![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jul 25, 2022, 3:05 PM IST
ಕಾಳಗಿ: ರೈತರು ತಮ್ಮಲಿರುವ ಹಸು, ಎಮ್ಮೆಗಳಿಗೆ ವಿಮೆ ಮಾಡಿಸುವ ಮೂಲಕ ಸರ್ಕಾರದ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ತಾಲೂಕು ಪಶು ಆಸ್ಪತ್ರೆ ಹಿರಿಯ ಪಶುವೈದ್ಯಾಧಿಕಾರಿ ಡಾ| ಅಣ್ಣರಾವ್ ಪಾಟೀಲ ಹೇಳಿದರು.
ತಾಲೂಕಿನ ಗೋಟೂರ ತಾಂಡಾದಲ್ಲಿ ಹಸು ಮತ್ತು ಎಮ್ಮೆಗಳ ವಿಮೆ ಮಾಡಿಸುವಂತೆ ರೈತರಿಗೆ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಪಶುಪಾಲನೆ ಇಲಾಖೆ ಎನ್.ಎಲ್. ಎಂ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಬಿಪಿಎಲ್ ರೈತರಿಗೆ ವಿಮೆ ಕಂತಿನ ಶೇ. 70 ಹಾಗೂ ಸಾಮಾನ್ಯ ರೈತರಿಗೆ ಶೇ.50ರಷ್ಟು ಮೊತ್ತವನ್ನು ಸರ್ಕಾರವೇ ಭರಿಸುತ್ತದೆ. ಆದ್ದರಿಂದ ರೈತರು ತಡ ಮಾಡದೇ ತಮ್ಮ ಹಸು ಹಾಗೂ ಎಮ್ಮೆಗಳ ವಿಮೆ ಮಾಡಿಸಿಕೊಳ್ಳಬೇಕು ಎಂದರು.
ವಿಮೆ ಅವಧಿಯು ಒಂದರಿಂದ ಮೂರು ವರ್ಷ ವರೆಗೆ ಇರುತ್ತದೆ. ಈಗಾಗಲೇ ಹಲವಾರು ಜಾನುವಾರುಗಳನ್ನು ವಿಮೆಗೆ ಒಳಪಡಿಸಿದ್ದು, ಹಂತ ಹಂತವಾಗಿ ಉಳಿದ ಜಾನುವಾರುಗಳಿಗೂ ವಿಮೆ ಮಾಡಲಾಗುವುದು ಎಂದು ಹೇಳಿದರು.
ತಾಲೂಕಿನ 14 ಪಶು ಆಸ್ಪತ್ರೆಯಲ್ಲಿ ಹಸು, ಎಮ್ಮೆಗಳ ವಿಮೆ ಮಾಡಲಾಗುತ್ತಿದ್ದು ಜುಲೈ 31ಕ್ಕೆ ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಪಶು ಆಸ್ಪತ್ರೆಗೆ ಸಂಪರ್ಕಿಸುವಂತೆ ಪಶುವೈದ್ಯ ಅಣ್ಣರಾವ್ ಪಾಟೀಲ ತಿಳಿಸಿದ್ದಾರೆ. ಈ ಸಮಯದಲ್ಲಿ ತಾಂಡಾದ ಅನಾರೋಗ್ಯ ಪೀಡಿತ ಜಾನುವಾರುಗಳಿಗೆ ಚಿಕಿತ್ಸೆ ನೀಡಿ, ಮಳೆಗಾಲದಲ್ಲಿ ಜಾನುವಾರು ಸಂರಕ್ಷಣೆ ಬಗ್ಗೆ ರೈತರಿಗೆ ಸಲಹೆ ನೀಡಿದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.