ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಧರಣಿ
Team Udayavani, Jun 8, 2022, 3:45 PM IST
ಕಲಬುರಗಿ: ಬೀಜ, ರಸಗೊಬ್ಬರಕ್ಕೆ ನೀಡಿರುವ ಸಹಾಯಧನ ಹೆಚ್ಚಿಸುವಂತೆ, ಸ್ಪಿಂಕ್ಲರ್ ಪೈಪ್ ಹಣ ಆರ್ಟಿಜಿಎಸ್ ಮಾಡಿಸಿಕೊಂಡ ರೈತರಿಗೆ ರಾಜ್ಯ ಸರ್ಕಾರ ತಕ್ಷಣ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಎದುರು ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ಮಾಡಲಾಯಿತು.
ಪ್ರತಿಭಟನೆಕಾರರು ಜಂಟಿ ಕೃಷಿ ನಿರ್ದೇಶಕರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಪತ್ರ ಸಲ್ಲಿಸಿ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ರೈತರಿಂದ ಹಣ ಸುಲಿಗೆ ಮಾಡಿ ರಿಲಯನ್ಸ್ ನಂತಹ ಖಾಸಗಿ ಕಾರ್ಪೋರೇಟ್ ಕಂಪನಿಗಳಿಗೆ ಲಾಭ ಮಾಡಿಕೊಡುತ್ತಿರುವುದು ಕೇಂದ್ರ ಸರಕಾರದ ಕುತಂತ್ರವಾಗಿದ್ದು, ಬೆಳೆ ವಿಮೆ ಕಟ್ಟಿದ ರೈತರಿಗೆ ವಿಮೆ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.
ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ಮುಂಗಾರು ಬಿತ್ತನೆಗಾಗಿ ಬೀಜ, ರಸಗೊಬ್ಬರ ಖರೀದಿಸಲು ರೈತರು ಪರದಾಡುತ್ತಿದ್ದಾರೆ. ಬೀಜ ಭೂಮಿಗೆ ಹಾಕಲು ಮಳೆರಾಯನ ಸಲುವಾಗಿ ಕಾಯುತ್ತಿರುವ ರೈತರು, ಇನ್ನೊಂದೆಡೆ ಮತ್ತು ಮಡ್ಡಿ ಭೂಮಿ ಅಥವಾ ಬಂಜರು ಭೂಮಿಯಲ್ಲಿ ರೈತರು ಒಣ ಮಣ್ಣಿನಲ್ಲಿ ಬಿತ್ತನೆ ಪ್ರಾರಂಭಿಸುತ್ತಾರೆ. ರೈತರು ಹೀಗಾಗಿ ಒಣ ಮಣ್ಣಿನಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಬೆಲೆ ಏರಿಕೆ ಹಿಂಪಡೆಯುವಂತೆ ಒತ್ತಾಯಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಬೀಜ ಮತ್ತು ರಸಗೊಬ್ಬರದ ಸಹಾಯಧನ ಹೆಚ್ಚಿಸಬೇಕು. ಸ್ಪಿಂಕ್ಲರ್ ಪೈಪ್ಗೆ ಅರ್ಜಿ ಹಾಕಿ ಮತ್ತು ವಂತಿಗೆ ಹಣ ಆರ್ಟಿಜಿಎಸ್ ಮಾಡಿ ಹಣ ಕಟ್ಟಿಕೊಂಡು ರಾಜ್ಯ ಸರಕಾರ ಹಣ ಬಿಡುಗಡೆ ಮಾಡಲಾರದೇ ರೈತರಿಗೆ ಅನ್ಯಾಯ ಮಾಡಿದೆ. ಜಿಲ್ಲೆಯ ಪ್ರತಿಯೊಂದು ರೈತ ಸಂರ್ಪ ಕೇಂದ್ರದಿಂದ ಸರಾಸರಿ ರೈತರ ಅರ್ಜಿಗಳಲ್ಲಿ 35 ಜನ ರೈತರ ಅರ್ಜಿಗಳು ಬಾಕಿ ಉಳಿದಿವೆ. ಅರ್ಜಿಗಳು ಧೂಳು ತಿನ್ನುತ್ತಿವೆ. ಕೋಟ್ಯಂತರ ರೂ. ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರೈತರ ವೆಚ್ಚದಲ್ಲಿ ವಿಮಾ ಸಂಸ್ಥೆಗಳು ಲಾಭ ಗಳಿಸಲು ಉದ್ದೆಶಪೂರ್ವಕವಾಗಿ ದೋಷಪೂರಿತ ನೀತಿ ರೂಪಿಸಲಾಗಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ಗುರ್ನಾಮಾ ಚಾರುಣಿ ಆರೋಪಿಸಿದರು.
ಫಲಾನುಭವಿಗಳೆಂದು ಕರೆಯಲ್ಪಡುವ ರೈತರಿಗೆ ವಿಮಾ ಮೊತ್ತವೇ ಸಿಕ್ಕಿಲ್ಲ. ಅವರಲ್ಲಿ ಹೆಚ್ಚಿನವರು ಸಾಲ ಪಡೆದ ರೈತರಾಗಿರುವುದರಿಂದ ಬ್ಯಾಂಕ್ಗಳು ರೈತರಿಗೆ ವಿಮಾ ರಕ್ಷಣೆಗಾಗಿ ಪಡೆಯುವ ಹಣವನ್ನು ಸಾಲಕ್ಕೆ ಬಂದ ತಕ್ಷಣ ಕಡಿತಗೊಳಿಸುತ್ತವೆ. ಎನ್ಡಿಎ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ) ರಫೇಲ್ ಹಗರಣಕ್ಕಿಂತಲೂ ದೊಡ್ಡ ಹಗರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ಪಾಂಡುರಂಗ್ ಮಾವಿನಕರ್, ಗೌರಮ್ಮ ಪಿ. ಪಾಟೀಲ್, ಸುಭಾಷ ಜೇವರ್ಗಿ, ಸಾಯಿಬಣ್ಣಾ ಗುಡಬಾ, ದೇವಿಂದ್ರಪ್ಪ ಪಾಟೀಲ್ ಕೊರವಿ, ದಿಲೀಪಕುಮಾರ್, ಸಿದ್ಧಪ್ಪ, ಎಂ.ಬಿ. ಸಜ್ಜನ್, ವಿಠಲ್ ಯಳವಂತಗಿ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.