ರಾಜ್ಯಕ್ಕೆ ಟಾಟಾ ಸೆಮಿ ಕಂಡಕ್ಟರ್ ಸೆಳೆಯಲು ಬೇಕಿದೆ ಇಚ್ಛಾಶಕ್ತಿ

ತೆಲಂಗಾಣ-ತಮಿಳುನಾಡಿನಿಂದ ಇದೆ ಪೈಪೋಟಿ

Team Udayavani, Apr 25, 2022, 10:06 AM IST

4

ಹುಬ್ಬಳ್ಳಿ: ಟಾಟಾ ಕಂಪೆನಿ ಸೆಮಿಕಂಡಕ್ಟರ್‌ ಅಸೆಂಬ್ಲಿ ಮತ್ತು ಪರೀಕ್ಷೆ ಯುನಿಟ್‌ ನ್ನು ಸ್ಥಾಪಿಸಲು ಮುಂದಾಗಿದ್ದು, ಕರ್ನಾಟಕದ ಸೇರಿದಂತೆ ದಕ್ಷಿಣದ ಮೂರು ರಾಜ್ಯಗಳಲ್ಲಿ ಆಸಕ್ತಿ ಹೊಂದಿದೆ. ರಾಜ್ಯಕ್ಕೆ ಇದನ್ನು ಆಕರ್ಷಿಸುವ ನಿಟ್ಟಿನಲ್ಲಿ ಸರಕಾರ ಆಸಕ್ತಿ ತೋರಬೇಕಾಗಿದ್ದು, ಇತರೆ ಎರಡು ರಾಜ್ಯಗಳ ಪೈಪೋಟಿಯನ್ನು ಮೆಟ್ಟಿ ನಿಂತು ಕಂಪೆನಿ ಇಲ್ಲಿಯೇ ನೆಲೆಗೊಳ್ಳುವ ನಿಟ್ಟಿನಲ್ಲಿ ಆಕರ್ಷಣಿಯ ಕ್ರಮಗಳಿಗೆ ಮುಂದಾಗಬೇಕಾಗಿದೆ.

ಸಾಫ್ಟ್‌ವೇರ್‌ನಲ್ಲಿ ಟಿಸಿಎಸ್‌ ಮೂಲಕ ತನ್ನದೇ ಖ್ಯಾತಿ ಹೊಂದಿರುವ ಟಾಟಾ ಕಂಪೆನಿ ಹಾರ್ಡ್‌ವೇರ್‌ ಉತ್ಪನ್ನಗಳತ್ತ ಆಸಕ್ತಿ ತೋರಿದ್ದು, ಇದರ ಭಾಗವಾಗಿ ಸೆಮಿಕಂಡಕ್ಟರ್‌ ಘಟಕ ಆರಂಭಕ್ಕೆ ಮುಂದಾಗಿದೆ. ಇದಕ್ಕಾಗಿ ದಕ್ಷಿಣದ ಮೂರು ರಾಜ್ಯಗಳಲ್ಲಿ ಯಾವುದಾದರು ಒಂದು ರಾಜ್ಯದಲ್ಲಿ ಹೂಡಿಕೆ ಮಾಡಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಂಪೆನಿ ಕರ್ನಾಟಕ, ತೆಲಂಗಾಣ ಹಾಗೂ ತಮಿಳುನಾಡು ಸರಕಾರಗಳೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಆಶಯವಾದ ಮೇಕ್‌ ಇನ್‌ ಇಂಡಿಯಾ ಪರಿಕಲ್ಪನೆಯಡಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಿಸಿಕೊಂಡು, ವಿವಿಧ ಉತ್ಪನ್ನಗಳಿಗೆ ಅಗತ್ಯವಾಗಿರುವ ಸೆಮಿಕಂಡಕ್ಟರ್‌ ಚಿಪ್‌ಗ್ಳ ಉತ್ಪಾದನೆಗೆ ಮುಂದಾಗಿದೆ. ಸೆಮಿಕಂಡಕ್ಟರ್‌ ಚಿಪ್‌ ಗಳ ವಿಚಾರದಲ್ಲಿ ಭಾರತ ಚೀನಾ ಸೇರಿದಂತೆ ಕೆಲ ದೇಶಗಳ ಮೇಲೆ ಅವಲಂಬನೆಯಾಗಿದ್ದು, ಅದರ ಬದಲು ಇದರ ವಿಚಾರದಲ್ಲಿ ಆತ್ಮನಿರ್ಭರತೆ ಹೊಂದಬೇಕೆಂಬುದು ಕೇಂದ್ರ ಸರಕಾರದ ನಿಲುವಾಗಿದೆ. ಅದಕ್ಕೆ ಪೂರಕವಾದ ಕ್ರಮಗಳು ನಡೆಯುತ್ತಿವೆ.

