ತಂಪು ಪಾನೀಯ ಸೇವನೆ: 10 ಜನರಿಗೆ ವಾಂತಿಭೇದಿ
Team Udayavani, Mar 29, 2022, 11:19 AM IST
ಚಿಂಚೋಳಿ: ಪಟ್ಟಣದ ಚಂದಾಪೂರ ನಗರದ ಜ್ಯೂಸ್ ಸೆಂಟರ್ವೊಂದರಲ್ಲಿ ತಂಪು ಪಾನೀಯ ಕುಡಿದಿದ್ದ 10 ಜನರಲ್ಲಿ ಹೊಟ್ಟೆ ನೋವು, ವಾಂತಿಭೇದಿ ಕಾಣಿಸಿಕೊಂಡ ಪರಿಣಾಮ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.
ಪಟ್ಟಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳೊಂದಿಗೆ ಆಗಮಿಸಿದ್ದ ಪಾಲಕರು ಚಂದಾಪೂರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಎದುರಿನ ಚಹಾ ಅಂಗಡಿಯಲ್ಲಿ ಲಸ್ಸಿ ಕುಡಿದಿದ್ದಾರೆ. ಕೆಲವರು ಹೊಟ್ಟೆ ನೋವು ವಾಂತಿಭೇದಿ ಮಾಡಿಕೊಂಡ 10 ಜನರನ್ನು ತಕ್ಷಣವೇ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ವೈದ್ಯಾ ಧಿಕಾರಿ ಡಾ|ಸಂತೋಷ ಪಾಟೀಲ ಮತ್ತು ವೈದ್ಯರ ತಂಡ ಎಲ್ಲರಿಗೆ ಕೂಡಲೇ ಚಿಕಿತ್ಸೆ ನೀಡಿದ್ದರಿಂದ 10 ಜನರಲ್ಲಿ ಮೂವರು ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 7 ಜನರಿಗೆ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಜ್ಯೂಸ್ಸೆಂಟರ್ ಗೆ ತಾಲೂಕು ಆಸ್ಪತ್ರೆ ಸಿಬ್ಬಂದಿ ತೆರಳಿ ಲಸ್ಸಿ ಸ್ಯಾಂಪಲ್ ಪಡೆದುಕೊಂಡು ಜಿಲ್ಲಾಸ್ಪತ್ರೆಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಕೊಳ್ಳಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.