ಇನ್ನು ಐದಾರು ತಿಂಗಳಲ್ಲಿ ಹುಬ್ಬಳ್ಳಿ ಸುಂದರ ನಗರ

ಅಭಿವೃದ್ಧಿ ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ಒಂದಿಷ್ಟು ಅನಾನುಕೂಲತೆಗಳು ಆಗಲಿವೆ.

Team Udayavani, Jan 28, 2022, 5:40 PM IST

ಇನ್ನು ಐದಾರು ತಿಂಗಳಲ್ಲಿ ಹುಬ್ಬಳ್ಳಿ ಸುಂದರ ನಗರ

ಹುಬ್ಬಳ್ಳಿ: ಮುಂದಿನ 5-6 ತಿಂಗಳಲ್ಲಿ ಮಹಾನಗರದ ರಸ್ತೆಗಳು ಸಂಪೂರ್ಣ ಅಭಿವೃದ್ಧಿಯಾಗಿ ಮಹಾನಗರದ ಚಿತ್ರಣ ಬದಲಾಗಿದ್ದು, ಸುಂದರ ಮಹಾನಗರವನ್ನಾಗಿ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಇಲ್ಲಿನ ರಮೇಶ ಭವನದ ಬಳಿ ಗುರುವಾರ ಸರ್ವೋದಯ ವೃತ್ತ-ಗೋಪನಕೊಪ್ಪವರೆಗೆ ಸಿಆರ್‌ಎಫ್‌ ಯೋಜನೆಯಡಿ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಬಹಳ ವರ್ಷಗಳಿಂದ ಈ ರಸ್ತೆ ಅಭಿವೃದ್ಧಿಗೆ ಬಗ್ಗೆ ಬೇಡಿಕೆಗಳಿದ್ದವು. ಸಿಆರ್‌ಎಫ್‌ ಯೋಜನೆಯಡಿ ಕಾಮಗಾರಿ ಕೈಗೊಳ್ಳಲಾಗಿದೆ. 50ಕೋಟಿ ರೂ. ವೆಚ್ಚದಲ್ಲಿ ಗದಗ ರಸ್ತೆ ರೈಲ್ವೆ ಕೆಳೆ ಸೇತುವೆ-ಸಾಯಿನಗರ ವೃತ್ತದವರೆಗೆ ಈ ಯೋಜನೆಯಿದೆ. ಮೊದಲ ಹಂತದಲ್ಲಿ ಸರ್ವೋದಯ ವೃತ್ತದವರೆಗೆ ಪೂರ್ಣಗೊಂಡಿದೆ. ಇದೀಗ ಎರಡನೇ ಹಂತದಲ್ಲಿ ಸರ್ವೋದಯ ವೃತ್ತದಿಂದ ಗೋಪನಕೊಪ್ಪದವರಗೆ ರಸ್ತೆ ನಿರ್ಮಾಣವಾಗಲಿದೆ ಎಂದರು.

ಮಹಾನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಸಿಆರ್‌ಎಫ್‌ ಯೋಜನೆಯಲ್ಲಿ 400 ಕೋಟಿ ರೂ. ಮಂಜೂರಾತಿ ಕೇಂದ್ರ ಸರಕಾರದಿಂದ ಮಾಡಿಸಲಾಗಿತ್ತು. ಕೋವಿಡ್‌ ಹಿನ್ನೆಲೆಯಲ್ಲಿ ಕಾಮಗಾರಿಗಳು ಒಂದಿಷ್ಟು ವಿಳಂಬವಾದವು. ಹಿಂದಿನ ಸರಕಾರ ಸಿಆರ್‌ಎಫ್‌ ರಸ್ತೆ ನಿರ್ಮಾಣಕ್ಕೆ ಬೇಕಾದ ಅನುದಾನ ಬಿಡುಗಡೆ ಮಾಡಲಿಲ್ಲ. ಇದೀಗ ನಮ್ಮದೇ ಸರಕಾರವಿದ್ದು, ಒಳ ರಸ್ತೆಗಳು ಅಭಿವೃದ್ಧಿಯಾಗಲಿದೆ. ನಗರ ವಿಕಾಸ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ
ಕಾಮಗಾರಿಗಳು ಆರಂಭವಾಗಲಿವೆ. ಸಂಚಾರ ದಟ್ಟಣೆ ಆಗದ ರೀತಿಯಲ್ಲಿ ಹಂತ ಹಂತವಾಗಿ ಕೆಲಸ ಆರಂಭಿಸಲಾಗುವುದು ಎಂದರು.