300 ಮಿಲಿಯನ್‌ ಡಾಲರ್‌ ಹೂಡಿಕೆ? ಟಾಟಾ ಕಂಪೆನಿ ಸೆಮಿಕಂಡಕ್ಟರ್‌ ಅಸೆಂಬ್ಲಿ ಮತ್ತು ಪರೀಕ್ಷೆ ಯುನಿಟ್‌ ಆರಂಭಕ್ಕೆ ಅದಕ್ಕೆ ಪೂರಕವಾದ ಉದ್ಯಮಕ್ಕಾಗಿ ಸುಮಾರು 300 ಮಿಲಿಯನ್‌ ಡಾಲರ್‌ ನಷ್ಟು ಹಣ ಹೂಡಿಕೆಗೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಇದರ ಅಡಿಯಲ್ಲಿ ಸೆಮಿಕಂಡಕ್ಟರ್‌ ಅಸೆಂಬ್ಲಿ, ಟೆಸ್ಟ್‌ ಯುನಿಟ್‌, ಪ್ಯಾಕೇಜಿಂಗ್‌, ಸಿಲಿಕಾನ್‌ ವೆಫರ್, ಸೆಮಿಕಂಡಕ್ಟರ್‌ ಚಿಪ್‌ಗ್ಳನ್ನು ತಯಾರಿಸಲು ಯೋಜಿಸಲಾಗಿದೆ.

ಸೆಮಿಕಂಡಕ್ಟರ್‌ ಅಸೆಂಬ್ಲಿ ಮತ್ತು ಪರೀಕ್ಷೆ ಯುನಿಟ್‌ ಆರಂಭವಾದರೆ ಸುಮಾರು ನಾಲ್ಕು ಸಾವಿರ ಜನರಿಗೆ ಉದ್ಯೋಗ ದೊರೆಯುವ ಸಾಧ್ಯತೆ ಇದ್ದು, ಇದರಿಂದ ಪರೋಕ್ಷವಾಗಿ ಇನ್ನಷ್ಟು ಉದ್ಯೋಗ ಸೃಷ್ಟಿಯ ಜತೆಗೆ ಆರ್ಥಿಕ ಬೆಳವಣಿಗೆ, ಪೂರಕ ಉದ್ಯಮಗಳ ಆಕರ್ಷಣೆಗೆ ಸಹಕಾರಿ ಆಗಲಿದೆ. ಸೆಮಿಕಂಡಕ್ಟರ್‌ ಚಿಪ್‌ ತಯಾರಿಕೆ ನಿಟ್ಟಿನಲ್ಲಿ ರಾಜ್ಯ ವಿಶ್ವದ ಗಮನ ಸೆಳೆಯುವ ಸಾಧ್ಯತೆ ಇದೆ.

ಆಕರ್ಷಣೆ ಇಚ್ಛಾಶಕ್ತಿ ಅವಶ್ಯ: ಟಾಟಾ ಕಂಪೆನಿಯವರು ಸೆಮಿಕಂಡಕ್ಟರ್‌ ಅಸೆಂಬ್ಲಿ ಮತ್ತು ಪರೀಕ್ಷೆ ಯುನಿಟ್‌ ಸ್ಥಾಪನೆ ನಿಟ್ಟಿನಲ್ಲಿ ಕರ್ನಾಟಕ, ತೆಲಂಗಾಣ, ತಮಿಳುನಾಡು ರಾಜ್ಯ ಸರಕಾರಗಳೊಂದಿಗೆ ಮಾತುಕತೆ ನಡೆಸಿದ್ದು, ಯಾವ ರಾಜ್ಯದಲ್ಲಿ ನೆಲೆಗೊಳ್ಳುವುದು ಎಂಬುದನ್ನು ಇನ್ನು ಖಚಿತ ಪಡಿಸಿಲ್ಲ ಎನ್ನಲಾಗುತ್ತಿದೆ.

