ಅಮೃತ ಸರೋವರದಲ್ಲಿ ಭ್ರಷ್ಟಾಚಾರದ ವಿಷ?

ಎನ್‌ಎಂಆರ್‌ ನಲ್ಲಿ ಈಗಾಗಲೆ ಕೂಲಿ ಮೊತ್ತ 1,49,247 ರೂ. ಖರ್ಚು ಹಾಕಲಾಗಿದೆ

Team Udayavani, Sep 3, 2022, 11:24 AM IST

ಅಮೃತ ಸರೋವರದಲ್ಲಿ ಭ್ರಷ್ಟಾಚಾರದ ವಿಷ?

ಕುಂದಗೋಳ: ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮದ ಅಂಗವಾಗಿ ಮುಖ್ಯಮಂತ್ರಿಗಳು ಅಮೃತ ಸರೋವರ ಯೋಜನೆ ಮೂಲಕ ಕೆರೆಗಳ ಪುನಶ್ಚೇತನಕ್ಕೆ ಪ್ರತಿ ಕೆರೆಗೆ 39 ಲಕ್ಷ ರೂ. ಬಿಡುಗಡೆಗೊಳಿಸಿದ್ದಾರೆ. ಆದರೆ ತಾಲೂಕಿನ ಗುಡೇನಕಟ್ಟಿ ಗ್ರಾಪಂ ವ್ಯಾಪ್ತಿಯ ಅಲ್ಲಾಪುರ ಕೆರೆ ಅಭಿವೃದ್ಧಿಗೊಳಿಸದೆ 26 ಲಕ್ಷ ರೂ. ಸಾಮಗ್ರಿ ವೆಚ್ಚ ಹಾಕಲಾಗಿದೆ ಎಂಬ ದೂರು ಕೇಳಿಬರುತ್ತಿದೆ.

ಕೆರೆಗಳು ಅಭಿವೃದ್ಧಿಗೊಂಡರೆ ಅಂತರ್ಜಲಮಟ್ಟ ಹೆಚ್ಚಿ ರೈತರಿಗೆ-ಸಾರ್ವಜನಿಕರಿಗೆ ಅನುಕೂಲವಾಗು ತ್ತದೆ. ಈ ದೃಷ್ಟಿಕೋನದಿಂದ ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಅಮೃತ ಸರೋವರ ಯೋಜನೆಯ ಅನುದಾನ ತಾಲೂಕಿನಲ್ಲಿ ನುಂಗುವವರ ಪಾಲಾಗುತ್ತಿದೆ ಎಂಬ ಆರೋಪ ದಟ್ಟವಾಗುತ್ತಿದೆ.

ಆ.15ರಂದು ಕಾಮಗಾರಿಗಳನ್ನು ಪೂರ್ಣಗೊಳಿಸಿ ಅಲ್ಲಿ ಧ್ವಜಾರೋಹಣ ಮಾಡಬೇಕೆಂಬುದು ಸಿಎಂ ಅವರ ಕನಸಾಗಿತ್ತು. ಅದರಂತೆ ಈಗಾಗಲೆ ಈ ಗ್ರಾಮದಲ್ಲಿ ಅರೆಬರೆ ಕೆಲಸ ಮಾಡಿ ಎನ್‌ಎಂಆರ್‌ ನಲ್ಲಿ ಈಗಾಗಲೆ ಕೂಲಿ ಮೊತ್ತ 1,49,247 ರೂ. ಖರ್ಚು ಹಾಕಲಾಗಿದೆ. ಅದರಂತೆ ಸಾಮಗ್ರಿಗಳ ಮೊತ್ತ 26 ಲಕ್ಷ ರೂ.ಗಳನ್ನು ಖರ್ಚು ಹಾಕಿದ್ದಾರೆ. ಆದರೆ ನಿಯಮಗಳನ್ನು ಗಾಳಿಗೆ ತೂರಿ ಮನಬಂದಂತೆ ಹಣವನ್ನು ಖರ್ಚು ಹಾಕಿರುವುದು ಬೆಳಕಿಗೆ ಬಂದಿದೆ. ತಾಪಂ ಇಒ ಡಾ| ಮಹೇಶ ಕುರಿಯವರನ್ನು ಮಾತನಾಡಿಸಿದಾಗ, ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ.

ಪಿಡಿಒ ಹಾಗೂ ಟಿಎಇ ಅವರಿಗೆ ಈ ವಿಷಯ ಕುರಿತು ಉತ್ತರ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಹೇಳಿದರು. ಪಿಆರ್‌ಇಡಿ ಸಹಾಯಕ ಅಧಿಕಾರಿ ಎಸ್‌.ಆರ್‌. ವೀರಕರ ಅವರನ್ನು ಮಾತನಾಡಿಸಿದಾಗ, ಈ ವಿಷಯ ಕುರಿತು ಯಾವುದೇ ಮಾಹಿತಿ ನಮ್ಮ ಬಳಿ ಇಲ್ಲ ಎಂದು ಹಾರಿಕೆ ಉತ್ತರ ನೀಡಿದರು. ಗ್ರಾಪಂ ಅಧ್ಯಕ್ಷ ಚಿದಾನಂದ ಕುಸುಗಲ್‌ ಪ್ರತಿಕ್ರಿಯಿಸಿ, ಪಿಡಿಓ ಹಾಗೂ ಎನ್‌ಆರ್‌ಜಿ ತಾಂತ್ರಿಕ ಸಹಾಯಕ ಅಧಿಕಾರಿಗಳು ನನ್ನ ಗಮನಕ್ಕೆ ತರದೆ ಈ ರೀತಿ ಖರ್ಚು ಹಾಕಿದ್ದಾರೆ ಎಂದು ಹೇಳಿದರು.

ಸರ್ಕಾರ ಅಂತರ್ಜಲ ಮಟ್ಟ ವೃದ್ಧಿಸಲು ಅಮೃತ ಯೋಜನೆಯಡಿ ಕೆರೆಗಳ ಅಭಿವೃದ್ಧಿªಗೆ ಸಾವಿರಾರು ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಇದು ಎಷ್ಟರಮಟ್ಟಿಗೆ ಸದುಪಯೋಗವಾಗುತ್ತಿದೆ, ಸದ್ಬಳಕೆಯಾಗುತ್ತಿದೆ ಎಂಬುದು ಯಕ್ಷಪ್ರಶ್ನೆಯಾಗಿದ್ದು, ಸೂಕ್ತ ಮೇಲುಸ್ತುವಾರಿಯಾಗಬೇಕಿದೆ.

ಶೀತಲ ಎಸ್.ಎಂ

ಟಾಪ್ ನ್ಯೂಸ್

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.