ಮೆಣಸಿನಕಾಯಿ ಮಾರಾಟಕ್ಕೂ ಕೊರೊನಾ ಕರಿನೆರಳು

ಕೋಲ್ಡ್‌ ಸ್ಟೋರೇಜ್‌ ಸಮಸ್ಯೆ ಚಿಂತೆಯಲ್ಲಿ ನೂರಾರು ರೈತರು

Team Udayavani, Apr 7, 2020, 11:55 AM IST

07-April-03

ದೇವದುರ್ಗ: ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಿದ ಮೆಣಿಸಿನಕಾಯಿ ಮಾರಾಟಕ್ಕೆ ಕೊರೊನಾ ಕರಿನೆರಳು ತಟ್ಟಿದೆ. ಕೃಷಿ ಮಾರುಕಟ್ಟೆಗಳ ವ್ಯಾಪಾರ ವಹಿವಾಟು ಸ್ತಬ್ಧವಾಗಿದ್ದರಿಂದ ಫಸಲನ್ನು ಕೋಲ್ಡ್‌ ಸ್ಟೋರೇಜ್‌ ಗಳಲ್ಲಿ ಸಂಗ್ರಹಿಸಲು ರೈತರು ಸಮಸ್ಯೆ ಎದುರಿಸುವಂತಾಗಿದೆ.

ತಾಲೂಕಿನ ಮಸರಕಲ್‌ ಗ್ರಾಮದಲ್ಲಿ 80 ಸಾವಿರ ಚೀಲಗಳ ಸಾಮರ್ಥ್ಯ ಹೊಂದಿರುವ ಕೋಲ್ಡ್‌ ಸ್ಟೋರೇಜ್‌ ಒಂದೇ ಇರುವ ಕಾರಣ ನೂರಾರು ರೈತರು ಅವರವರ ಜಮೀನಲ್ಲೇ ಮೆಣಸಿನಕಾಯಿ ಸಂಗ್ರಹಿಸಬೇಕಾದಂತ ಸಂಕಷ್ಟ ಬಂದಿದೆ. ಮೂರೂವರೆ ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲಾಗಿದೆ. ಮೆಣಸಿನಕಾಯಿ ಕಟಾವು ಆರಂಭದಲ್ಲಿ ಕ್ವಿಂಟಲ್‌ಗೆ 15ರಿಂದ 16ಸಾವಿರ ರೂ. ಬೆಲೆಯಿತ್ತು. ಇದೀಗ ಕ್ವಿಂಟಲ್‌ಗೆ 13 ಸಾವಿರ ರೂ. ಬೇಡಿಕೆ ಇದೆ. ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಏ.14ರ ವರೆಗೆ ಲಾಕ್‌ಡೌನ್‌ ಜಾರಿಗೊಳಿಸಿದ್ದರಿಂದ ಮಾರುಕಟ್ಟೆ ವ್ಯಾಪಾರ ಸಂಪೂರ್ಣ
ಸ್ತಬ್ಧವಾಗಿದೆ. ಶೇ.10ರಷ್ಟು ಮೆಣಸಿನಕಾಯಿ ಬಿಡಿಸುವುದು ಬಾಕಿ ಇದ್ದು, ಕೂಲಿಕಾರರನ್ನು ಹೊಲಗಳಿಗೆ ಕರೆದೊಯ್ಯಲು ಸಾಧ್ಯವಾಗುತ್ತಿಲ್ಲ.

ರೈತರಿಗೆ ಸಂಕಷ್ಟ: ಬ್ಯಾಡಗಿ, ಗುಂಟೂರು ಮೆಣಸಿನಕಾಯಿಗೆ ಆರಂಭದಲ್ಲೇ ಉತ್ತಮ ಬೆಲೆ ಇತ್ತು. ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಮಾರುಕಟ್ಟೆ ವ್ಯಾಪಾರ- ವಹಿವಾಟು ಸ್ತಬ್ಧವಾಗಿದೆ. ಹೀಗಾಗಿ ಉತ್ತಮ ಇಳುವರಿ ಬಂದು, ಯೋಗ್ಯ ದರವಿದ್ದರೂ ರೈತರು ತೀವ್ರ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ.

ಒಂದಿಲ್ಲೊಂದು ಸಮಸ್ಯೆ: ಉತ್ತಮ ಇಳುವರಿ ಬಂದಾಗ ಪ್ರತಿವರ್ಷ ರೈತರಿಗೆ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಿದೆ. ನಾರಾಯಣಪುರ ಬಲದಂಡೆ ನೀರಾವರಿ
ಸೌಲಭ್ಯ ದೊರೆತ ಬಳಿಕ ತಾಲೂಕು ಶೇ.80ರಷ್ಟು ನೀರಾವರಿ ಹೊಂದಿದೆ. ಕೃಷಿ ಚಟುವಟಿಕೆ ಚುರುಕಾಗಿದ್ದು, ಬೆಳೆ ಸಂಗ್ರಹಿಸಲು ಅಗತ್ಯ ಸ್ಟೋರೇಜ್‌ನ ವ್ಯವಸ್ಥೆ
ಇಲ್ಲದಂತಾಗಿದೆ. ಮಸರಕಲ್‌ ಗ್ರಾಮದಲ್ಲಿ ಒಂದೇ ಸ್ಟೋರೇಜ್‌ ಇರುವುದರಿಂದ ಮೆಣಸಿನಕಾಯಿ ಬೆಳೆ ಸಂಗ್ರಹಿಸಲು ರಾಯಚೂರು ಸಾತ್‌ಮೈಲ್‌ ಕ್ರಾಸ್‌,
ಆಸ್ಕಿಹಾಳ ಕೋಲ್ಡ್‌ ಸ್ಟೋರೇಜ್‌ಗೆ ಮೊರೆ ಹೋಗುವಂತಾಗಿದೆ. ಮಾರುಕಟ್ಟೆ ಸ್ತಬ್ಧವಾದ ಹಿನ್ನೆಲೆಯಲ್ಲಿ ಹತ್ತಾರು ಗ್ರಾಮಗಳಲ್ಲಿ ಮೆಣಸಿನಕಾಯಿ ಬೆಳೆದ
ರೈತರು ಹರಸಾಹಸ ಪಡುವಂತಾಗಿದೆ.

ಬೇಸಿಗೆ ಬಿಸಿಲಿನಲ್ಲಿ ಸಂಗ್ರಹಿಸಿದ ಮೆಣಸಿನಕಾಯಿಯನ್ನು ಕಾಯುವಂತ ಸ್ಥಿತಿ ಬಂದೊದಗಿದೆ. ಲಾಕ್‌ಡೌನ್‌ ಮುಗಿದ ನಂತರವೇ ಮೆಣಸಿನಕಾಯಿ
ಮಾರಾಟಕ್ಕೆ ವಿಘ್ನ ದೂರವಾಗಲಿದೆ. ಜಿಲ್ಲಾ ಮತ್ತು ತಾಲೂಕು ಆಡಳಿತ ಇಲ್ಲಿನ ರೈತರ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು
ಮುಂದಾಗಬೇಕು ಎಂದು ರೈತ ಮುಖಂಡ ಮಲ್ಲಯ್ಯ ಕಟ್ಟಿಮನಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.