Chincholi: ಎಲ್ಲೆಡೆ ಭಾರೀ ಮಳೆ; ತುಂಬಿ ಹರಿಯುತ್ತಿರುವ ಜಲಪಾತಗಳು
ಗ್ರಾಮಸ್ಥರು ಎಚ್ಚರಿಕೆಯಿಂದಿರಲು ಮನವಿ
Team Udayavani, Jul 21, 2023, 12:16 PM IST
ಚಿಂಚೋಳಿ: ತಾಲೂಕಿನ ಕುಂಚಾವರಂ ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವುದರಿಂದ ಕುಂಚಾವರಂ ಎತ್ತಪೋತಜಲಧಾರೆ ಧುಮ್ಮಿಕ್ಕಿ ಮೈದುಂಬಿ ಹರಿಯುತ್ತಿದೆ.
ಕುಂಚಾವರಂ ಗಡಿಪ್ರದೇಶ ವನ್ಯಜೀವಿ ಅರಣ್ಯ ಪ್ರದೇಶದ ವೆಂಕಟಾಪುರ, ಸಂಗಾಪುರ, ಕುಸರಂಪಳ್ಳಿ, ಚುನ್ನಾಭಟ್ಟಿ ತಾಂಡಾ, ಕೊಹಿರ, ಮೊಗಡಮಪಳ್ಳಿ, ಗೊಟ್ಟಂಗೊಟ್ಟ ಗ್ರಾಮಗಳಲ್ಲಿ ಜಿಟಿಜಿಟಿಯಾಗಿ ಬಿರುಸಿನ ಮಳೆ ಆಗಿದೆ.
ಸೋಮವಾರ 80 ಮಿಮಿ ಮತ್ತು ಮಂಗಳವಾರ 70 ಮಿಮಿ ಮಳೆಯಾಗಿದೆ. ಕುಂಚಾವರಂ ವನ್ಯಜೀವಿ ಧಾಮ ಹಚ್ಚ ಹಸುರಿನ ಗಿಡಮರಗಳ ಮಧ್ಯೆ ಹರಿಯುವ ಎತ್ತಪೋತ ಜಲಪಾತ ಪ್ರವಾಸಿಗರಿಗೆ ಕೈ ಬೀಸಿ ಕರೆಯುತ್ತಿದೆ.
ಬುಧವಾರ ಮೋಡ ಕವಿದ ವಾತಾವರಣ ಮುಂದುವರೆದಿತ್ತು. ತಾಲೂಕಿನ ಕೆಳದಂಡೆ ಮುಲ್ಲಾಮಾರಿ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಬೀಳುತ್ತಿದೆ. ಜಲಾಶಯದಲ್ಲಿ ಒಳ ಹರಿವು ಉಂಟಾಗುತ್ತಿರುವ ಕಾರಣ ಬುಧವಾರ ರಾತ್ರಿಯಲ್ಲಿ ಮುಲ್ಲಾಮಾರಿ ನದಿಗೆ ನೀರು ಹರಿಬಿಡಲಾಗುತ್ತಿದೆ ಎಂದು ಎ.ಇ.ಇ. ಅರುಣಕುಮಾರ ತಿಳಿಸಿದ್ದಾರೆ.
ನದಿಯ ಪಾತ್ರದಲ್ಲಿ ಇರುವ ಚಿಮ್ಮನಚೋಡ, ತಾಜಲಾಪುರ, ಕನಕಪುರ, ಗಾರಂಪಳ್ಳಿ, ಗೌಡನಹಳ್ಳಿ, ನಿಮಾಹೊಸಳ್ಳಿ, ಚಿಂಚೋಳಿ, ಅಣವಾರ, ಪೊಲಕಪಳ್ಳಿ, ಗರಗಪಳ್ಳಿ, ಇರಗಪಳ್ಳಿ, ಕರ್ಚಖೇಡ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕು. ನದಿಗೆ ಜಾನುವಾರು ಬಿಡಬಾರದು ಮತ್ತು ಬಟ್ಟೆಗಳನ್ನು ತೊಳೆಯುವುದಕ್ಕಾಗಿ ಹೋಗಬಾರದು ಎಂದು ಗ್ರಾಮಸ್ಥರಿಗೆ ಡಂಗೂರ ಮೂಲಕ ಸೂಚನೆ ನೀಡಲಾಯಿತು. ಈ ಕುರಿತು ಕೆಳದಂಡೆ ಮುಲ್ಲಾಮಾರಿ ಯೋಜನೆ ಎಇಇ ಅರುಣ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.