ನೋಂದಣಿ ನೆಪವೊಡ್ಡಿಕ್ಲೇಮ್‌ ತಿರಸ್ಕರಿಸಿದ್ದಕ್ಕೆದಂಡ; ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ

ಆರ್‌ ಟಿಒ ಕಚೇರಿಗೆ ಬಂದು ವಾಹನ ನೋಂದಣಿ ಮಾಡಿಸುವುದು ಅಸಾಧ್ಯವಾಗಿತ್ತು.

Team Udayavani, Mar 3, 2023, 11:15 AM IST

ನೋಂದಣಿ ನೆಪವೊಡ್ಡಿಕ್ಲೇಮ್‌ ತಿರಸ್ಕರಿಸಿದ್ದಕ್ಕೆದಂಡ; ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ

ಧಾರವಾಡ: ಆಕಸ್ಮಿಕ ಬೆಂಕಿ ಅವಘಡದಲ್ಲಿ ಸುಟ್ಟು ಹೋದ ಬೈಕ್‌ಗೆ ಕಾಯಂ ನೋಂದಣಿ ಆಗದ ನೆಪವೊಡ್ಡಿ ಕ್ಲೇಮ್‌ ತಿರಸ್ಕರಿಸಿದ ನ್ಯೂ ಇಂಡಿಯಾ ಅಸುರೆನ್ಸ್‌ ಕಂಪನಿ ದಂಡದ ಜತೆಗೆ ಕ್ಲೇಮ್‌ ಹಣ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗ ಸೂಚಿಸಿದೆ.

ಮುಂಬೈನ ಅಂಜನ್‌ ಅಟೋಮೆಟಿವ್‌ ಡೀಲ್‌ರಿಂದ ಕವಾಸಾಕಿ ಕಂಪನಿಯ ಕವಾಸಾಕಿ-900 ಸುಪರ್‌ ಬೈಕ್‌ನ್ನು ಹುಬ್ಬಳ್ಳಿ ವಿದ್ಯಾನಗರದ ನಿವಾಸಿ ತುಷಾರ ಪವಾರ ಅವರು 13-05-2021 ರಂದು 14,99,000 ರೂ.ಹಣ ನೀಡಿ ಖರೀದಿಸಿದ್ದರು. ಆ ಬೈಕ್‌ಗೆ 39,006 ಪ್ರೀಮಿಯಮ್‌ ಕಟ್ಟಿ ನ್ಯೂ ಇಂಡಿಯಾ ಅಸುರೆನ್ಸ್‌ ಕಂಪನಿಯಿಂದ ವಿಮೆ ಮಾಡಿಸಿದ್ದರು. ಆ ವಾಹನಕ್ಕೆ ಮುಂಬೈನ ಪಶ್ಚಿಮ ಆರ್‌ಟಿಒ ಕಚೇರಿಯಿಂದ ಟೆಂಪರವರಿ ರೆಜಿಸ್ಟ್ರೇಷನ್‌ ಸಹ ಆಗಿತ್ತು. ಒಂದು ತಿಂಗಳೊಳಗೆ ಆ ಬೈಕ್‌ಗೆ ಕಾಯಂ ರೆಜಿಸ್ಟ್ರೇಷನ್‌ ಮಾಡಿಸಬೇಕಿತ್ತು.

ಆದರೆ ಅದೇ ಸಮಯಕ್ಕೆ ಕೋವಿಡ್‌-19 ಬಂದು ಪೂರ್ತಿ ಲಾಕ್‌ಡೌನ್‌ ಆಗಿದ್ದರಿಂದ ಆರ್‌ಟಿಒ ಮತ್ತು ಇತರೆ ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿತ್ತು. ಹೀಗಾಗಿ ಬೈಕ್‌ಗೆ ಕಾಯಂ ನೋಂದಣಿ ಆಗಿರಲಿಲ್ಲ. ಈ ಮಧ್ಯೆ 27-08-2021ರಂದು ಆ ಬೈಕ್‌ಗೆ ಆಕಸ್ಮಿಕ ಬೆಂಕಿ ತಗುಲಿ, ಅದು ಸುಟ್ಟು ಹೋಯಿತು. ಬೈಕ್‌ನ ಮೇಲೆ ವಿಮೆ ಚಾಲ್ತಿಯಿದ್ದುದರಿಂದ ಅದರ ಮೌಲ್ಯ 14,99,000 ತನಗೆ ನೀಡುವಂತೆ ಇನ್ಸಶೂರೆನ್ಸ್‌ ಕಂಪನಿಗೆ ಕ್ಲೇಮ ಅರ್ಜಿ ಹಾಕಲಾಗಿತ್ತು. ಆದರೆ ಕ್ಲೇಮನ್ನು ವಿಮಾ ಕಂಪನಿ ತಿರಸ್ಕರಿಸಿತ್ತು. ಈ ನಡೆ ವಿರುದ್ಧ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು.

