![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Apr 14, 2022, 12:26 PM IST
ಶಹಾಬಾದ: ಸಮುದಾಯದ ದಮನಿತ, ನೊಂದ ಮಹಿಳೆಯರನ್ನು ಸಮಾಜಮುಖೀ ಆಗಿಸುವ ನಿಟ್ಟಿನಲ್ಲಿ ಜೀವನಜ್ಯೋತಿ ಸಂಸ್ಥೆ ಅರಿವು ಮೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯವಾದದ್ದು ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ಬುಧವಾರ ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಜೀವನ ಜ್ಯೋತಿ ಮಹಿಳಾ ಅಭಿವೃದ್ಧಿ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ 15ನೇ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ನೊಂದ ಮಹಿಳೆಯರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ, ಸವಲತ್ತು ನೀಡುವ ನಿಟ್ಟಿನಲ್ಲಿ ಸಕಲ ಕ್ರಮ ಕೈಗೊಳ್ಳಲಾಗುವುದು. ಅದಕ್ಕಾಗಿ ಸಾಮಾಜಿಕ ಸವಲತ್ತು ಹಾಗೂ ಸೂರು ನೀಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ವರದಕ್ಷಿಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಹಾಯ ಒದಗಿಸುವಲ್ಲಿ ಮಹಿಳೆಯರಿಗೆ ಕಾನೂನು ನೆರವು, ತಾತ್ಕಾಲಿಕ ಆಶ್ರಯ, ಆರ್ಥಿಕ ಪರಿಹಾರ, ತರಬೇತಿ ನೀಡಿ ಸ್ವಾವಲಂಬಿಗಳಾಗುವಂತೆ ಮಾಡಿ ಸ್ವತಂತ್ರ ಬದುಕು ಸಾಗಿಸಲು ನೆರವಾಗುವುದರ ಜೊತೆಗೆ, ಅವರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಶಕ್ತರನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರದ ಜತೆಯಾಗಿ ಸಮಾಜದ ಎಲ್ಲ ವರ್ಗದ ಜನರು ಸಹಾಯ ಹಸ್ತ ಚಾಚಬೇಕು ಎಂದರು.
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಮಾತನಾಡಿ, ಸರ್ಕಾರದಿಂದ ಮಹಿಳೆಯರಿಗಾಗಿಯೇ ಚೇತನ ಯೋಜನೆ, ಧನಶ್ರೀ, ಉದ್ಯೋಗಿನಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸಣ್ಣ ಉದ್ಯಮಗಳಿಗೆ ನಿಗಮದ ವತಿಯಿಂದ ಆರ್ಥಿಕ ಸಹಾಯ ನೀಡಲಾಗುತ್ತಿದೆ. ಈ ಎಲ್ಲ ಸವಲತ್ತುಗಳನ್ನು ಪಡೆಯಲು ಮಹಿಳೆಯರು ಮುಂದಾಗಬೇಕು ಎಂದು ಹೇಳಿದರು.
ಜೀವನ ಜ್ಯೋತಿ ಮಹಿಳಾ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಶರಣಮ್ಮ ತಳವಾರ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಅಜೀಂ ಪ್ರೇಮಜಿ ಫೌಂಡೇಶನ್ನ ರುದ್ರೇಶ ಎಸ್., ಕೆ.ಎಚ್.ಪಿ.ಟಿ ವ್ಯವಸ್ಥಾಪಕ ಶಿವಯೋಗಿ ಮಠಪತಿ, ಕೆಸಾಪ್ಸ್ ಅಧಿಕಾರಿ ಹಣಮಂತ ಜಾಧವ, ಸ್ವಸ್ತಿ ಪ್ರಾದೇಶಿಕ ಮೇಲ್ವಿಚಾರಣ ಅಧಿಕಾರಿ ಸುಭಾಷ ಗುಡದೂರ, ಕಲಬುರಗಿ ಡಾನ್ ಬಾಸ್ಕೋ ಸಂಸ್ಥೆಯ ಫಾದರ್ ಟಾಮಿ ಚಿರಾಕಲ್, ಪಿಎಸ್ಐ ಸುವರ್ಣಾ ಮಲಶೆಟ್ಟಿ, ಲತಾ ಅಲಬನೂರ್, ರಾಜಶೇಖರ ಮಾಡ್ನಲ್ ಇನ್ನಿತರರು ಇದ್ದರು.
ಇದೆ ವೇಳೆ 10 ಜನರಿಗೆ ಕೋವಿಡ್ ಲಸಿಕೆ ಹಾಕಲಾಯಿತು. 400 ಜನರ ಆರೋಗ್ಯ ತಪಾಸಣೆ ಮಾಡಲಾಯಿತು. ಅಲ್ಲದೇ 60 ಮಹಿಳೆಯರಿಗೆ ನಿಗಮದಿಂದ ಸಾಲ, ಸಹಾಯಧನ ನೀಡಲಾಯಿತು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.