ಬಸವನ ಹುಳು ಭೂಮಿಯಲ್ಲಿ ಹೂತು ಹಾಕಿ


Team Udayavani, Jul 11, 2022, 12:57 PM IST

8farmers

ಚಿಂಚೋಳಿ: ತಾಲೂಕಿನ ಕೆಲವು ಗ್ರಾಮಗಳಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಮಾಡಿದ ಸೋಯಾಬಿನ್‌(ಅವರೇ)ಹೆಸರು, ಉದ್ದು ಬೆಳೆಗಳಿಗೆ ಬಸವನ ಹುಳುಗಳ ಕಾಟ ಕಂಡು ಬಂದಿದ್ದು, ರೈತರು ತಮ್ಮ ಹೊಲಗಳಿಗೆ ಹೋಗಿ ಬಸವನ ಹುಳುಗಳನ್ನು ಆಯ್ದು ಅವುಗಳನ್ನು ಭೂಮಿಯಲ್ಲಿ ಹೂತು ಹಾಕಬೇಕು ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ವೀರಶೆಟ್ಟಿ ರಾಠೊಡ ತಿಳಿಸಿದರು.

ಕೃಷಿ ಇಲಾಖೆ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಹಲಚೇರಾ, ತೇಗಲತಿಪ್ಪಿ, ಸುಂಠಾಣ, ಗಡಿಕೇಶ್ವಾರ, ಕನಕಪುರ ಗ್ರಾಮಗಳ ಹೊಲಗಳಲ್ಲಿ ಭಾರಿ ಪ್ರಮಾಣದಲ್ಲಿ ಬಸವನ ಹುಳುಗಳು ಕಂಡು ಬಂದಿದ್ದು, ಸೋಯಾಬಿನ್‌, ಹೆಸರು, ಉದ್ದು ಬೆಳೆಗಳ ಎಲೆ, ಕಾಂಡಗಳನ್ನು ತಿಂದು ಹಾಕಿವೆ ಎಂದು ಹೇಳಿದರು. ಬಸವನ ಹುಳುಗಳು ರಾತ್ರಿ ವೇಳೆ ಬೆಳೆಗಳ ಎಲೆಗಳನ್ನು ಸಂಪೂರ್ಣ ತಿಂದು ನಸುಕಿನಲ್ಲಿ ಮತ್ತೆ ಮಣ್ಣಿನಲ್ಲಿ ಹೂತುಕೊಳ್ಳುತ್ತವೆ. ಬದುಗಳಲ್ಲಿಯೂ ಹೆಚ್ಚು ಕಂಡು ಬರುತ್ತವೆ. ಬೆಳೆಗಳ ಹತ್ತಿರದಲ್ಲಿ ಮಣ್ಣಿನಲ್ಲಿ ತೂತು ಕಂಡು ಬಂದರೆ ಅವುಗಳಲ್ಲಿ ಬಸವನ ಹುಳುಗಳು ಹುದುಗಿಕೊಳ್ಳುತ್ತಿವೆ. ಆದ್ದರಿಂದ ರೈತರು ಹುಳುಗಳನ್ನು ಆಯ್ದು ಮಣ್ಣಿನಲ್ಲಿ ಹೂತು ಹಾಕಬೇಕು. ಇಲ್ಲವೇ ಉಪ್ಪು ಸುರಿದರೆ ಸಾಯುತ್ತವೆ ಎಂದು ತಿಳಿಸಿದರು.

ನಕಲಿ ಬೀಜ ಅಲ್ಲ; ತಾಲೂಕಿನ ಕೆಲವು ರೈತರು ಸೋಯಾಬಿನ್‌ ಬೀಜಗಳು ನಕಲಿ ಎಂದು ತಿಳಿಸಿದ್ದಾರೆ. ಆದರೆ ಕೃಷಿ ಇಲಾಖೆಯಿಂದ ನೀಡಿದ ಎಲ್ಲ ಬಿತ್ತನೆ ಬೀಜಗಳನ್ನು ಬೀಜೋಪಚಾರ ಮಾಡಿ ರೈತರಿಗೆ ನೀಡಲಾಗಿದೆ. ಕೆಲವು ದಿನಗಳಿಂದ ಬಸವನ ಹುಳಗಳ ಕಾಟ ನೆರೆಯ ಬೀದರ ಮತ್ತು ಕಲಬುರಗಿ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಕಂಡು ಬಂದಿದೆ ಎಂದು ಹೇಳಿದರು.

ತಾಲೂಕಿನಲ್ಲಿ ಒಟ್ಟು 97,937ಹೆಕ್ಕೇರ್‌ ಬಿತ್ತನೆ ಗುರಿಯಿದೆ. ಈಗಾಗಲೇ 80,718 ಹೆಕ್ಟೇರ್‌ ಬಿತ್ತನೆಯಾಗಿದೆ. ತೊಗರಿ 56052 ಹೆಕ್ಟೇರ್‌, ಉದ್ದು 5895 ಹೆಕ್ಟೇರ್‌, ಹೆಸರು 11632 ಹೆಕ್ಟೇರ್‌, ಸೋಯಾ 5900 ಹೆಕ್ಟೇರ್‌ ಬಿತ್ತನೆ ಮಾಡಲಾಗಿದೆ. ಜುಲೈ 8ರ ವರೆಗೆ ಒಟ್ಟು 159 ಎಂಎಂ ಮಳೆ ಆಗಿದ್ದು, ಶೇ. 80 ಬಿತ್ತನೆ ಆಗಿದೆ. ಬಸವನ ಹುಳಗಳ ಹತೋಟಿಗಾಗಿ ಕೃಷಿ ಇಲಾಖೆಯಿಂದ ಮೆಟಾಲಟಿ ಹೈಡ್‌ ಪೌಡರ ಸಿಂಪರಣೆ ಮಾಡಬೇಕು. ಇದರ ಬಗ್ಗೆ ಪ್ರತಿಯೊಂದು ಗ್ರಾಮಗಳಲ್ಲಿ ಡಂಗೂರ ಸಾರಿ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಸದ್ಯ ನಮ್ಮ ಇಲಾಖೆಯಲ್ಲಿ ಮೆಟಾಲಿಟಿ ಹೈಡ ಪೌಡರ್‌ ಕಲಬುರಗಿ, ಬೀದರ ಜಿಲ್ಲೆಯಲ್ಲಿ ಸಿಗುತ್ತಿದೆ. ರೈತರು ಖರೀದಿಸಿ ಸಿಂಪರಣೆ ಮಾಡಿ ಬೆಳೆ ಉಳಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಕೃಷಿ ಅಧಿಕಾರಿಗಳಾದ ಅಭಿಲಾಷ ಸುಬೇದಾರ ಚಿಮ್ಮನಚೋಡ, ಗುರುಪಾದಪ್ಪ ಸುಲೇಪೇಟ, ರಘುವೀರ ಚಿಂಚೋಳಿ, ಸೈಫನ ಮುಲ್ಲಾ ಕೋಡ್ಲಿ ಇದ್ದರು.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.