ರಾಸಾಯನಿಕ ಗೊಬ್ಬರದಿಂದ ಅಪಾಯ ನಿಶ್ಚಿತ

ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮ

Team Udayavani, Mar 25, 2022, 10:35 AM IST

1

ಹುಬ್ಬಳ್ಳಿ: ಅತ್ಯಧಿಕ ರಾಸಾಯನಿಕ ಬಳಕೆಯಿಂದ ಕೃಷಿ ಭೂಮಿ ಹಾಳಾಗುತ್ತಿದ್ದು, ರೈತರು ಎಚ್ಚೆತ್ತುಕೊಳ್ಳುವುದು ಅವಶ್ಯ ಎಂದು ಹನುಮನಟ್ಟಿ ಕೃಷಿ ಮಹಾವಿದ್ಯಾಲಯದ ಡೀನ್‌ ಚಿದಾನಂದ ಮನಸೂರ ಹೇಳಿದರು.

ಇಲ್ಲಿನ ಜೆ.ಸಿ. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಕೃಷಿ ಇಂದು ಕವಲು ದಾರಿಯಲ್ಲಿದೆ. ಮಣ್ಣಿನಲ್ಲಿ ತೇವಾಂಶ ಅತ್ಯವಶ್ಯಕ. ಅದನ್ನು ಹಿಡಿದಿಟ್ಟುಕೊಳ್ಳುವಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು. ಕೃಷಿಗೆ ಹೊಸ ಯೋಜನೆಗಳನ್ನು ರೂಪಿಸಬೇಕು. ನೈಸರ್ಗಿಕ ಕೃಷಿಗೆ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದಲ್ಲಿ ಸಂಗ್ರಹವಾಗುವ ತಾಜ್ಯವನ್ನು ಮರುಬಳಕೆ ಮಾಡಿಕೊಳ್ಳಬೇಕು ಎಂದರು.

ಸಣ್ಣ ರೈತರು ಸಾವಯವ ಕೃಷಿ ಮಾಡುವ ಮೂಲಕ ರಾಸಾಯನಿಕ ಬಳಕೆ ಕಡಿಮೆ ಮಾಡಬೇಕು. ರಾಸಾಯನಿಕ ಬಳಕೆಯಲ್ಲಿ ಸಮತೋಲನ ಬಳಕೆ ಮಾಡುತ್ತಿಲ್ಲ. ಭಾರತದ ಮಣ್ಣಿನಲ್ಲಿ ನೈಟ್ರೋಜನ್‌, ರಂಜಕ, ಪೊಟ್ಯಾಸಿಯಂ ಹಾಗೂ ಮಧ್ಯಮ ಪೋಷಕಾಂಶಗಳ ಕೊರತೆಯಿದೆ. ಅದನ್ನು ಸರಿಪಡಿಸುವಲ್ಲಿ ರೈತರು ಮುಂದಾಗಬೇಕೆಂದರು. ರಾಸಾಯನಿಕದ ಜೊತೆಗೆ ಕೊಟ್ಟಿಗೆ ಗೊಬ್ಬರವನ್ನು ಸಮಪ್ರಮಾಣದ ಬಳಸಿದ್ದಲ್ಲಿ ಯಾವುದೇ ಹಾನಿಯಿಲ್ಲ. ಯಾವ ಮಣ್ಣಿನಲ್ಲಿ ಯಾವ ಬೆಳೆ, ಎಷ್ಟು ಬೆಳೆ ಎಂಬುದನ್ನು ತಿಳಿದುಕೊಳ್ಳಬೇಕೆಂದರು.

ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ಜಿ.ಬಿ. ಗೌಡಪ್ಪಗೋಳ ಮಾತನಾಡಿ, ಸ್ವಾತಂತ್ರ್ಯದ ನಂತರ ಆಹಾರದ ಕೊರತೆ ನೀಗಿಸಲು ರಚಿಸಿದ ಹೊಸ ಕೃಷಿ ನೀತಿ ದೊಡ್ಡ ಕ್ರಾಂತಿ ಮಾಡಿತು. ಹಳ್ಳಿಗಳಲ್ಲಿ ಈಗಲೂ ಶೇ.50ರಷ್ಟು ಹೆಚ್ಚು ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಯಥೇತ್ಛವಾಗಿ ರಸಾಯನಿಕ ಬಳಕೆಯಿಂದ ಮಣ್ಣು ಮೂಲ ಗುಣವನ್ನು ಕಳೆದುಕೊಳ್ಳುತ್ತಿದೆ. ದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ನದಿ, ಜಲಾಶಯ, ಕೆರೆ ಅಪಾರ ಜಲ ಸಂಪತ್ತು ಹೊಂದಿದ್ದರೂ ಸದ್ಬಳಿಕೆಯಾಗುತ್ತಿಲ್ಲ. ಎಂ.ಎಸ್‌. ಸ್ವಾಮಿನಾಥನ ವರದಿ ಅನುಷ್ಠಾನಗೊಂಡು ರೈತರ ಬಲವರ್ಧನೆಗೆ ಮುಂದಾಗಬೇಕು ಎಂದರು.

ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ವಿನಯ ಜವಳಿ, ಸಿ.ಎನ್‌. ಕರಿಕಟ್ಟಿ ಮಾತನಾಡಿದರು. ಹಾವೇರಿ ರೈತ ಉತ್ಪಾದನಾ ಸಂಘಟನೆ ಮುಖ್ಯಸ್ಥ ಚಂದ್ರಕಾಂತ ಸಂಗೂರ ಮಾತನಾಡಿದರು.

ಕೆ.ನಾಗರಾಜ, ಶಿವಪ್ರಕಾಶ ಲಿಂಬಯ್ಯಸ್ವಾಮಿಮಠ ಸೇರಿದಂತೆ ಮೊದಲಾದವರು ಇದ್ದರು.

ಸರಕಾರ ಸಾಧನೆ ಮಾಡಿದವರಿಗೆ ಭಾರತ ರತ್ನ ನೀಡಿ ಗೌರವಿಸುತ್ತಿದೆ. ಅದೇ ರೀತಿ ಹಸಿರು ಕ್ರಾಂತಿ ಹರಿಕಾರ ಎಂದು ಗುರುತಿಸಿಕೊಂಡಿರುವ ಸ್ವಾಮಿನಾಥನ್‌ ಅವರಿಗೆ ಭಾರತ ರತ್ನ ನೀಡಬೇಕಾಗಿತ್ತು. ಆದರೆ, ಇದುವರೆಗೂ ಸರಕಾರದ ಕಣ್ಣಿಗೆ ಸ್ವಾಮಿನಾಥನ್‌ ಅವರ ಸಾಧನೆ ಬಿದ್ದಿಲ್ಲ ಅನ್ನಿಸುತ್ತಿದೆ. ಇಂಥವರಿಗೆ ಪ್ರಶಸ್ತಿ ಸಿಗಬೇಕೆಂದು ಹನುಮನಟ್ಟಿ ಕೃಷಿ ಮಹಾವಿದ್ಯಾಲಯದ ಡೀನ್‌ ಚಿದಾನಂದ ಮನಸೂರ ಹೇಳಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.