ಅಭಿವೃದ್ಧಿ ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ಒಂದಿಷ್ಟು ಅನಾನುಕೂಲತೆಗಳು ಆಗಲಿವೆ. ಸಾರ್ವಜನಿಕರು, ವ್ಯಾಪಾರಿಗಳು ಸಹಕಾರ ನೀಡಬೇಕು. ಸಂಚಾರ ದಟ್ಟಣೆಯನ್ನು ಪರ್ಯಾಯ ರಸ್ತೆಗಳಿಗೆ ವರ್ಗಾಯಿಸಬೇಕು. ಅಧಿಕಾರಿಗಳು, ಗುತ್ತಿಗೆದಾರರು ಕೂಡ ತೀವ್ರ ಸಮಸ್ಯೆ ಉಂಟು ಮಾಡಿ ಜನರಿಗೆ ತೊಂದರೆ ಕೊಡಬಾರದು. ರಸ್ತೆ ಕಾಮಗಾರಿಯಾಗಿರುವ ಕಾರಣ ಆದಷ್ಟು ಬೇಗ ಪೂರ್ಣಗೊಳಿಸಬೇಕು. ಗುಣಮಟ್ಟ ಕಾಯ್ದುಕೊಳ್ಳಬೇಕು. ರಸ್ತೆ ನಿರ್ಮಾಣ ಹೆಸರಲ್ಲಿ ಮರ ಕಡಿಯುವುದು ಬೇಡ ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಹಾನಗರ ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ಬೀರಪ್ಪ ಖಂಡೇಕಾರ, ಸಂತೋಷ ಚವ್ಹಾಣ, ಉಮಾ ಮುಕುಂದ, ಮೀನಾಕ್ಷಿ ಒಂಟಮುರಿ, ಮಹಾದೇವ ನರಗುಂದ, ಮಾಜಿ ಉಪ ಮೇಯರ್‌ ಮೇನಕಾ ಹುರಳಿ, ವಲಯ ಸಹಾಯಕ ಆಯುಕ್ತ ಎಸ್‌ .ಸಿ.ಬೇವೂರು ಸೇರಿದಂತೆ ಇನ್ನಿತರರಿದ್ದರು.

ಉದ್ಘಾಟನೆ-ಭೂಮಿಪೂಜೆ-ಕಿಟ್‌ ವಿತರಣೆ
ಮೊದಲ ಹಂತದಲ್ಲಿ ಪೂರ್ಣಗೊಂಡ ಗದಗ ರಸ್ತೆ ರೈಲ್ವೆ ಕೆಳಸೇತುವೆ-ಸರ್ವೋದಯ ವೃತ್ತವರೆಗೆ ಕಾಂಕ್ರೀಟ್‌ ರಸ್ತೆ ಉದ್ಘಾಟನೆ ನೆರವೇರಿಸಿದರು. ನಂತರ ಬಾರಕೂಟ್ರಿ-ಭವಾನಿ ನಗರ ಸಂಪರ್ಕ ರಸ್ತೆ ಕಾಂಕ್ರೀಟ್‌ ರಸ್ತೆ ಹಾಗೂ ಗಟಾರು ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಬದಾಮಿ ನಗರದ ಧಾರವಾಡ ಒನ್‌ ಕಚೇರಿ ಆವರಣದಲ್ಲಿ ಮಹಾನಗರ ಪಾಲಿಕೆ ಅನುದಾನದಲ್ಲಿ 10 ಫಲಾನುಭವಿಗಳಿಗೆ ಉಚಿತ ಗ್ಯಾಸ್‌ ಕಿಟ್‌ ವಿತರಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.