Hubli: ಸಚಿವೆ ನಿರ್ಮಲಾ ಸೀತಾರಾಮನ್ ಆರೋಪದಲ್ಲಿ ಹುರುಳಿಲ್ಲ; ಡಾ. ಜಿ. ಪರಮೇಶ್ವರ ತಿರುಗೇಟು


Team Udayavani, Jul 31, 2024, 2:51 PM IST

9-hubli

ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅತ್ಯಂತ ವ್ಯವಸ್ಥಿತವಾಗಿದೆ.‌ ಯಾವುದೇ ಸಂದರ್ಭದಲ್ಲೂ ಹತೋಟಿ ಮೀರಿ‌ ಹೋಗಿಲ್ಲ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಪದಲ್ಲಿ ಹುರುಳಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿರುಗೇಟು ನೀಡಿದರು.

ಜು. 31ರ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಕೈಗಾರಿಕೋದ್ಯಮಿಗಳು ಬರಲು ಹಿಂದೇಟು ಹಾಕುತ್ತಿದ್ದಾರೆ. ಕೆಲವರು ಬೇರೆ ರಾಜ್ಯಕ್ಕಿಂತ ಸ್ಥಳಾಂತರ ಮಾಡುತ್ತಿದ್ದಾರೆ ಎಂಬುದು ಸತ್ಯಕ್ಕೆ ದೂರ. ಸ್ವಾಭಾವಿಕವಾಗಿ ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುತ್ತವೆ. ಆದರೆ ಯಾವ ಕೈಗಾರಿಕೆಗಳು ರಾಜ್ಯ ಬಿಟ್ಟು ಹೊರ ಹೋಗುವ ಉದಹಾರಣೆ ಇಲ್ಲ ಎಂದರು.

ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ, ಡ್ರಗ್ಸ್ ದಂಧೆ ಇರುವುದು ನಿಜ. ಆದರೆ ಯಾವಾಗಿನಿಂದ ಇಂತಹ ಚಟುವಟಿಕೆಗಳಾಗಿವೆ ಅನ್ನುವುದನ್ನು ಅವಲೋಕನ ಮಾಡುವ ಅಗತ್ಯವಿದೆ. ಬಿಜೆಪಿ‌ ಸರ್ಕಾರದ ಅವಧಿಗಿಂತಲೂ ಕಡಿಮೆ ಚಟುವಟಿಕೆಗಳಿವೆ. ರಾಜ್ಯದಲ್ಲಿ‌ ಡ್ರಗ್ಸ್ ಮುಕ್ತವನ್ನಾಗಿಸುವ ಗುರಿ ಹೊಂದಿದ್ದೇವೆ. ಆ ನಿಟ್ಟಿನಲ್ಲಿ ಆಂದೋಲನ ಸಹ ಕೈಗೊಳ್ಳಲಾಗಿದೆ ಎಂದರು.

ಈ ಭಾಗದಲ್ಲೂ ಸಹ ಡ್ರಗ್ಸ್ ದಂಧೆ ಕಡಿವಾಣಕ್ಕೆ ಕ್ರಮ‌ಕೈಗೊಳ್ಳುತ್ತಿದ್ದೇವೆ. ಮೊನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ಮಾದಕ ವ್ಯಸನಿಗಳನ್ನು ಹಿಡಿದು ತಂದು ಅವರನ್ನು ಪರೀಕ್ಷೆಗೊಳಪಡಿಸಲಾಗಿದೆ. ಅವರ ಮೂಲಕ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ. ಆ ಮೂಲಕ‌ ನಾವು ಇಡೀ ರಾಜ್ಯದಲ್ಲಿ ಅರಿವು ಮೂಡಿಸುತ್ತಿದ್ದೇವೆ ಎಂದು ಹೇಳಿದರು.

