ಗ್ರಾಪಂ ಅವ್ಯವಹಾರ ತನಿಖೆಗೆ ಒತ್ತಾಯ
Team Udayavani, Nov 27, 2021, 1:08 PM IST
ಅಫಜಲಪುರ: ತಾಲೂಕಿನ ಚವಡಾಪುರ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಹಾಗೂ ಕೋವಿಡ್ ಹೆಸರಿನಲ್ಲಿ ಅವ್ಯವಹಾರ ನಡೆದಿದೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿ ತನಿಖೆಗೆ ಒತ್ತಾಯಿಸಿದರು.
ಈ ಕುರಿತು ಜೆಡಿಎಸ್ ತಾಲೂಕು ಜಮೀಲ್ ಗೌಂಡಿ, ಮುಖಂಡ ಅಮರಸಿಂಗ್ ರಜಪೂತ ಮಾತನಾಡಿ, ಚವಡಾಪುರ ಗ್ರಾ.ಪಂ ಅದ್ಯಕ್ಷ ಹಾಗೂ ಪಿಡಿಒ ಸೇರಿಕೊಂಡು ನರೇಗಾ ಯೋಜನೆಯಡಿಯಲ್ಲಿ ಲಕ್ಷಾಂತರ ರೂ. ಬೋಗಸ್ ಬಿಲ್ ಸೃಷ್ಟಿಸಿ, ಗ್ರಾ.ಪಂ ಕಾರ್ಯಾಲಯಕ್ಕೆ ಹೊಸ ಶೌಚಾಲಯ ಕಟ್ಟಿಸಿದ್ದಾಗಿ ಸುಳ್ಳು ಮಾಹಿತಿ ನೀಡಿ 50 ಸಾವಿರ ರೂ., ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಶೌಚಾಲಯ ಕಟ್ಟಿಸಿದ್ದಾಗಿ ಸುಳ್ಳು ಹೇಳಿ 50 ಸಾವಿರ ರೂ., ಸರ್ಕಾರಿ ಶಾಲೆಗೆ ಶೌಚಾಲಯ ಕಟ್ಟಿಸಿದ್ದಾಗಿ ಹೇಳಿ 50 ಸಾವಿರ ರೂ. ಲಪಟಾಯಿಸಿದ್ದಾರೆ ಎಂದು ದೂರಿದರು.
ಗ್ರಾಮದಲ್ಲಿ ಸ್ಯಾನಿಟೈಸರ್, ಮಾಸ್ಕ್ ವಿತರಣೆ, ಸ್ವತ್ಛತೆಗಾಗಿ 6.5 ಲಕ್ಷ ರೂ. ಖರ್ಚು ತೋರಿಸಲಾಗಿದೆ. ಆದರೆ ಯಾರೊಬ್ಬರಿಗೂ ಸ್ಯಾನಿಟೈಸರ್ ನೀಡಿಲ್ಲ ಎಂದು ಆಪಾದಿಸಿದರು.
ಮುಖಂಡರಾದ ಶ್ರೀಕಾಂತ ದಿವಾನಜಿ, ರಾಜು ಜಮಾದಾರ ಗ್ರಾ.ಪಂ ಸದಸ್ಯ ಶರಣಪ್ಪ ಕಲಕೇರಿ, ಮುಖಂಡರಾದ ಸಾಯಬಣ್ಣ ಜಮಾದಾರ, ಮಾಜಿ ಸೈನಿಕ ಬಸವರಾಜ ಜಮಾದಾರ, ಕಲ್ಯಾಣಿ ಗಂಡೋಳಿ, ಮಾಂತು ಸಪ್ಪನಗೋಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.