ಈ ದೂರಿಗೆ ಪ್ರತಿಯಾಗಿ ಬೈಕ್‌ಗೆ ಘಟನಾ ದಿನದಂದು ಕಾಯಂ ನೋಂದಣಿ ಆಗಿರಲಿಲ್ಲ ಆದ್ದರಿಂದ ಅದು ವಿಮಾ ಪಾಲಸಿಯ ಷರತ್ತು ಉಲ್ಲಂಘಿಸಿದಂತಾಗುತ್ತದೆ ಅನ್ನುವ ಕಾರಣದ ಮೇಲೆ ಕ್ಲೇಮ್‌ ಅನ್ನು ವಜಾ ಮಾಡಿರುವುದಾಗಿ ಹೇಳಿ ವಿಮಾ ಕಂಪನಿಯ ಆಕ್ಷೇಪಣೆಯನ್ನು ಆಯೋಗಕ್ಕೆ ಸಲ್ಲಿಸಿತ್ತು. ಈ ದೂರು ಮತ್ತು ಆಕ್ಷೇಪಣೆ ವಿಚಾರಣೆ ಕೈಗೊಂಡ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿ.ಅ.ಬೋಳಶೆಟ್ಟಿ ಮತ್ತು ಪಿ.ಸಿ.ಹಿರೇಮಠ ಒಳಗೊಂಡ ಆಯೋಗ ಕೋವಿಡ್‌-19 ಲಾಕ್‌ಡೌನ್‌ ಅವಧಿಯಲ್ಲಿ ಆರ್‌ ಟಿಒ ಕಚೇರಿಗೆ ಬಂದು ವಾಹನ ನೋಂದಣಿ ಮಾಡಿಸುವುದು ಅಸಾಧ್ಯವಾಗಿತ್ತು.

ಹೀಗಾಗಿ 2020 ಮಾರ್ಚ್‌ದಿಂದ 2021 ಅಕ್ಟೋಬರ್‌ ವರೆಗೆ ವಾಹನಗಳ ನೋಂದಣಿ ಪ್ರಕ್ರಿಯೆಯನ್ನು ವಿಸ್ತರಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಆದೇಶ ಹೊರಡಿಸಿವೆ. ಈ ಅವ ಧಿಯಲ್ಲಿ ಬೈಕ್‌ ಸುಟ್ಟು ಅವರಿಗೆ ನಷ್ಟ ಆಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಸರ್ಕಾರದ ಆದೇಶಗಳನ್ವಯ ಘಟನಾ ದಿನದಂದು ಆ ಬೈಕ್‌ಗೆ ವಾಹನ ನೋಂದಣಿ ಇತ್ತು.

ಆ ಬೈಕ್‌ನ ಪೂರ್ತಿ ಮೌಲ್ಯ 14,99,000 ಹಣವನ್ನು ಪರಿಹಾರವಾಗಿ ನೀಡದೇ ವಿಮಾ ಕಂಪನಿ ಸೇವಾ ನ್ಯೂನತೆ ಎಸಗಿದೆ ಎಂದು ಅಭಿಪ್ರಾಯಪಟ್ಟು ತೀರ್ಪು ನೀಡಿದೆ. ಇದಲ್ಲದೇ ಬೈಕ್‌ನ ಪೂರ್ತಿ ಮೌಲ್ಯ 14,99,000 ರೂ.ಗಳ ಪರಿಹಾರ ಮತ್ತು ದೂರುದಾರರಿಗೆ ಆಗಿರುವ ಅನಾನುಕೂಲ ಹಾಗೂ ಮಾನಸಿಕ ತೊಂದರೆಗಾಗಿ 50,000 ರೂ. ಪರಿಹಾರ, ಪ್ರಕರಣದ ಖರ್ಚು ವೆಚ್ಚ 10,000 ರೂ.ಗಳನ್ನು ತೀರ್ಪು ನೀಡಿದ ಒಂದು ತಿಂಗಳೊಳಗಾಗಿ ನೀಡುವಂತೆ ವಿಮಾ
ಕಂಪನಿಗೆ ಆಯೋಗವು ಆದೇಶಿಸಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.