ಘಟಕ ಆರಂಭಕ್ಕೆ ಭೂಮಿ, ಮೂಲಭೂತ ಸೌಕರ್ಯ, ರಿಯಾಯಿತಿ, ಸಬ್ಸಿಡಿ, ಉದ್ಯಮಸ್ನೇಹಿ ಹಾಗೂ ಶಾಂತಿಯುತ ವಾತಾವರಣದ ಸ್ಪಷ್ಟ ಭರವಸೆ ಎಲ್ಲಿ ದೊರೆಯುತ್ತದೆಯೋ ಅಲ್ಲಿ ಸಾಮಾನ್ಯವಾಗಿ ಉದ್ಯಮ ವಲಯ ನೆಲೆಗೊಳ್ಳಲು ಇಚ್ಛಿಸುತ್ತವೆ. ಇದೀಗ ಟಾಟಾ ಕಂಪೆನಿಯೂ ಮೂರು ರಾಜ್ಯಗಳೊಂದಿಗೆ ಚರ್ಚಿಸಿದ್ದು, ಎಲ್ಲಿ ತನಗೆ ಹೆಚ್ಚಿನ ಸೌಲಭ್ಯ ದೊರೆಯುತ್ತದೆಯೋ ಅಲ್ಲಿ ಉದ್ಯಮ ಆರಂಭಿಸಲು ಮುಂದಾಗಲಿದೆ.

ಉದ್ಯಮಗಳನ್ನು ಸೆಳೆಯುವ ನಿಟ್ಟಿನಲ್ಲಿ ಈ ಹಿಂದೆ ಅವಿಭಜಿತ ಆಂಧ್ರಪ್ರದೇಶ ಆಕ್ರಮಣಕಾರಿ ನೀತಿ ಅನುಸರಿಸುವ ಮೂಲಕ ಉದ್ಯಮಗಳನ್ನು ತನ್ನತ್ತ ಸೆಳೆಯುತ್ತಿತ್ತು. ಆಂಧ್ರದಿಂದ ಪ್ರತ್ಯೇಕಗೊಂಡ ತೆಲಂಗಾಣ ರಾಜ್ಯ ಇದೀಗ ಅದೇ ಆಕ್ರಮಕಾರಿ ನೀತಿಗೆ ಮುಂದಾಗಿದ್ದು, ಉದ್ಯಮಗಳನ್ನು ಆಷರ್ಕಿಸುವ ನಿಟ್ಟಿನಲ್ಲಿ ವಿವಿಧ ಸೌಲಭ್ಯ, ರಿಯಾಯ್ತಿಗಳನ್ನು ನೀಡತೊಡಗಿದೆ. ತಮಿಳುನಾಡು ಸಹ ತನ್ನದೇ ನಿಟ್ಟಿನಲ್ಲಿ ಉದ್ಯಮಗಳ ಆಕರ್ಷಣೆಗೆ ಮುಂದಾಗಿದ್ದು, ಇತ್ತೀಚೆಗೆ ಹೊಸೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಉದ್ಯಮ ಹೂಡಿಕೆ ಆಕರ್ಷಣೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಗಳನ್ನು ಇರಿಸುವ ಮೂಲಕ ಗಮನ ಸೆಳೆಯುತ್ತಿದೆ.

