ಪುಂಡರಿಗೆ ಖಾಲಿ ನಿವೇಶನ-ರಸ್ತೆಗಳೇ ಬಾರ್‌!


Team Udayavani, Jun 13, 2022, 1:10 PM IST

9public-place

ಜೇವರ್ಗಿ: ಪಟ್ಟಣದ ಹೊರ ವಲಯದಲ್ಲಿರುವ ಖಾಲಿ ನಿವೇಶನಗಳು ಇಳಿ ಹೊತ್ತಿನಲ್ಲಿ ಪುಂಡರು ಮದ್ಯಪಾನ ಮಾಡುತ್ತಾ ಹರಟುವ ಸ್ಥಳಗಳಾಗಿವೆ.

ಪಟ್ಟಣದ ಚನ್ನೂರ ರಸ್ತೆಯಲ್ಲಿ ಬರುವ ಲೇಔಟ್‌, ವಿಜಯಪುರ ಬೈಪಾಸ್‌ ರಸ್ತೆ, ಫುಡ್‌ಪಾರ್ಕ್‌, ತಾಲೂಕು ಕ್ರೀಡಾಂಗಣ, ದೇವರಮನಿ ಲೇಔಟ್‌, ರದ್ದೇವಾಡಗಿ ಲೇಔಟ್‌ ಸೇರಿದಂತೆ ಹಲವಾರು ಖಾಲಿ ನಿವೇಶನಗಳು ಸಂಜೆ ಹೊತ್ತಲ್ಲಿ ಕುಡುಕರ ಅಡ್ಡೆಗಳಾಗಿ ಪರಿವರ್ತನೆಯಾಗಿವೆ.

ಪಟ್ಟಣದಲ್ಲಿ ಇರುವ ಮದ್ಯದ ಅಂಗಡಿಗಳ ಪೈಕಿ ಒಂಭತ್ತು ಪರವಾನಗಿ ಹೊಂದಿರುವ ಸಿಎಲ್‌ 4, ಏಳು ಪರವಾನಗಿ ಪಡೆದಿರುವ ಎರಡು ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳಿವೆ. ಕದ್ದುಮುಚ್ಚಿ ಮದ್ಯಪಾನ ಮಾಡುವವರು, ಕೆಲ ಪುಂಡರು ಅಕ್ಕಪಕ್ಕದ ಸಾರ್ವಜನಿಕ ಸ್ಥಳದ ಸಂದುಗೊಂದಿಗಳನ್ನು ಹುಡುಕುತ್ತಾರೆ. ಜನಸಂಚಾರ ಕಡಿಮೆ ಇರುವ ಅಥವಾ ಸಂದಿಗೊಂದಿಗಳಲ್ಲಿ ಕುಳಿತು ಮದ್ಯಪಾನ ಮಾಡುತ್ತಾರೆ. ಕೆಲವೊಮ್ಮೆ ರಸ್ತೆ ಪಕ್ಕದಲ್ಲೇ ಮದ್ಯಪಾನ ಮಾಡುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ.

ಕೆಲವರು ಪಟ್ಟಣದ ಹೊರ ಪ್ರದೇಶಗಳಲ್ಲಿರುವ ಜಮೀನುಗಳಲ್ಲಿ, ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ವಿಜಯಪುರ- ಕಲಬುರಗಿ ಬೈಪಾಸ್‌ಗೆ ತೆರಳಿ ಮದ್ಯಪಾನ ಮಾಡುತ್ತಿದ್ದಾರೆ. ಬೈಪಾಸ್‌ ರಸ್ತೆಯುದ್ದಕ್ಕೂ ಎಲ್ಲಿ ನೋಡಿದರಲ್ಲಿ ಮದ್ಯದ ಬಾಟಲ್‌ಗ‌ಳೇ ಕಾಣ ಸಿಗುತ್ತವೆ. ಸಂಜೆಯಾಗುವುದೇ ತಡ ಬೈಕ್‌-ಕಾರುಗಳಲ್ಲಿ ಮದ್ಯದ ಬಾಟಲ್‌ಗ‌ಳೊಂದಿಗೆ ತೆರಳಿ ಕುಡಿದು ರಸ್ತೆ ಮೇಲೆ ಬಾಟಲ್‌ ಒಡೆದು ಹಾಕಲಾಗುತ್ತಿದೆ. ಇದರಿಂದ ನಸುಕಿನ ಜಾವ ಹಾಗೂ ಸಂಜೆ ವಾಯು ವಿಹಾರಕ್ಕೆ ಹೋಗುವವರು ತೀವ್ರ ಕಿರಿಕಿರಿ ಅನುಭವಿಸುತ್ತಿದ್ದಾರೆ. ಮಹಿಳೆಯರು ಸಂಜೆ ಸಮಯದಲ್ಲಿ ಅಡ್ಡಾಡಲು ಹಿಂಜರಿಯುತ್ತಿದ್ದಾರೆ. ರಸ್ತೆ ಪಕ್ಕ ಮತ್ತು ಜಮೀನುಗಳ ಅಂಚಿನಲ್ಲಿ ಮದ್ಯದ ಬಾಟಲ್‌ಗ‌ಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದೆ.

