![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jan 25, 2022, 12:06 PM IST
ವಾಡಿ: ದೈಹಿಕವಾಗಿ ನ್ಯೂನತೆಗೊಳಗಾದ ವಿಕಲಚೇತನ ವಿಶೇಷ ಮಕ್ಕಳ ಚಿಕಿತ್ಸೆಗೆ ಸರಕಾರ ಆದ್ಯತೆ ನೀಡಿದೆ. ಇದರೊಂದಿಗೆ ಶಿಕ್ಷಣ ಇಲಾಖೆ ಮಕ್ಕಳ ಪೋಷಕರಿಗೆ ವಾರ್ಷಿಕ ಪ್ರೋತ್ಸಾಹ ಧನ ನೀಡುತ್ತಿದೆ ಎಂದು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಸೇಡಂ ಹೇಳಿದರು.
ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಪಟ್ಟಣದ ಸಂತ ಅಂಬ್ರೂಸ್ ಕಾನ್ವೆಂಟ್ ಶಾಲೆಯಲ್ಲಿ ಸೋಮವಾರ ಸ್ಥಳೀಯ ವಿವಿಧ ಶಾಲೆಗಳ ವಿಕಲಚೇತನ ಮಕ್ಕಳಿಗಾಗಿ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ಪಿಜಿಯೋಥೆರೆಪಿ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಚಿತ್ತಾಪುರ ತಾಲೂಕಿನಲ್ಲಿ ಒಟ್ಟು 795 ಮಕ್ಕಳು ಬಹುವಿಧ ನ್ಯೂನತೆಯಿಂದ ಬಳಲುತ್ತಿರುವುದು ಗೊತ್ತಾಗಿದೆ. ದೈಹಿಕ ನ್ಯೂನತೆ, ನರಗಳ ದೌರ್ಬಲ್ಯ, ಚಲನ ನ್ಯೂನತೆ, ಕುಬ್ಜತೆ, ಅಂಧತ್ವ ಹೀಗೆ ವಿವಿಧ ರೋಗಗಳಿಂದ ಮಕ್ಕಳ ಭವಿಷ್ಯ ಕಮರುತ್ತಿದೆ. ಇಂತಹ ಮಕ್ಕಳನ್ನು ಗುರುತಿಸುವ ಮತ್ತು ಚಿಕಿತ್ಸೆ ಕೊಡಿಸುವ ಮಹತ್ವದ ಕಾರ್ಯಕ್ಕೆ ಶಿಕ್ಷಣ ಇಲಾಖೆ ಮುಂದಾಗಿರುವುದಲ್ಲದೇ ಮಾಸಿಕ 230 ರೂ. ಪ್ರೋತ್ಸಾಹ ಧನ, 80 ರೂ. ಬೆಂಗಾವಲು ಧನ ಮತ್ತು 40 ರೂ. ಸಾರಿಗೆ ಭತ್ತೆ ನೀಡುತ್ತಿರುವುದು ಹೆಮ್ಮೆಯ ವಿಷಯ. ಪೋಷಕರು ಸರ್ಕಾರದ ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದರು.
ಪಿಜಿಯೋಥೆರೇಪಿಯ ಡಾ| ಸೈಯ್ಯದ್ ಅಕºರ್ ಅಲಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಲಿಂ ಪ್ಯಾರೆ, ಸದಸ್ಯ ಹುಸೇನ್ ಪಾಶಾ, ಬಿಐಇಆರ್ಟಿ ಶಿವುಕುಮಾರ ಹಿರೇಮಠ, ಮುಖ್ಯಶಿಕ್ಷಕಿ ಸಿಸ್ಟರ್ ಗ್ರೇಸಿ, ಶಿಕ್ಷಕರಾದ ಗೌತಮಿ ಹಿರೋಳಿ, ಶಿವಾಜಿ ಸೂರ್ಯವಂಶಿ ಸೇರಿದಂತೆ ವಿವಿಧ ಶಾಲೆಗಳ ವಿಕಲಚೇತನ ಮಕ್ಕಳು ಹಾಗೂ ಪೋಷಕರು ಶಿಬಿರದಲ್ಲಿ ಪಾಲ್ಗೊಂಡಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.