ಉದ್ಯಮಸ್ನೇಹಿ, ಉದ್ಯಮಿಗಳ ನೆಚ್ಚಿನ ತಾಣ ಕರ್ನಾಟಕ, ವಿದೇಶಿ ನೇರ ಹೂಡಿಕೆಯಲ್ಲಿ ದೇಶದಲ್ಲೇ ನಂಬರ್‌ ಒನ್‌ ಸ್ಥಾನದಲ್ಲಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದೇವೆ. ಆದರೆ, ನಿರೀಕ್ಷಿತ ಪ್ರಮಾಣ ಉದ್ಯಮಗಳ ಆಗಮನ ಆಗುತ್ತಿಲ್ಲ. ಇನ್ವೆಸ್ಟ್‌ ಕರ್ನಾಟಕ, ಜಾಗತಿಕ ಹೂಡಿಕೆದಾರರ ಸಮಾವೇಶಗಳನ್ನು ಮಾಡಿದರೂ ಒಪ್ಪಂದಕ್ಕೆ ಸಹಿ ಹಾಕಿದ ಅದೆಷ್ಟೋ ಕಂಪೆನಿಗಳು ಇನ್ನು ರಾಜ್ಯ ಕಡೆ ಮುಖ ಮಾಡಿಲ್ಲ. ನೂತನ ಕೈಗಾರಿಕಾ ನೀತಿ(2020-25)ಬೆಂಗಳೂರು ಹೊರತಾದ ಪ್ರದೇಶದಲ್ಲಿ ಉದ್ಯಮಕ್ಕೆ ಉತ್ತೇಜನ ಎಂದಿದ್ದರೂ ನಿರೀಕ್ಷಿತ ಫಲ ಸಿಕ್ಕಿಲ್ಲ. 2009-10ರ ಸುಮಾರಿಗೆ ಬಿಜೆಪಿ ಸರಕಾರದ ಹೊಸತನದಲ್ಲಿ ನ್ಯಾನೋ ಕಾರು ತಯಾರಿಕಾ ಘಟಕ ಹುಬ್ಬಳ್ಳಿ-ಧಾರವಾಡಕ್ಕೆ ಇನ್ನೇನು ಬಂದೇ ಬಿಟ್ಟಿತು ಎಂಬ ಅಬ್ಬರ ತೋರಿ ಬಂದಿತ್ತು. ಉದ್ಯಮದಲ್ಲಿ ದೊಡ್ಡ ನೆಗೆತ ಕಂಡಿದೆ ಎಂದೇ ಬಿಂಬಿಸಲಾಗಿತ್ತು. ಆದರೆ, ಭೂಮಿ ಲಭ್ಯತೆ ಇನ್ನಿತರ ಕಾರಣದಿಂದ ಅದು ಬರಲೇ ಇಲ್ಲ. ಇದಾದ ನಂತರ ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಹಿರೋ ಮೋಟಾರ್ ಹುಬ್ಬಳ್ಳಿ-ಧಾರವಾಡಕ್ಕೆ ಬರಲಿದೆ ಈ ನಿಟ್ಟಿನಲ್ಲಿ ಮಹತ್ವದ ಮಾತುಕತೆಗಳು ಆಗಿವೆ ಎಂದು ಹೇಳಲಾಗಿತ್ತಾದರೂ, ಅದು ಕೂಡ ಬರಲೇ ಇಲ್ಲ. ಇದೀಗ ರಾಜ್ಯಕ್ಕೆ ಟಾಟಾ ಸೆಮಿಕಂಡಕ್ಟರ್‌ ಅಸೆಂಬ್ಲಿ ಮತ್ತು ಪರೀಕ್ಷಾ ಯುನಿಟ್‌ ಆರಂಭದ ಚರ್ಚೆ ನಡೆದಿದ್ದು, ರಾಜ್ಯ ಸರಕಾರ ಪೈಪೋಟಿಯಲ್ಲಿರುವ ಎರಡು ರಾಜ್ಯಗಳಗಿಂತ ಒಂದು ಹೆಜ್ಜೆ ಮುಂದೆ ಹೋಗುವ ಮೂಲಕ ಕಂಪೆನಿಯನ್ನು ಆಕರ್ಷಿಸುವ ನಿಟ್ಟಿನಲ್ಲಿ ಇತ್ಛಶಕ್ತಿ ಪ್ರದರ್ಶಿಸಬೇಕಿದೆ. ಇದರಿಂದ ರಾಜ್ಯದಲ್ಲಿ ಉದ್ಯಮದ ನೆಗೆತ ಜತೆಗೆ ಉದ್ಯೋವಕಾಶ ಸೃಷ್ಟಿ, ಆರ್ಥಿಕ ಬೆಳವಣಿಗೆಗೆ ಮಹತ್ವದ ಕೊಡುಗೆ ದೊರೆಯಲಿದೆ.

ಟಾಟಾ ಸೆಮಿಕಂಡಕ್ಟರ್‌ ಅಸೆಂಬ್ಲಿ ಮತ್ತು ಪರೀಕ್ಷೆ ಯುನಿಟ್‌ ಸ್ಥಾಪನೆಗೆ ಕಂಪೆನಿ ರಾಜ್ಯ ಸರಕಾರದೊಂದಿಗೆ ಚರ್ಚಿಸಿದೆ. ನಮ್ಮ ರಾಜ್ಯವಲ್ಲದೆ ನೆರೆಯ ತೆಲಂಗಾಣ, ತಮಿಳುನಾಡು ಜತೆಗೂ ಚರ್ಚಿಸಿದೆ. ರಾಜ್ಯದಲ್ಲಿ ಉದ್ಯಮ ಸ್ನೇಹಿ ವಾತಾವರಣ ಇದ್ದು, ಟಾಟಾ ಸೆಮಿಕಂಡಕ್ಟರ್‌ ರಾಜ್ಯದಲ್ಲಿ ನೆಲೆಗೊಳ್ಳುವ ಕುರಿತು ಆಶಾಭಾವನೆ ಹೊಂದಿದ್ದೇವೆ. –ಮುರುಗೇಶ ನಿರಾಣಿ, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ      

ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.