ,
ಉಮಾ ಹುಲಿಕಂತಿಮಠ, ನೀಲಗಂಗಾ ಹಳ್ಳಾಳ, ಮಧು ಕಂಠಿ, ಮಾಲಾ ರಮೇಶ, ನೇಹಾ ಕಂಠಿ, ಚೈತ್ರಾ, ಶಾರದಾ ಮುರ್ಖಂಡೆ, ಐ.ಬಿ. ಪಾಟೀಲ, ಪ್ರಕಾಶ ಪಾಟೀಲ, ಪ್ರಭು ಶೆಟ್ಟರ, ವಿಜಯಲಕ್ಷ್ಮೀ ಗಂಗಲ್, ಎಂ.ಪಿ. ಕುಂಬಾರ, ಈರಣ್ಣ ಏಕಬೋಟೆ, ಎಸ್.ಯು. ಕರೇಗೌಡರ, ಈಶ್ವರಿ ಬೆಸ್ತ, ಕಲ್ಲಪ್ಪ, ಗಿರಿಜಾ ಹಳ್ಳಾಳ, ಜಯಶ್ರೀ ಹಿರೇಮಠ ಮೊದಲಾದವರಿದ್ದರು.
ಬಸವ ಕೇಂದ್ರದ ಅಧ್ಯಕ್ಷ ಪ್ರೊ|ಜಿ.ಬಿ. ಹಳ್ಳಾಳ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಾ|ಪ್ರಕಾಶ ಮುನ್ನೋಳಿ ಸ್ವಾಗತಿಸಿದರು. ಬಸವ ಪರಿಸರ ಸಂರಕ್ಷಣಾ ಸಮಿತಿ ಕಾರ್ಯದರ್ಶಿ ಡಾ|ಸುರೇಶ ಹೊರಕೇರಿ ನಿರೂಪಿಸಿದರು. ಪ್ರಭು ಅಂಗಡಿ ವಂದಿಸಿದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.