ಶರಣರ ತತ್ವದಿಂದ ಸಮಾಜದಲ್ಲಿ ಬದಲಾವಣೆ: ತೇಗಲತಿಪ್ಪಿ
Team Udayavani, Dec 10, 2021, 11:10 AM IST
ಚಿಂಚೋಳಿ: ಮನುಷ್ಯ ಸಂಬಂಧಗಳಲ್ಲಿ ಬಿರುಕು ಕಾಣುತ್ತಿರುವ ದಿನಗಳಲ್ಲಿ ಸಮಾಜ ಎದುರಿಸುತ್ತಿರುವ ಮಾನವೀಯತೆಯ ಬರ ನೀಗಿಸಲು ಶರಣರ ಪುರಾಣ, ಪುಣ್ಯಕತೆ, ಸತ್ಸಂಗಗಳು ಸಮಾಜದಲ್ಲಿ ಬದಲಾವಣೆ ತರಲು ಸಹಕಾರಿಯಾಗಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.
ತಾಲೂಕಿನ ರಾನಾಪುರದಲ್ಲಿ ದಿವಂಗತ ತಿಪ್ಪಣ್ಣ ನಾಗಪ್ಪ ದಂಪತಿಯ 26ನೇ ಪುಣ್ಯಸ್ಮರಣೋತ್ಸವ ನಿಮಿತ್ತ ಶ್ರೀ ಗುರು ಕುಮಾರ ಪಂಚಾಕ್ಷರೇಶ್ವರ ಸಂಗೀತ ಕಲಾ ವೇದಿಕೆ ಆಯೋಜಿಸಿದ್ದ ಮಹಾದಾಸೋಹಿ ಕಲಬುರಗಿಯ ಶರಣಬಸವೇಶ್ವರ ಪುರಾಣ ಮಹೋತ್ಸವದ ಸಮಾರೋಪ ಉದ್ಘಾಟಿಸಿ ಹಾಗೂ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ತಂದೆ-ತಾಯಿ ಸ್ಮರಣೆಯಲ್ಲಿ ಇಂತಹ ಸಂದೇಶ ಸಾರುವ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು. ಇವುಗಳಿಂದ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಮಾನವೀಯ ಮೌಲ್ಯ ವೃದ್ಧಿಸುತ್ತವೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದರೆ ಮಾದರಿ ಸಮಾಜ ನಿರ್ಮಾಣ ಆಗುತ್ತದೆ ಎಂದರು.
ಐನಾಪುರದ ಸಿದ್ಧಲಿಂಗೇಶ್ವರ ಸಂಸ್ಥಾನ ಹಿರೇಮಠದ ಪಂಚಾಕ್ಷರಿ ದೇವರು ಸಾನ್ನಿಧ್ಯ ವಹಿಸಿದ್ದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಡಿ. ಶೇರಿಕಾರ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ನಿಡವಂಚಾದ ಮೈತ್ರಾದೇವಿ ತಾಯಿ, ಚಂದನಕೇರಾದ ರಾಮರಾವ್ ಪಾಟೀಲ ಮಾತನಾಡಿದರು.
ಪ್ರಥಮ ದರ್ಜೆ ಗುತ್ತಿಗೆದಾರ ಜಗದೀಶ ಮರಪಳ್ಳಿ, ಕಾಳೇಶ್ವರ ರಾಮಗೊಂಡ, ಶರಣಗೌಡ ಪಾಟೀಲ, ಚಾಂದ ಪಟೇಲ್, ಜ್ಯೋತಿ ನಾಗೇಂದ್ರ ರಾಣಾಪುರ, ಪೂಜಾ ಶಿವರುದ್ರ, ಶಾರದಾ ನವಲಿಂಗ, ಸಂಗ್ರಾಮ ಕೊಟಗಾ ಇದ್ದರು. ನವಲಿಂಗ ಪಾಟೀಲ ನಿರೂಪಿಸಿದರು, ಪುನೀತ್ ವಂದಿಸಿದರು. ಗದುಗಿನ ಟಿ.ಎಂ ಪಂಚಾಕ್ಷರ ಶಾಸ್ತ್ರೀ ಪುರಾಣ ಕಾರ್ಯಕ್ರಮ ನಡೆಸಿಕೊಟ್ಟರು. ನಾಗೇಂದ್ರ ರಾಣಾಪುರ, ಪುನೀತ್, ವಿನೂತ್, ಪೂಜಾ ಶಿವರುದ್ರ, ಕರಬಸಯ್ಯ ಯಲಮಡಗಿ ಮತ್ತಿತರರು ರಾತ್ರಿಯಿಡಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಇದಕ್ಕೂ ಮುನ್ನ ಹಾಸ್ಯಕಲಾವಿದ ನವಲಿಂಗ ಪಾಟೀಲ ಮಿಮಿಕ್ರಿ ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.