ವೈಜ್ಞಾನಿಕ ಕೃಷಿ ಪದ್ದತಿ ಅನುಸರಿಸಿ: ಡಾ| ಶ್ರೀನಿವಾಸ


Team Udayavani, Dec 27, 2021, 12:28 PM IST

9scientfic

ಆಳಂದ: ರೈತರು ಒಂದೇ ಬೆಳೆ ಅವಲಂಬಿಸದೇ ವೈಜ್ಞಾನಿಕ ಕೃಷಿ ಪದ್ಧತಿ ಅನುಸರಿಸಬೇಕು ಎಂದು ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ತಜ್ಞ ಡಾ| ಶ್ರೀನಿವಾಸ ಬಿ.ವಿ ಸಲಹೆ ನೀಡಿದರು.

ತಾಲೂಕಿನ ನರೋಣಾ ಗ್ರಾಮದ ಪ್ರಗತಿಪರ ರೈತ ರಾಜೇಂದ್ರ ಎಸ್‌. ಸಂಗೋಳಗಿ ತೋಟದಲ್ಲಿ “ಬಸವೇಶ್ವರ ಸಮಾಜ ಸೇವಾ ಬಳಗ’ ವತಿಯಿಂದ ಏರ್ಪಡಿಸಲಾಗಿದ್ದ “ರಾಷ್ಟ್ರೀಯ ರೈತ ದಿನಾಚರಣೆ’ ಪ್ರಯುಕ್ತ ಪ್ರಗತಿಪರ ರೈತರಿಗೆ ಸತ್ಕಾರ, ಕೃಷಿ ವಿಜ್ಞಾನಿ-ರೈತರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ರಸಗೊಬ್ಬರವನ್ನು ಬೆಳೆಗಳಿಗೆ ಅಗತ್ಯಕ್ಕೆ ತಕ್ಕಂತೆ ಬಳಕೆ ಮಾಡಬೇಕು. ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಿ. ಜೈವಿಕ ಕೀಟನಾಶಕಗಳನ್ನು ಬಳಸಿ. ಬೆಳೆ ಬದಲಾವಣೆ ಪದ್ಧತಿ ಅತ್ಯವಶ್ಯಕವಾಗಿದೆ. ರೈತರು ಕೃಷಿ ವಿಜ್ಞಾನಿಗಳು, ಕೃಷಿ ಪಂಡಿತ, ಪ್ರಗತಿಪರ ರೈತರಿಂದ ಸೂಕ್ತ ಮಾಹಿತಿ ಪಡೆಯಬೇಕು ಎಂದರು.

ಯಾವುದೇ ಬಿತ್ತನೆ ಮಾಡಬೇಕಾದರೆ ಮಣ್ಣಿನ ಗುಣಮಟ್ಟ ಮತ್ತು ಬೆಳೆದ ಫಸಲಿಗೆ ಮಾರುಕಟ್ಟೆಯ ಬೇಡಿಕೆ ಗಮನದಲ್ಲಿ ಇಟ್ಟುಕೊಳ್ಳುವುದು ಪ್ರಮುಖವಾಗಿದೆ. ಪ್ರಸ್ತುತ ಸಂದರ್ಭಗಳಲ್ಲಿ ಸಿರಿ ಧಾನ್ಯಗಳಿಗೆ ಬಹು ಬೇಡಿಕೆ ಇರುವುದರಿಂದ ಅದರತ್ತ ರೈತರು ಚಿತ್ತ ಹರಿಸಬೇಕು. ಮಣ್ಣಿನ ಸವಕಳಿ ತಡೆಗಟ್ಟಿ. ಮಳೆ ನೀರಿನ ಕೊಯ್ಲು ಕಡ್ಡಾಯವಾಗಿ ಮಾಡಬೇಕು ಎಂದು ಹೇಳಿದರು.

ಪ್ರಗತಿಪರ ರೈತ ಶಿವಾನಂದ ಎಸ್‌. ವಾಲಿ ಮಾತನಾಡಿ, ರೈತರ ಬದುಕು ಹಸನಾದರೇ ಮಾತ್ರ ಸಮಾಜ ಸಮತೋಲನವಾಗಿರಲು ಸಾಧ್ಯ ಎಂದರು.

ಪ್ರಗತಿಪರ ರೈತರಾದ ಸೈಬಣ್ಣ ಬೋಧನ, ಶಿವಾನಂದ ವಾಲಿ, ಖೇಮಲಿಂಗಯ್ಯ ಸ್ವಾಮಿ, ಅನಿಲ ಆರ್‌.ಬುಕ್ಕಾ, ಖೇಮಲಿಂಗ ಎ. ನಿಂಬಾಳ್‌ ಅವರನ್ನು ಸತ್ಕರಿಸಲಾಯಿತು. ಬಸವೇಶ್ವರ ಸಮಾಜ ಸೇವಾ ಬಳಗದ ಎಚ್‌.ಬಿ. ಪಾಟೀಲ, ವೀರೇಶ ಬೋಳಶೆಟ್ಟಿ ನರೋಣಾ, ಚನ್ನಬಸಪ್ಪ ಗಾರಂಪಳ್ಳಿ, ಪರಮೇಶ್ವರ ದೇಸಾಯಿ, ರಾಜೇಂದ್ರ ಎಸ್‌.ಸಂಗೋಳಗಿ, ಶರಣಬಸಪ್ಪ ಆರ್‌. ಸಂಗೋಳಗಿ,ಬಸವರಾಜಆರ್‌.ಸಂಗೋಳಗಿ, ಸೂರ್ಯಕಾಂತ ಚಪ್ಪಳ್ಳಿ, ಭದ್ರಪ್ಪ ಸಾವಳಗಿ, ಲಕ್ಷ್ಮೀಪುತ್ರ ಚಿಮ್ಮಾಯಿ, ಗುರುರಾಜ ಆರ್‌. ವಾಲಿ, ಕಾಶಿನಾಥ ಸಾವಳಗಿ, ಶ್ರೀಶೈಲ ವಾಲಿ ಹಾಗೂ ಇನ್ನಿತರ ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

siddaramaiahಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು

Kalaburagi; ಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು

Siddaramaiah

Kalaburagi: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ-ಕೈಗಾರಿಕಾ ನೀತಿ ಜಾರಿಗೆ ಬದ್ದ: ಸಿಎಂ

ಹಗರಣದಲ್ಲೇ ಮುಳುಗಿದೆ ಕಾಂಗ್ರೆಸ್‌ ಸರ್ಕಾರ: ಪಿ. ರಾಜೀವ್‌

ಹಗರಣದಲ್ಲೇ ಮುಳುಗಿದೆ ಕಾಂಗ್ರೆಸ್‌ ಸರ್ಕಾರ: ಪಿ. ರಾಜೀವ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.