Aland: ಹುಟ್ಟುಹಬ್ಬದ ವೇಳೆ ದ್ವೇಷದ ಕೊಲೆ; ಸಂಭ್ರಮ ದುಃಖದಲ್ಲಿ ಅಂತ್ಯ
Team Udayavani, Oct 12, 2024, 11:06 AM IST
ಆಳಂದ: ವ್ಯಕ್ತಿಯೊಬ್ಬ ತನ್ನ ಸ್ನೇಹಿತರೊಂದಿಗೆ ಆಶ್ರಮವೊಂದರ ಬಳಿ ಹುಟ್ಟುಹಬ್ಬ ಆಚರಿಸುತ್ತಿದ್ದ ಸಂದರ್ಭ ಕೊಲೆಯಾದ ಘಟನೆ ಅ.11ರ ಶುಕ್ರವಾರ ರಾತ್ರಿ ನಡೆದಿದೆ.
ಪಟ್ಟಣದ ಮಹಾತ್ಮಾ ಜ್ಯೋತಿಬಾ ಫುಲೆ ಬಡಾವಣೆಯ ನಿವಾಸಿ ಶಿವಕುಮಾರ ಸೂರ್ಯಕಾಂತ (20) (ಬಾಬುರಾವ) ದೇವನೂರ ಕೊಲೆಯಾದ ವ್ಯಕ್ತಿ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಕುಡಿದ ಮತ್ತಿನಲ್ಲಿ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಆದರೆ ಈ ಕುರಿತು ತನಿಖೆ ನಡೆದಾಗಲೇ ಸತ್ಯಾಂಶ ಹೊರಬೀಳಲಿದೆ.
ಶಿವಕುಮಾರ ಕೊಲೆ ಆಗಿರುವ ಸುದ್ದಿ ಸಾರ್ವಜನಿಕರಲ್ಲಿ ತೀವ್ರ ಆಘಾತವನ್ನು ಮೂಡಿಸಿದ್ದು, ಆತನ ಕುಟುಂಬದಲ್ಲಿ ಅಕ್ರಂದನ ಮುಗಿಲು ಮುಟ್ಟಿದೆ.
ತಕ್ಷಣವೇ ಘಟನಾ ಸ್ಥಳಕ್ಕೆ ಆಳಂದ ಪೋಲೀಸ್ ಠಾಣೆಯ ಡಿಐಎಸ್ಪಿ ಬಿ.ಆರ್. ಗೋಪಿ, ಸಿಪಿಐ ಪ್ರಕಾಶ ಯಾತನೂರ ಹಾಗೂ ಪಿ.ಐ. ಮಹಾದೇವ ಪಂಚಮುಖಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ: ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ನಂ.1
Dargah: ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾ ಧ್ವಂಸ
Kalaburagi: ಕೀಟನಾಶಕ ಸಿಂಪಡಣೆ ಮಾಡುವಾಗ ನಿರ್ಲಕ್ಷ್ಯ ವಹಿಸಿದರೆ ಕಣ್ಣಿಗೆ ಅಪಾಯ:ಡಾ.ರಾಜಶ್ರೀ
Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.