ಸನ್ನತಿ ಕೇಂದ್ರದ ಗಮನ ಸೆಳೆವೆ: ಡಾ| ಜಾಧವ


Team Udayavani, Dec 20, 2021, 10:39 AM IST

6jadava

ವಾಡಿ: ಬೌದ್ಧ ಧರ್ಮದ ಇತಿಹಾಸ ತಿಳಿಯುವ ಸಂಶೋಧನೆಗೆ ಪೂರಕವಾಗಿರುವ ಸನ್ನತಿ ತಾಣದ ಅಭಿವೃದ್ಧಿಗೆ ಪುರಾತತ್ವ ಇಲಾಖೆ ಅಧಿಕಾರಿಗಳ ವರದಿ ಪಡೆದು ದೆಹಲಿಗೆ ನಿಯೋಗ ತೆರಳಿ ಕೇಂದ್ರದ ಗಮನ ಸೆಳೆಯಲಾಗುವುದು ಎಂದು ಸಂಸದ ಡಾ| ಉಮೇಶ ಜಾಧವ ಹೇಳಿದರು.

ಸನ್ನತಿ ಪ್ರದೇಶದ ಕನಗನಹಳ್ಳಿ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ವಿಶಾಲವಾದ ಬಯಲು ಪ್ರದೇಶದಲ್ಲಿ ಹರಡಿಕೊಂಡಿದ್ದ ಬುದ್ಧನ ಶಿಲಾ ಮೂರ್ತಿಗಳು, ಬುದ್ಧ ವಿಹಾರ, ಶಿಲಾ ಶಾಸನ, ಬುದ್ಧನ ಜಾಥಕ ಕಥೆಯುಳ್ಳ ಕಲಾಕೃತಿಗಳನ್ನು ಕಂಡು ಮರುಗಿದರು. ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ದೇಶದ ಬಹುದೊಡ್ಡ ಬೌದ್ಧ ಪ್ರವಾಸಿ ತಾಣವಾಗಿರುವ ಸನ್ನತಿ ಪ್ರದೇಶ ಇಷ್ಟೊತ್ತಿಗೆ ಪ್ರಪಂಚದ ಗಮನ ಸೆಳೆಯಬೇಕಿತ್ತು. ಇಲ್ಲಿನ ವಾಸ್ತವ ಸ್ಥಿತಿಗತಿ ನೋಡಿದರೆ ನೋವಾಗುತ್ತದೆ. ಮೌರ್ಯ ಸಾಮ್ರಾಜ್ಯದ ದೊರೆ, ಬೌದ್ಧ ಅನುಯಾಯಿ ಸಾಮ್ರಾಟ್‌ ಅಶೋಕ ಚಕ್ರವರ್ತಿ ಕಾಲಘಟ್ಟವನ್ನು ನೆನಪಿಸುವ ಕ್ರಿ.ಪೂ 3ನೇ ಶತಮಾನಕ್ಕೆ ಸೇರಿದ ಬೌದ್ಧ ಸ್ತೂಪ ನೆಲೆ ಕಲಬುರಗಿಯ ಸನ್ನತಿಯಲ್ಲಿದೆ ಎಂಬುದು ನನಗೆ ಗೊತ್ತಿರಲಿಲ್ಲ. ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಒಮ್ಮೆಯೂ ಈ ಕುರಿತು ಪ್ರಾಸ್ತಾಪಿಸಿಲ್ಲ. ಖುದ್ದಾಗಿ ಸ್ಥಳ ವೀಕ್ಷಿಸಿದ ನಂತರವೇ ಪ್ರದೇಶದ ಮಹತ್ವ ತಿಳಿಯಿತು ಎಂದರು.

ಬೌದ್ಧರ ಸಾಂಸ್ಕೃತಿಕ ಪರಂಪರೆ ಎತ್ತಿಹಿಡಿಯುವ ಸನ್ನತಿ ಪ್ರಗತಿ ಅತ್ಯವಶ್ಯಕವಾಗಿದೆ. ಎರಡು ಸಾವಿರ ವರ್ಷಗಳಷ್ಟು ಹಳೆಯ ಪಳೆಯುಳಿಕೆಗಳು ಇಲ್ಲಿ ದೊರೆತಿರುವುದು ಹೆಮ್ಮೆಯ ವಿಷಯ. ಇಲ್ಲಿರುವ ಬುದ್ಧನ ಶಿಲಾ ಅವಶೇಷಗಳನ್ನು ಬಿಸಿಲು, ಗಾಳಿಗೆ ಹಾಳಾಗಲು ಬಿಡುವುದಿಲ್ಲ. ಆದಷ್ಟು ಬೇಗ ಪುರಾತತ್ವ ಅಧಿಕಾರಿಗಳೊಂದಿಗೆ ಚರ್ಚಿಸಿ, ಸನ್ನತಿ ಅಭಿವೃದ್ಧಿ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯುತ್ತೇನೆ. ಸನ್ನತಿ ಪ್ರದೇಶದಲ್ಲಿ ಸ್ಥಗಿತವಾಗಿರುವ ಉಖ್ಖನನ ಮುಂದುವರಿಸಿದರೆ ಇನ್ನಷ್ಟು ಮಹತ್ವದ ಕುರುಹುಗಳು ಪತ್ತೆಯಾಗಬಹುದು. ಒಟ್ಟಿನಲ್ಲಿ ಈ ತಾಣದ ಮೇಲೆ ಪ್ರಾಮಾಣಿಕವಾಗಿ ಬೆಳಕು ಚೆಲ್ಲುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿ, ಕೂಡಲೇ ತಾಣದ ಸಮಗ್ರ ವರದಿ ಸಲ್ಲಿಸುವಂತೆ ಪ್ರವಾಸೋದ್ಯಮ ಅಧಿಕಾರಿಗಳಿಗೆ ಸೂಚಿಸಿದರು.

ಪುರಾತತ್ವ ಇಲಾಖೆ ಹಂಪಿ ವಿಭಾಗದ ಅಧೀಕ್ಷಕ ನಿಖೀಲ್‌ ದಾಸ್‌, ಸೇಡಂ ಸಹಾಯಕ ಆಯುಕ್ತೆ ಅಶ್ವಿ‌ಜಾ ಡಿ.ವಿ, ತಹಶೀಲ್ದಾರ್‌ ಉಮಾಕಾಂತ ಹಳ್ಳೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ, ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಲಿಂಗಾರೆಡ್ಡಿಗೌಡ ಬಾಸರೆಡ್ಡಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರ, ವಿಠ್ಠಲ ನಾಯಕ, ನಿವೇದಿತಾ ದಹಿಹಂಡೆ, ಗುರುಲಿಂಗ ಚಂದನ್‌, ಶಿವರಾಮ ಪವಾರ, ರಮೇಶಗೌಡ ಉಳಂಡಗೇರಾ, ಭೀಮರೆಡ್ಡಿಗೌಡ ಕುರಾಳ, ರವಿ ಕಾರಬಾರಿ, ಅರವಿಂದ ಚವ್ಹಾಣ, ವೀರಣ್ಣ ಯಾರಿ, ರಾಹುಲ್‌ ಸಿಂಧಗಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.