ಹುಬ್ಬಳ್ಳಿ: ರೋಟರಿ ಆರೋಗ್ಯ ವಾಹಿನಿಗೆ ಚಾಲನೆ

ಪ್ರತಿಯೊಂದು ಆರೋಗ್ಯ ತಪಾಸಣೆಯು ಉಚಿತವಾಗಿರುತ್ತದೆ.

Team Udayavani, Jun 26, 2024, 5:25 PM IST

ಹುಬ್ಬಳ್ಳಿ: ರೋಟರಿ ಆರೋಗ್ಯ ವಾಹಿನಿಗೆ ಚಾಲನೆ

ಉದಯವಾಣಿ ಸಮಾಚಾರ
ಹುಬ್ಬಳ್ಳಿ: ಅತ್ಯಾಧುನಿಕ ಯಂತ್ರಗಳನ್ನು ಹೊಂದಿರುವ ರೋಟರಿ ಆರೋಗ್ಯ ವಾಹಿನಿಗೆ ಮೂರುಸಾವಿರ ಮಠದ ಜಗದ್ಗುರು ಶ್ರೀ
ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಚಾಲನೆ ನೀಡಿದರು. ಮೊದಲ ದಿನವೇ ಜನರು ಉಚಿತವಾಗಿ ಆರೋಗ್ಯ ತಪಾಸಣೆ
ಮಾಡಿಸಿಕೊಂಡರು.

ಮಂಗಳವಾರ ಇಲ್ಲಿ ಮೂರುಸಾವಿರ ಮಠದ ಆವರಣದಲ್ಲಿ ಶ್ರೀಗಳು ರೋಟರಿ ಆರೋಗ್ಯ ವಾಹಿನಿ ಮತ್ತು ಮೆಮೊಗ್ರಾಫಿಕ್‌ ಹಾಗೂ ಕಾಲ್ಪುಸ್ಕೋಪಿಕ್‌ ಯಂತ್ರದ ಮೂಲಕ ಮೊದಲ ಹಂತದ ಕ್ಯಾನ್ಸರ್‌ ಕಾಯಿಲೆ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು. ಇಂತಹ ಅತ್ಯಾಧುನಿಕ ಸೌಲಭ್ಯಗಳಿಂದ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಸಿಗುವಂತಾಗಿದೆ.

ತಪಾಸಣಾ ಯಂತ್ರಗಳನ್ನು ಹೊಂದಿರುವ ವಾಹನ ಹಳ್ಳಿಗಳಿಗೆ ತೆರಳಿ ಅಲ್ಲಿನ ಜನರ ಆರೋಗ್ಯ ತಪಾಸಣೆ ಮಾಡುವ ಕಾರ್ಯ
ಶ್ಲಾಘನೀಯ. ಇಷ್ಟೊಂದು ಬೆಲೆಬಾಳುವ ವಾಹನವನ್ನು ಖರೀದಿಸಿ ಸಮಾಜಕ್ಕೆ ನೀಡಿರುವ ರೋಟರಿ ಕ್ಲಬ್‌ನ ಪದಾಧಿಕಾರಿಗಳ
ಸಮಾಜಮುಖಿ ಕಾರ್ಯ ದೊಡ್ಡದು ಎಂದು ಸ್ವಾಮೀಜಿ ಹೇಳಿದರು.

ನವನಗರದ ಕರ್ನಾಟಕ ಕ್ಯಾನ್ಸರ್‌ ಥೆರಪಿ ಇನ್‌ಸ್ಟಿಟ್ಯೂಟ್‌ನ ಡಾ| ಬಿ.ಆರ್‌. ಪಾಟೀಲ ಮಾತನಾಡಿ, ಈ ವಾಹನವು ಬಾಯಿ, ಸ್ತನ,
ಗರ್ಭಕೋಶ ಹಾಗೂ ರಕ್ತ ಕ್ಯಾನ್ಸರ್‌ ಪತ್ತೆ ಮಾಡುವಂತಹ ಯಂತ್ರಗಳನ್ನು ಹೊಂದಿದೆ. ಗ್ರಾಮೀಣ ಪ್ರದೇಶಗಳಿಗೆ ತೆರಳಿ ತಪಾಸಣೆ
ಹಾಗೂ ಅಂದೇ ವರದಿ ನೀಡುವ ಸೌಲಭ್ಯವಿದೆ.

