3ರಂದು ಅದ್ದೂರಿ ಉಚಿತ ಸಾಮೂಹಿಕ ವಿವಾಹ: ಕರದಾಳ


Team Udayavani, May 1, 2022, 2:12 PM IST

13mass-marrige

ಚಿತ್ತಾಪುರ: ಮೇ 3ರಂದು ಉಚಿತ ಸಾಮೂಹಿಕ ವಿವಾಹ ಅದ್ಧೂರಿಯಾಗಿ ಮಾಡಲಾಗುತ್ತಿದೆ. ಸಾಮೂಹಿಕವಾಗಿ ವಿವಾಹವಾಗಲು ಹಲವಾರು ಜೋಡಿಗಳು ಸ್ವ ಇಚ್ಛೆಯಿಂದ ಹೆಸರು ನೋಂದಾಯಿಸುತ್ತಿದ್ದಾರೆ. ಕಾರ್ಯಕ್ರಮ ಯಶಸ್ವಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಬಸವ ಜಯಂತಿ, ಉಚಿತ ಸಾಮೂಹಿಕ ವಿವಾಹ ಸಮಿತಿ, ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.

ಪಟ್ಟಣದ ಎಪಿಎಂಸಿ ಯಾರ್ಡ್‌ ಸಭಾಂಗಣದಲ್ಲಿ ಬಸವ ಜಯಂತಿ ನಿಮಿತ್ತ ಉಚಿತ ಸಾಮೂಹಿಕ ವಿವಾಹ ಕುರಿತು ಹಮ್ಮಿಕೊಂಡಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಟ್ಟಣದ ಬಜಾಜ್‌ ಕಲ್ಯಾಣ ಮಂಟಪದಲ್ಲಿ ಮೇ 3ರಂದು ಬಸವ ಜಯಂತಿ ನಿಮಿತ್ತ 6ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಿದ್ದು, ಸಾಮೂಹಿಕ ವಿವಾಹವಾಗಲು ಹಲವರು ಮುಂದೆ ಬಂದಿರುವುದು ಸಂತಸ ತಂದಿದೆ ಎಂದರು.

ಎಲ್ಲ ಮದುಮಕ್ಕಳಿಗೆ ಬಟ್ಟೆ, ವಧುವಿಗೆ ತಾಳಿ, ಕಾಲುಂಗುರ ಹಾಗೂ ಮದುಮಕ್ಕಳಿಗೆ ಬಟ್ಟೆಗಳನ್ನು ಉದ್ಯಮಿ ಶೈಲಜಾ ಪ್ರಮೋದರೆಡ್ಡಿ ಯರಗಲ್‌ ಉಡುಗೊರೆಯಾಗಿ ನೀಡಲಿದ್ದಾರೆ. ಎಪಿಎಂಸಿ ವರ್ತಕರಿಂದ ಪ್ರಸಾದ ವ್ಯವಸ್ಥೆ ಮಾಡಲಾಗುವುದು. ಮದುಮಕ್ಕಳ ಬೀಗರು, ನೆಂಟರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಮಂಟಪ, ಅಲಂಕಾರ, ವೇದಿಕೆ, ಪ್ರಸಾದ, ಪ್ರಚಾರ ಸೇರಿದಂತೆ ಎಲ್ಲ ಸಮಿತಿಗಳನ್ನು ರಚನೆ ಮಾಡಲಾಗಿದೆ. ಮೇ 3ರಂದು ಬೆಳಗ್ಗೆ 9ಕ್ಕೆ ತಹಶೀಲ್ದಾರ್‌ ಕಚೇರಿಯಿಂದ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಹಾಗೂ ಜಯಂತಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ನಂತರ 12 ಗಂಟೆಗೆ ಉಚಿತ ವಿವಾಹ ಕಾರ್ಯಕ್ರಮ ಪಟ್ಟಣದ ಬಜಾಜ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ವಿವರಿಸಿದರು.

ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಮುಖಂಡರಾದ ಚಂದ್ರಶೇಖರ ಅವಂಟಿ, ನಾಗರಾಜ ಭಂಕಲಗಿ, ಬಸವರಾಜ ಚಿನ್ನಮಳ್ಳಿ ಮಾತನಾಡಿದರು.

ವರ್ತಕರ ಸಂಘದ ಅಧ್ಯಕ್ಷ ಅಣ್ಣಾರಾವ್‌ ಪಾಟೀಲ ಮುಡಬೂಳ, ಚಂದ್ರಶೇಖರ ಸಾತನೂರ, ಶರಣು ಸಜ್ಜನ, ರವೀಂದ್ರ ಸಜ್ಜನಶೆಟ್ಟಿ, ಡಾ| ಚಂದ್ರಶೇಖರ ಕಾಂತಾ, ಡಾ| ಶ್ರೀನಿವಾಸರೆಡ್ಡಿ ಕಂದಕೂರ, ಡಾ| ಪ್ರಭುರಾಜ ಕಾಂತಾ, ಶ್ರೀನಿವಾಸರೆಡ್ಡಿ ಪಾಲಪ, ಕೋಟೇಶ್ವರ ರೇಷ್ಮಿ, ಶಿವರಾಜ ಪಾಳೇದ, ಸಂತೋಷ ಚೌಧರಿ, ರಮೇಶ ಬೊಮ್ಮನಳ್ಳಿ, ಶರಣಗೌಡ ಮುಡಬೂಳ, ಶಾಮ ಮುಕ್ತೇದಾರ, ಅನಿಲ ವಡ್ಡಡಗಿ, ಮಲ್ಲಿಕಾರ್ಜುನರೆಡ್ಡಿ ಇಜಾರ ಇದ್ದರು. ಶಾಂತಪ್ಪ ಚಾಳಿಕಾರ ನಿರೂಪಿಸಿದರು. ಆನಂದ ನರಬೋಳಿ ಸ್ವಾಗತಿಸಿದರು. ಅಶೋಕ ನಿಪ್ಪಾಣಿ ವಂದಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.