ಪಟ್ಟಣದ ಕೆಲವು ಮಾಂಸಾಹಾರಿ, ಹೋಟೆಲ್‌, ಡಾಬಾಗಳಲ್ಲಿ ಕದ್ದುಮುಚ್ಚಿ ಹೆಚ್ಚಿನ ಬೆಲೆಯಲ್ಲಿ ಮದ್ಯ ಮಾರಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಪ್ರಜ್ಞಾವಂತರು ಆಗ್ರಹಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆಗೆ ಕಡಿವಾಣ ಹಾಕಬೇಕು. ಅಬಕಾರಿ-ಪೊಲೀಸ್‌ ಇಲಾಖೆ ಅಧಿಕಾರಿಗಳು ಗಸ್ತು ತಿರುಗಿ, ಈ ಕುರಿತು ನಿಗಾ ಇಡಬೇಕು ಎಂಬುದು ಸಾರ್ವಜನಿಕರ ಬೇಡಿಕೆಯಾಗಿದೆ.

ವಾಯುವಿಹಾರಕ್ಕೆ ಜೇವರ್ಗಿ ಪಟ್ಟಣದಲ್ಲಿ ಉದ್ಯಾನವನಗಳು ಇಲ್ಲದ ಕಾರಣ, ಜನತೆ ಫುಡ್‌ಪಾರ್ಕ್‌ ಅಥವಾ ಖಾಲಿ ನಿವೇಶನಗಳ ಕಡೆ ತೆರಳುತ್ತಾರೆ. ಆದರೆ ಅಲ್ಲಿ ಇತ್ತೀಚೆಗೆ ಕೆಲವು ಪುಂಡರ ಹಾವಳಿ ಮಿತಿಮೀರಿದೆ. ಮದ್ಯಪಾನ ಮಾಡಿ ಎಲ್ಲೆಂದರಲ್ಲಿ ಬಾಟಲ್‌ಗ‌ಳನ್ನು ಒಡೆದು ಹಾಕುತ್ತಿದ್ದಾರೆ. ಇದರಿಂದ ಮಹಿಳೆಯರು ಸಂಜೆ ಅಡ್ಡಾಡಲು ಹಿಂಜರಿಯುತ್ತಿದ್ದಾರೆ. ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು. -ಅಕ್ಬರ್‌ಸಾಬ್‌ ಮುಲ್ಲಾ, ಸ್ಥಳೀಯ.

ಫುಡ್‌ಪಾರ್ಕ್‌ ಹಾಗೂ ಕೆಲ ಖಾಲಿ ನಿವೇಶನಗಳಲ್ಲಿ ಸಂಜೆ ಹೊತ್ತಲ್ಲಿ ಪುಂಡರ ಹಾವಳಿ ಹೆಚ್ಚಾಗಿರುವ ಬಗ್ಗೆ ಮಾಹಿತಿ ಬಂದಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು. -ಸಂಗಮೇಶ ಅಂಗಡಿ, ಪಿಎಸ್‌ಐ, ಜೇವರ್ಗಿ

-ವಿಜಯಕುಮಾರ ಎಸ್‌.ಕಲ್ಲಾ

ಟಾಪ್ ನ್ಯೂಸ್

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.