MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ
Team Udayavani, Oct 3, 2024, 11:05 AM IST
ಹುಬ್ಬಳ್ಳಿ: ಸಿದ್ದರಾಮಯ್ಯ ನನ್ನ ಸ್ನೇಹಿತರು ಅವರಿಗೆ ಕೈ ಮುಗಿದು ಕೇಳುವೆ, ಮುಡಾದಲ್ಲಿ ಕೈ-ಕಾಲು, ಬಾಯಿ ಸುಟ್ಟುಕೊಂಡಿದ್ದು ಸಾಕು. ಒಂದು ತಪ್ಪುಮುಚ್ಚಲು 50 ತಪ್ಪು ಮಾಡಿದ್ದೀರಿ ಇನ್ನಾದರು ರಾಜೀನಾಮೆ ನೀಡಿ ಮಾದರಿಯಾಗಿ ಎಂದು ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ತಿಳಿಸಿದರು.
ಇಲ್ಲಿನ ಸದ್ಗುರು ಸಿದ್ಧಾರೂಢಸ್ವಾಮಿ ಮಠಕ್ಕೆ ಭೇಟಿ ನೀಡಿ ಉಭಯ ಶ್ರೀಗಳ ಗದ್ದುಗೆ ದರ್ಶನ ಪಢದು, ಶ್ರೀಮಠದ ಟ್ರಸ್ಟ್ ಕಮಿಟಿಯಿಂದ ಸನ್ಮಾನ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಿದ್ದರಾಮಯ್ಯ, ನಾನು ಜನತಾ ಪರಿವಾರದಿಂದ ಬಂದವರು. ಮುಡಾ ಹಗರಣದಲ್ಲಿ ಆರಂಭದಲ್ಲಿಯೇ ತಪ್ಪು ಒಪ್ಪಿಕೊಂಡಿದ್ದರೆ ಸಿಎಂಗೆ ಈ ಸ್ಥಿತಿ ಬರುತ್ತಿದ್ದಿಲ್ಲ.
ಸಿದ್ದರಾಮಯ್ಯ ಅವರಂತಹ ನಾಯಕರಿಗೆ ಇದು ಶೋಭೆ ತರುವುದಿಲ್ಲ ಎಂದರು.
ಬಿಜೆಪಿಯಲ್ಲಿ ಯಾವ ಬಣ ರಾಜಕೀಯ ಇಲ್ಲ. ಸಣ್ಣಪುಟ್ಟ ಭಿನ್ನಾಭಿಪ್ರಾಯ ಸಹಜ ಪಕ್ಷ ವರಿಷ್ಠರು ಅದನ್ನು ಸರಿಪಡಿಸುತ್ತಾರೆ.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಯಾಕೆ ಹೀಗೆ ಮಾತನಾಡುತ್ತಿದ್ದಾರೋ ಗೊತ್ತಿಲ್ಲ. ಸಿಟ್ಟಿನಲ್ಲಿ ಆಡಿದ ಮಾತು ವಾಪಸ್ ಬರುವುದಿಲ್ಲ. ಪಕ್ಷಕ್ಕೆ ಮುಜುಗರ ತರುವ, ಪರಿಣಾಮ ಬೀರುವ ಕೆಲಸ ಮಾಡಲಿದೆ ಎಂದು ತಿಳಿದುಕೊಳ್ಳಲಿ.
ಸಚಿವ ದಿನೇಶ ಗುಂಡೂರಾವ್ ವೀರಸಾರ್ವಕರ ಅವರ ಬಗ್ಗೆ ಏನು ಮಾತನಾಡಿದ್ದಾರೋ ಗೊತ್ತಿಲ್ಲ. ಆದರೆ ಏನಾದರೂ ಮಾತನಾಡುವ ಮುನ್ನ ಇತಿಹಾಸ ಅರಿತು ಮಾತನಾಡಿದರೆ ಒಳಿತು.
ಕರ್ನಾಟಕದಲ್ಲಿ ಬಾಕಿ ಇರುವ ಹಳೇ ರೈಲ್ವೆ ಯೋಜನೆಗಳ ಪೂರ್ಣಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ.
ಅಂದಾಜು 43 ಸಾವಿರ ಕೋಟಿ ರೂ.ಗಳಲ್ಲಿ ರಾಜ್ಯದ ಬಾಕಿ ರೈಲ್ವೆ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದ ಜನತೆಗೆ ಉತ್ತಮ ಹಾಗೂ ಹೆಚ್ಚಿನ ರೈಲ್ವೆ ಸೌಲಭ್ಯ ಸಿಗಬೇಕೆಂಬುದು ಪ್ರಧಾನಿ ನರೇಂದ್ರ ಮೋದಿಯವರ ಆಶಯವಾಗಿದೆ.
ಹುಬ್ಬಳ್ಳಿಯ ಶ್ರೀ ಸಿದ್ದರೂಢಸ್ವಾಮೀಜಿ ರೈಲು ನಿಲ್ದಾಣದಲ್ಲಿ ಸದ್ಗುರು ಸಿದ್ದಾರೂಢಸ್ವಾಮೀಜಿ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ: Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ
Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ
ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಒಪ್ಪಿಗೆ: ಜನ್ಮ ಇರುವವರೆಗೂ ಗಂಗಾವತಿ ಮರೆಯಲ್ಲ: ಶಾಸಕ ರೆಡ್ಡಿ
Mysuru Dasara Utsava: 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
Mangaluru: ಬರೊಂದುಲ್ಲ.. ಮಾರ್ನೆಮಿದ ಪಿಲಿಕುಲು!
ಮಾಜಿ ಮಂತ್ರಿ ಅನ್ಸಾರಿ ಆಪ್ತರ ಮೇಲುಗೈ; ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಇಲಿಯಾಸ್ ಖಾದ್ರಿ
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.