ರಾಜ್ಯದ ಪ್ರತಿ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ನಿನ್ನೆಯಷ್ಟೇ ಒಬ್ಬ ಡ್ರಗ್ ಪೆಡ್ಲರ್‌‌ನನ್ನು ಬಂಧನ ಮಾಡಲಾಗಿದೆ. ಇದಲ್ಲದೇ ಸೈಬರ್ ಕ್ರೈಂಗಳ ಹಾವಳಿ ಹೆಚ್ಚಾಗಿದೆ. ಅದನ್ನು ತಡೆಗಟ್ಟಯವ ಪ್ರಯತ್ನಗಳು ಕೂಡ ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹತೋಟಿಗೆ ತಂದಿದ್ದೇವೆ ಎಂದರು.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಎಸ್‌ಸಿ, ಎಸ್‌ಟಿ ಹಣ ವರ್ಗಾವಣೆ ಮಾಡಿದ್ದಾರೆ ಅನ್ನುವುದು ದೊಡ್ಡ ಆರೋಪ ಮಾಡಿದ್ದಾರೆ. ಅವರಿಗೆ ಯಾರು ಈ ಅಂಕಿ ಸಂಖ್ಯೆ ಕೊಟ್ಟಿದ್ದು..?. ನಿಮ್ಮ ತಟ್ಟೆಯಲ್ಲಿ ಏನು ಬಿದ್ದಿದೆ ನೋಡಿಕೊಳ್ಳಬೇಕು‌. ಬೇರೆಯವರ ತಟ್ಟೆಯಲ್ಲಿ ನೊಣ ಬಿದ್ದಿದೆ ಅಂತಾ ಹೇಳುವುದಲ್ಲ.‌ ನಾವು ಹಣ ವರ್ಗಾವಣೆ ಮಾಡಿಲ್ಲ. ಕಾರ್ಯಕ್ರಮಕ್ಕೆ ಅದನ್ನು ಉಪಯೋಗ ಮಾಡಿದ್ದೇವೆ ಎಂದರು.

ಬಿಜೆಪಿಯವರು ಕೇವಲ ಪ್ರಚಾರಕ್ಕೆ ಮಾತನಾಡುತ್ತಾರೆ. ಅದೇ ಹಿನ್ನೆಲೆಯಲ್ಲಿ ಸಂಸತ್ತಲ್ಲಿ ರಾಹುಲ್ ಗಾಂಧಿಯ ಜಾತಿ ಬಗ್ಗೆ ಮಾತನಾಡಿದ್ದಾರೆ. ಸಚಿವ ಅನುರಾಗ್ ಠಾಕೂರ ಹೇಳಿಕೆ ಏನನ್ನು ತೋರಿಸುತ್ತದೆ. ಅದಕ್ಕಾಗಿ ಈ ರೀತಿಯ ಕೀಳುಮಟ್ಟದ ಭಾಷೆ ಬಳಸುತ್ತಾರೆ ಎಂದರು.

ಬೆಂಗಳೂರಿನಲ್ಲಿ ದೊರೆತ ಮಾಂಸ ನಾಯಿಯದ್ದು ಅಲ್ಲ. ಆದರೆ ಅಲ್ಲಿಗೆ ಕೆಲವರು ಹೋಗಿ ಗಲಾಟೆ ಮಾಡಿದ್ದಾರೆ. ಪುನೀತ್ ಕೆರಹಳ್ಳಿ ಶಾಂತಿ ಭಂಗ ಮಾಡಿದ್ದಾರೆ. ಅವರ ಮೇಲೆ ಕ್ರಮ ಆಗಿದೆ. ಹಿಂದೆ ಕೂಡ ಅವರ ಮೇಲೆ ಕೆಲ ಕೇಸ್‌ಗಳಿವೆ. ಅಲ್ಲಿ ಕಳಪೆ ಮಾಂಸ ಮಾರಾಟ ವಿಚಾರ ಇಲ್ಲ ಎಂದರು.

