ಆಶಾಕಿರಣ ಸಂಸ್ಥೆಯ ಸೇವಾ ಕಾರ್ಯಕ್ಕೆ ಶ್ಲಾಘನೀಯ


Team Udayavani, Nov 9, 2021, 1:18 PM IST

14service

ಅಫಜಲಪುರ: ಸೇವೆ ಎನ್ನುವದೇ ದೊಡ್ಡ ಸಾಧನೆ. ಅದನ್ನು ಮನಸ್ಫೂರ್ತಿಯಾಗಿ ಮಾಡಿದಾಗ ಪರಮಾತ್ಮನಿಗೆ ಪ್ರೀಯವಾಗುತ್ತದೆ. ಇಂತದ್ದೇ ಕೆಲಸವನ್ನು ಆಶಾಕಿರಣ ಸೇವಾ ಸಂಸ್ಥೆ ಮಾಡುತ್ತಿದೆ. ಈ ಕಾರ್ಯ ಶ್ಲಾಘನೀಯ ಎಂದು ಶ್ರೀ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯರು ಹೇಳಿದರು.

ಪಟ್ಟಣದ ಮಳೇಂದ್ರ ಮಠದಲ್ಲಿ ಆಶಾಕಿರಣ ಸೇವಾ ಸಂಸ್ಥೆಯಿಂದ ನಡೆದ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ, ನೇತ್ರದಾನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಆಶಾಕಿರಣ ಸಂಸ್ಥೆ ಸಕ್ರಿಯವಾಗಿ ಸಮಾಜಮುಖೀ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಅದರಲ್ಲೂ ವಿಶೇಷವಾಗಿ ಮಹಿಳೆಯರೇ ಈ ಸಂಸ್ಥೆ ಮುನ್ನಡೆಸುತ್ತಿರುವುದು ಖುಷಿಯ ವಿಚಾರ ಎಂದರು.

ಡಾ| ಶ್ರೀಶೈಲ ಪಾಟೀಲ ಮಾತನಾಡಿ, ಯುವಕರು ಈ ಕಾರ್ಯಕ್ರಮದಲ್ಲಿ ನೇತ್ರದಾನ ವಾಗ್ಧಾನ ಮಾಡಿದ್ದು ಮೆಚ್ಚುವಂತ ವಿಷಯ ಎಂದು ಹೇಳಿದರು. ಆಶಾಕಿರಣ ಸೇವಾ ಸಂಸ್ಥೆ ಅಧ್ಯಕ್ಷೆ ಪ್ರಭಾವತಿ ಮೇತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಚಿತ ನೇತ್ರ ತಪಾಸಣೆ, ಬಡ ರೋಗಿಗಳಿಗೆ ಕನ್ನಡಕ ವಿತರಣೆ, ನೇತ್ರದಾನಿಗಳಿಗೆ ಕೃತಜ್ಞತಾ ಪತ್ರ ವಿತರಣೆ, ಪತ್ರಕರ್ತರು ಹಾಗೂ ವೈದ್ಯರಿಗೆ ಸನ್ಮಾನ ಕಾರ್ಯಕ್ರಮಗಳು ನಡೆದವು. ಈ ವೇಳೆ ಸದಾಶಿವ ಮೇತ್ರೆ, ಶಂಕರರಾವ್‌ ಹುಲ್ಲೂರ, ಸುಪ್ರೀತ್‌ ಶಿವಾನಂದ ಹಸರಗುಂಡಗಿ ಹಾಗೂ 50ಕ್ಕೂ ಹೆಚ್ಚು ಜನ ನೇತ್ರದಾನ ಮಾಡಿ, ಕೃತಜ್ಞತಾ ಪ್ರಮಾಣ ಪತ್ರ ಪಡೆದರು. ಪ್ರಭುಗೌಡ ಪಾಟೀಲ, ಸಂತೋಷ ದಾಮಾ, ಚಿದಾನಂದ ಮಠ, ಸೀಮಾ ಬಬಲಾದ, ರಾಣಿ ಬುಕ್ಕೆಗಾರ, ಗಂಗಾ ಮಠ, ವಿದ್ಯಾವತಿ ಕಲಶೆಟ್ಟಿ ಬಡದಾಳ, ಪ್ರತಿಭಾ ಮಹೀಂದ್ರಕರ, ಸೌಮ್ಯಯ ಪಾಟ್ನೆ, ರಾಘವೇಂದ್ರ ಕಲಶೆಟ್ಟಿ ಬಡದಾಳ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.