![Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್ ಹೆಸರಿಲ್ಲ?](https://www.udayavani.com/wp-content/uploads/2024/12/Khel-Ratna-415x277.jpg)
ಶಹಾಬಾದದಲ್ಲಿ ಸ್ಮಶಾನ ಸ್ವಚ್ಛತೆ
Team Udayavani, Jan 18, 2022, 12:58 PM IST
![13cleaning-‘](https://www.udayavani.com/wp-content/uploads/2022/01/13cleaning--620x363.jpg)
ಶಹಾಬಾದ: ಸ್ಮಶಾನದಲ್ಲಿ ತುಂಬಿಕೊಂಡಿರುವ ಹೊಲಸು, ಎಲ್ಲೆಂದರಲ್ಲಿ ಬೆಳೆದಿರುವ ಗಿಡ-ಗಂಟಿ ಸ್ವಚ್ಛಗೊಳಿಸುವ ಮೂಲಕ ಇಲ್ಲಿನ ಸ್ಥಳೀಯ ಮುಖಂಡರು ಇನ್ನೊಬ್ಬರಿಗೆ ಮಾದರಿಯಾಗಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಳೆ ಹೆಚ್ಚಾದ ಪರಿಣಾಮ ಸ್ಮಶಾನದಲ್ಲಿ ಗಿಡ-ಗಂಟಿಗಳು ಬೆಳೆದು ಶವಸಂಸ್ಕಾರ ಮಾಡಲು ತೊಂದರೆಯಾಗುತ್ತಿತ್ತು. ಅಲ್ಲದೇ ಸ್ಮಶಾನದಲ್ಲಿ ಸ್ವತ್ಛತೆಯಿಲ್ಲದ ಕಾರಣ ಬಹಳ ಕೆಟ್ಟ ವಾತಾವರಣ ಮೂಡಿತ್ತು. ಅದನ್ನು ಮನಗಂಡು ಸ್ಥಳೀಯ ಎಲ್ಲ ಸಮಾಜದ ಮುಖಂಡರು ಒಟ್ಟಾಗಿ ಶ್ರಮದಾನ ಮಾಡುವ ಮೂಲಕ ನಗರದ ಸಾರ್ವಜನಿಕ ಸ್ಮಶಾನ ಸ್ವಚ್ಛಗೊಳಿಸಿದ್ದಾರೆ. ಇದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.
ನಗರದ ಸಾರ್ವಜನಿಕ ಸ್ಮಶಾನ ಭೂಮಿ ಹಳ್ಳಕ್ಕೆ ಹತ್ತಿಕೊಂಡಿರುವುದರಿಂದ ಮಳೆ ಬಂದಾಗಲೊಮ್ಮೆ ನೀರು ಸ್ಮಶಾನದೊಳಗೆ ಹರಿದು ನೀರಿನಲ್ಲಿರುವ ಎಲ್ಲ ಕಸ-ಕಡ್ಡಿ, ಬಟ್ಟೆ, ಪ್ಲಾಸ್ಟಿಕ್ ತ್ಯಾಜ್ಯಗಳು ಹರಡುತ್ತದೆ. ಅಲ್ಲದೇ ಗಿಡಗಂಟಿಗಳು ಎಲ್ಲೆಂದರಲ್ಲಿ ಬೆಳೆದು ಸ್ಮಶಾನದೊಳಗೆ ಪ್ರವೇಶಿಸಲು ಭಯ ಪಡಬೇಕಾದ ಪರಿಸ್ಥಿತಿ ಇಲ್ಲಿ ಕಾಣುತ್ತಿತ್ತು. ಹಂದಿಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿತ್ತು. ಆದ್ದರಿಂದ ಇದನ್ನು ಸ್ವಚ್ಛಗೊಳಿಸಲು ನಗರಸಭೆಯ ಅಧಿಕಾರಿಗಳಿಗೆ ತಿಳಿಸಿದರೂ ಕ್ಯಾರೇ ಎನ್ನದ ಕಾರಣ ನಾವೇ ಖುದ್ದಾಗಿ ಮಾಡಿದರೇ ಹೇಗೆ ಎಂಬ ಪರಿಕಲ್ಪನೆ ನಮ್ಮಲ್ಲಿ ಮೂಡಿ, ಎಲ್ಲ ಸ್ಥಳೀಯ ಸಮಾನ ಮನಸ್ಕರು ಸೇರಿಕೊಂಡು ಸ್ಮಶಾನ ಸ್ವತ್ಛಗೊಳಿಸಲು ಮುಂದಾದೆವು ಎಂದು ಸಾರ್ವಜನಿಕ ರುದ್ರಭೂಮಿ ಅಧ್ಯಕ್ಷ ಕಾಶಿನಾಥ ಜೋಗಿ ತಿಳಿಸಿದರು.
ಸಭೆ ನಡೆಸಿ, ಎಲ್ಲರೂ ಸೇರಿ ಬೆಳಿಗ್ಗೆ ವ್ಯಾಯಾಮ, ವಾಯು ವಿಹಾರ ಬದಲು ಶ್ರಮದಾನ ಮಾಡುವ ಮೂಲಕ ಇಡೀ ಸಾರ್ವಜನಿಕ ಸ್ಮಶಾನವನ್ನು ಸ್ವಚ್ಛಗೊಳಿಸಿ, ನೋಡುಗರ ಕಣ್ಮನ ಸೆಳೆಯುವಂತೆ ಮಾಡಿದ್ದಾರೆ. ಇನ್ನುಮುಂದೆ ಇದೇ ರೀತಿ ಶ್ರಮದಾನ ಮಾಡುವ ಮೂಲಕ ಸ್ಮಶಾನವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅವರ ಉದ್ದೇಶವಾಗಿದೆ. ಗಿಡ-ಮರಗಳನ್ನು ಬೆಳೆಸುವ ಉದ್ದೇಶವೂ ಹೊಂದಿದ್ದು, ಅದಕ್ಕಾಗಿಯೂ ಯೋಜನೆ ರೂಪಿಸುತ್ತಿದ್ದಾರೆ. ಇದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಸುನೀಲ ಭಗತ್, ಶಿವಾಜಿ ಪವಾರ, ಶಿವಾಜಿ ಪವಾರ, ಅನಿಲ ಹಿಬಾರೆ, ನನ್ನಾವರೆ ನರಸಿಂಗ, ಮಹಾವೀರ ಸುಗಂ, ನರಸಿಂಗ ಕೊಂಗಳೆ, ದತ್ತಾ ಫಂಡ್, ಶಶಿಕಾಂತ ಸಿಂಧೆ ಇದ್ದರು.
ಟಾಪ್ ನ್ಯೂಸ್
![Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್ ಹೆಸರಿಲ್ಲ?](https://www.udayavani.com/wp-content/uploads/2024/12/Khel-Ratna-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ](https://www.udayavani.com/wp-content/uploads/2024/12/cm-6-150x89.jpg)
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
![ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ](https://www.udayavani.com/wp-content/uploads/2024/12/13-15-150x90.jpg)
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
![Minister Priyank Kharge stays away from Jayadeva Hospital inauguration ceremony](https://www.udayavani.com/wp-content/uploads/2024/12/kharge-4-150x86.jpg)
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
![Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ](https://www.udayavani.com/wp-content/uploads/2024/12/Allama-150x86.jpg)
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
![Siddaramaiah](https://www.udayavani.com/wp-content/uploads/2024/12/sidda-4-150x83.jpg)
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.