![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, May 18, 2022, 3:48 PM IST
ಹುಬ್ಬಳ್ಳಿ: ಬೇಡ ಜಂಗಮ ಸಮುದಾಯಕ್ಕೆ ಸಂವಿಧಾನ ಬದ್ಧವಾಗಿ ದೊರೆಯಬೇಕಾದ ಮೀಸಲಾತಿ ಸೌಲಭ್ಯ ಸರಕಾರ ಕಲ್ಪಿಸಬೇಕು ಹಾಗೂ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ದಾಖಲಾದ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ತಿಪಟೂರು ರುದ್ರಮುನಿ ಸ್ವಾಮೀಜಿ ಆಗ್ರಹಿಸಿದರು.
ಬುಧವಾರ ಇಲ್ಲಿನ ಮೂರುಸಾವಿರಮಠದ ಶಾಲಾ ಆವರಣದ ಸಭಾಭವನದಲ್ಲಿ ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದಿಂದ ರಾಜ್ಯದ ವಿವಿಧ ಭಾಗಗಳ ಮಠಾಧೀಶರು ನಡೆಸಿದ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸರಕಾರ ನಮ್ಮ ನ್ಯಾಯ ಬದ್ಧವಾದ ಬೇಡಿಕೆ ಈಡೇರಿಸಬೇಕು ಹಾಗೂ ನಮಗೆ ಸಿಗಬೇಕಾದ ಸವಲತ್ತುಗಳನ್ನು ಒದಗಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಎಲ್ಲಾ ಮಠಾಧೀಶರು ಬೇಡ ಜಂಗಮ ಚಳವಳಿ ನಡೆಸಲಾಗುವುದು ಎಂದರು.
ನಮ್ಮ ನ್ಯಾಯ ಪರವಾದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಾಗೂ ಸಮಾಜದ ಧ್ವನಿ ಎತ್ತುವ ಸಲುವಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಂದ ಮಠಾಧೀಶರು ಕಣಕ್ಕಿಳಿಯಲಿದ್ದಾರೆ. ಈ ಕುರಿತು ಸಿದ್ಧತೆ ಮಾಡಿದ್ದು, ರಾಜಕೀಯ ಪಕ್ಷದ ಪರವಾಗಿ ನಿಲ್ಲಬೇಕೋ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಒಂದು ವೇಳೆ ಸರಕಾರ ನಮ್ಮ ಮೀಸಲಾತಿ ಬೇಡಿಕೆಗೆ ಸ್ಪಂದಿಸಿದರು ಕೂಡ ಮಠಾಧೀಶರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದರು.
ಇದನ್ನೂ ಓದಿ : ಕೆಜಿಎಫ್ 2 ಚಿತ್ರ 1,200 ಕೋಟಿ ರೂ. ಕ್ಲಬ್ ಗೆ: ಅಮೆಜಾನ್ ಪ್ರೈಮ್ ನಲ್ಲೂ ಸಿನಿಮಾ ವೀಕ್ಷಿಸಿ
ಬೇಡ ಜಂಗಮರಿಗೆ ಮೀಸಲಾತಿ ಬೇಡ ಎನ್ನುವುದಕ್ಕೆ ದಿ. ಡಾ. ಎಂ.ಎಂ. ಕಲಬುರ್ಗಿ ಅವರು ನಮ್ಮ ಸಮಾಜದವರಲ್ಲ. ಹೀಗಾಗಿ ಅವರು ಹಿಂದೊಮ್ಮೆ ಸಾರ್ವಜನಿಕವಾಗಿ ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದರು.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.