![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 27, 2021, 12:05 PM IST
ಕಲಬುರಗಿ: ನಗರದ ಸೂಪರ್ ಮಾರ್ಕೆಟ್ನಲ್ಲಿ ರವಿವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಬೆಂಕಿ ನಂದಿಸಲು ಹೋದ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.
ರಮೇಶ ಪವರ್ (55) ಎಂಬುವವರೇ ಮೃತ ಸಿಬ್ಬಂದಿ. ಇಲ್ಲಿನ ಕೆನರಾ ಬ್ಯಾಂಕ್ಗೆ ಸೇರಿದ ಹಳೆಯ ಜನರೇಟರ್ ನಿಂದ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ.
ಬ್ಯಾಂಕ್ನ ಹಿಂಬದಿಯ ಕಟ್ಟಡದಲ್ಲಿ ಜನರೇಟರ್ ಇರಿಸಲಾಗಿದ್ದು, ರಾತ್ರಿ 7:30ರ ಸುಮಾರಿಗೆ ಜನರೇಟರ್ನಿಂದ ಹೊಗೆಯ ವಾಸನೆ ಬಂದಿದೆ. ಇದನ್ನರಿತ ಕಟ್ಟಡದ ಮುಂಭಾಗದಲ್ಲಿ ಮಣ್ಣಿನ ಪಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ವ್ಯಾಪಾರಿಯೊಬ್ಬರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರು. ಆಗ ಸ್ಥಳಕ್ಕೆ ಧಾವಿಸಿದ ರಮೇಶ ಪವರ್ ಸೇರಿದಂತೆ ಇತರ ಅಗ್ನಿಶಾಮಕ ಸಿಬ್ಬಂದಿ, ಪರಿಶೀಲನೆ ನಡೆಸಿ ಬೆಂಕಿ ನಂದಿಸಲು ಕಾರ್ಯಾಚರಣೆ ಆರಂಭಿಸಿದ್ದರು. ಆದರೆ, ಈ ಸಮಯದಲ್ಲಿ ವಿದ್ಯುತ್ ಅವಘಡ ಉಂಟಾಗಿ ರಮೇಶ ದೂರಕ್ಕೆ ಬಿದ್ದಿದ್ದರು. ಇದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣವೇ ಪೊಲೀಸರು ಆಟೋದಲ್ಲಿ ಜಯದೇವ ಆಸ್ಪತ್ರೆಗೆ ಸಾಗಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜನರೇಟರ್ಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಬೆಂಕಿ ಕಟ್ಟಡದ ಹೊರಭಾಗದಲ್ಲೂ ಆವರಿಸಿತ್ತು. ಜತೆಗೆ ಗಿಡದ ರೆಂಬೆಗಳಿಗೂ ಬೆಂಕಿ ಹೊತ್ತಿ ಆತಂಕ ಸೃಷ್ಟಿಸಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಜೆಸ್ಕಾಂ ಸಿಬ್ಬಂದಿ ಕೂಡಲೇ ಸೂಪರ್ ಮಾರ್ಕೆಟ್ನ ಕೆಲ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.