ರಾಜಕೀಯಕ್ಕೆ ನಾನು ಸನ್ಯಾಸಿ ಆಗಿ ಬಂದಿಲ್ಲ. ಸಿಎಂ ಬದಲಾವಣೆ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಅಂತಹ ಸಂದರ್ಭವೂ ಇಲ್ಲ. ಉತ್ತಮ ಆಡಳಿತ ನೀಡುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

brij Bhushan

Wrestlers ವಿರುದ್ಧ ಹೇಳಿಕೆ ಬೇಡ: ಬ್ರಜ್‌ ಭೂಷಣ್‌ಗೆ ಬಿಜೆಪಿ ವರಿಷ್ಠರ ತಾಕೀತು

Udupi ಗೀತಾರ್ಥ ಚಿಂತನೆ-30; ಭಗವಂತ “ಆಂಶಿಕ’ ಅಲ್ಲ, “ಸರ್ವ’

Udupi ಗೀತಾರ್ಥ ಚಿಂತನೆ-30; ಭಗವಂತ “ಆಂಶಿಕ’ ಅಲ್ಲ, “ಸರ್ವ’

Church ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ

Church ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Kinnigoli: ರಿಕ್ಷಾದಡಿ ಬಿದ್ದ ತಾಯಿಯನ್ನು ರಕ್ಷಿಸಿದ ಪುತ್ರಿ

Kinnigoli: ರಿಕ್ಷಾದಡಿ ಬಿದ್ದ ತಾಯಿಯನ್ನು ರಕ್ಷಿಸಿದ ಪುತ್ರಿ

Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ

Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ

Aranthodu ರಿಕ್ಷಾ ಢಿಕ್ಕಿ: ಸ್ಕೂಟಿ ಸವಾರ ಸಾವು

Aranthodu ರಿಕ್ಷಾ ಢಿಕ್ಕಿ: ಸ್ಕೂಟಿ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Congress ಒಳಗೊಳಗೆ ಸಿಎಂ ಕುರ್ಚಿಗಾಗಿ ನಾಯಕರು‌ ಸಾಲುಗಟ್ಟಿ ನಿಂತಿದ್ದಾರೆ: ಜೋಶಿ

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

Hubballi: ಕ್ಷುಲ್ಲಕ ಕಾರಣಕ್ಕೆ ತಲ್ವಾರ್‌ನಿಂದ ಹೊಡೆದಾಡಿಕೊಂಡ ಸ್ನೇಹಿತರು; ಓರ್ವ ಗಂಭೀರ

Hubballi: ಕ್ಷುಲ್ಲಕ ಕಾರಣಕ್ಕೆ ತಲ್ವಾರ್‌ನಿಂದ ಹೊಡೆದಾಡಿಕೊಂಡ ಸ್ನೇಹಿತರು; ಓರ್ವ ಗಂಭೀರ

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

arrested

Ganesh Chaturthi ಪೋಸ್ಟ್‌ ಡಿಲೀಟ್‌: ಪ್ರಾಂಶುಪಾಲ ಸೆರೆ

1-tkp

Union Finance Secretary ಹುದ್ದೆಗೆ ತುಹಿನ್‌ ಕಾಂತಾ ಪಾಂಡೆ ನೇಮಕ

1-aaaaaaaa

Train ಚಲಿಸುವಾಗ ಕೊಂಡಿ ತುಂಡು: ಬೇರ್ಪಟ್ಟ ಬೋಗಿ

ED

Amtech Group 5 ಸಾವಿರ ಕೋಟಿ ರೂ. ಆಸ್ತಿ ಜಪ್ತಿ: 27,000 ಕೋಟಿ ವಂಚನೆ

brij Bhushan

Wrestlers ವಿರುದ್ಧ ಹೇಳಿಕೆ ಬೇಡ: ಬ್ರಜ್‌ ಭೂಷಣ್‌ಗೆ ಬಿಜೆಪಿ ವರಿಷ್ಠರ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.