ಕ್ಯಾನ್ಸರ್‌ ರೋಗದ ಲಕ್ಷಣಗಳು ಪತ್ತೆಯಾದರೆ ನಂತರ ಚಿಕಿತ್ಸೆಗೆ ಅನುಕೂಲವಾಗಲಿದೆ. ಇದೊಂದು ಅತ್ಯಾಧುನಿಕ ಯಂತ್ರಗಳನ್ನು
ಹೊಂದಿದ ಆರೋಗ್ಯ ವಾಹನವಾಗಿದೆ. ದಿನಕ್ಕೆ 100 ಜನರ ಆರೋಗ್ಯ ತಪಾಸಣೆ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದರು. ರೋಟರಿ ಕ್ಲಬ್‌ ಅಧ್ಯಕ್ಷ ಅರವಿಂದ ಕುಬಸದ ಮಾತನಾಡಿ, ಈ ವಾಹನದ ಮೂಲಕ ಗ್ರಾಮೀಣ ಭಾಗದಲ್ಲಿ ಶಿಬಿರಗಳನ್ನು ಮಾಡಲಾಗುವುದು. ಪ್ರತಿಯೊಂದು ಆರೋಗ್ಯ ತಪಾಸಣೆಯು ಉಚಿತವಾಗಿರುತ್ತದೆ.

ಧಾರವಾಡ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ರೋಟರಿ ಕ್ಲಬ್‌ಗಳಿವೆ. ಇವರೆಲ್ಲನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅವರು ಕೂಡ ತಮ್ಮ ವ್ಯಾಪ್ತಿಯಲ್ಲಿ ಈ ವಾಹನದ ಮೂಲಕ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬಹುದಾಗಿದೆ. ಇದರ ನಿರ್ವಹಣೆಯನ್ನು ನವನಗರದ ಕ್ಯಾನ್ಸರ್‌ ಆಸ್ಪತ್ರೆಗೆ ನೀಡಲಾಗಿದೆ. ಈ ವಾಹನದ ಒಟ್ಟು ಮೌಲ್ಯ ಸುಮಾರು 1.20 ಕೋಟಿ ರೂ. ನಮ್ಮ ಕ್ಲಬ್‌ ಹಾಗೂ ಅಂತಾರಾಷ್ಟ್ರೀಯ ಕ್ಲಬ್‌ನ ವಂತಿಗೆ ಕೂಡ ಇದೆ ಎಂದು ತಿಳಿಸಿದರು.

ರೋಟರಿ ಕ್ಲಬ್‌ ಆಫ್‌ ಹುಬ್ಬಳ್ಳಿ ಹಾಗೂ ನವನಗರದ ಕರ್ನಾಟಕ ಕ್ಯಾನ್ಸರ್‌ ಥೆರಪಿ ಇನ್‌ಸ್ಟಿಟ್ಯೂಟ್‌ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಕ್ಲಬ್‌ ಸದಸ್ಯರಾದ ಎ.ವಿ. ಸಂಕನೂರು, ಸುರೇಂದ್ರ ಫರಾಲ್‌, ಬಾಳಾಸಾಹೇಬ ಪಾಟೀಲ, ಪ್ರಕಾಶರಾವ ಬಾಪು ಬಿರಾದರ, ಮಂಜುನಾಥ ಹೊಂಬಳ ಇನ್ನಿತರರಿದ್ದರು.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

dattatreya-Hosabale

Sharanas ವಚನಗಳ ಮೌಲ್ಯ ಮುಂದಿನ ಪೀಳಿಗೆಗೆ ತಲುಪಬೇಕು: ದತ್ತಾತ್ರೇಯ ಹೊಸಬಾಳೆ

Valmiki Corporation case: CM should resign on moral responsibility: Prahlada Joshi

Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.