ನಿರ್ಮಾಣ ಹಂತದಲ್ಲೇ ಹೆದ್ದಾರಿ ರಸ್ತೆ ನಿರ್ನಾಮ

ಬಸವೇಶ್ವರ ಕಾಲೋನಿ ವರೆಗಿನ ರಸ್ತೆಯಲ್ಲಿ ಈಗಾಗಲೇ ದೊಡ್ಡ ತಗ್ಗುಗಳು ನಿರ್ಮಾಣವಾಗಿವೆ.

Team Udayavani, Aug 25, 2021, 6:00 PM IST

ನಿರ್ಮಾಣ ಹಂತದಲ್ಲೇ ಹೆದ್ದಾರಿ ರಸ್ತೆ ನಿರ್ನಾಮ

ಸೇಡಂ: ರಾಜ್ಯ ಹೆದ್ದಾರಿಗೆ ಹೊಸ ಲುಕ್‌ ಮತ್ತು ರಸ್ತೆ ಅಗಲ ಮಾಡುವ ದೃಷ್ಟಿಯಿಂದ ಕಮಲಾವತಿ ನದಿ ವರೆಗೆ ಕೈಗೊಂಡ ಕೋಟ್ಯಂತರ ರೂ. ವೆಚ್ಚದ ಕಾಮಗಾರಿ ಹಳ್ಳ ಹಿಡಿದಿದೆ. ಪಟ್ಟಣದ ಚಿಂಚೋಳಿ ಕ್ರಾಸ್‌ನಿಂದ ಕಮಲಾವತಿ ನದಿ ವರೆಗೆ ಕೈಗೊಂಡ ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಹದಗೆಟ್ಟಿದೆ.

ಬಹುತೇಕ ಕಡೆಗಳಲ್ಲಿ ದೊಡ್ಡ ತಗ್ಗು, ದಿನ್ನೆಗಳು ನಿರ್ಮಾಣವಾಗಿದ್ದು, ಪಾದದೆತ್ತರ ಆಳ ಹೊಂದಿವೆ. ಇದರಿಂದ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುವಂತೆ ಆಗಿದೆ. ದ್ವಿಪಥ ರಸ್ತೆ ಇದಾಗಿದ್ದು, ಸುಸಜ್ಜಿತ ಚರಂಡಿ ಹಾಗೂ ವಿದ್ಯುತ್‌ ದೀಪಾಲಂಕಾರದ ಸವಲತ್ತು ಹೊಂದಿದೆ. ಆದರೆ ಗುತ್ತಿಗೆದಾರರ ನಿರ್ಲಕ್ಷ್ಯವೋ? ಅಥವಾ ಲೊಕೋಪಯೋಗಿ ಇಲಾಖೆ ಅಧಿಕಾರಿಗಳ ನಿಷ್ಕಾಳಜಿಯೋ ಗೊತ್ತಿಲ್ಲ. ನಿರ್ಮಾಣ ಹಂತದಲ್ಲೇ ರಸ್ತೆ ನಿರ್ನಾಮವಾಗಿದೆ. ಚಿಂಚೋಳಿ ಕ್ರಾಸ್‌ನಿಂದ ಹಿಡಿದು, ಅಗ್ಗಿ ಬಸವೇಶ್ವರ ಕಾಲೋನಿ ವರೆಗಿನ ರಸ್ತೆಯಲ್ಲಿ ಈಗಾಗಲೇ ದೊಡ್ಡ ತಗ್ಗುಗಳು ನಿರ್ಮಾಣವಾಗಿವೆ.

ಮಳೆಗಾಲವಾಗಿದ್ದರಿಂದ ತಗ್ಗುಗಳಲ್ಲಿ ನೀರು ಶೇಖರಣೆಯಾಗಿ ಪ್ರಯಾಣಿಕರ ಪ್ರಾಣಕ್ಕೆ ಕಂಟಕವಾಗಿದೆ. ಇದನ್ನು ಕಂಡು ಸಾರ್ವಜನಿಕರು ಅಧಿಕಾರಿಗಳಿಗೆ ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ಸ್ವಲ್ಪ ಯಾಮಾರಿದರೂ ಅಪಘಾತ ನಿಶ್ಚಿತ ಎನ್ನುವಂತಾಗಿದೆ. ಇನ್ನೊಂದೆಡೆ ಕಾರು ಚಾಲಕರು ತಗ್ಗುಗಳಲ್ಲಿ ಸಿಲುಕಿ ಪಡಬಾರದ ಕಷ್ಟಪಡುತ್ತಿದ್ದಾರೆ. ಮತ್ತೂಂದೆಡೆ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ದಿನ ದೂಡುತ್ತಿದ್ದಾರೆ.

ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಎಸ್ಡಿಬಿಸಿ (ಮೇಲ್ಪದರದ ರಸ್ತೆ ಕಾಮಗಾರಿ) ಪೂರ್ಣವಾದ ಮೇಲೆ ರಸ್ತೆ ಸುಸಜ್ಜಿತವಾಗಿ ಸಾರ್ವಜನಿಕರಿಗೆ ಮುಕ್ತವಾಗಲಿದೆ. ತಗ್ಗು ದಿನ್ನೆಗಳ ಕುರಿತು ಪರಿಶೀಲಿಸುವೆ. ಕೂಡಲೇ ಈ ಕುರಿತು ಕ್ರಮ ಕೈಗೊಳ್ಳುವೆ. ಜನರಿಗೆ ತೊಂದರೆಯಾಗದಂತೆ ನಿಗಾ ವಹಿಸಲಾಗುವುದು.
ಚಂದ್ರಶೇಖರ ಮೋತಕಪಲ್ಲಿ, ಎಇಇ, ಲೊಕೋಪಯೋಗಿ ಇಲಾಖೆ

ರಸ್ತೆ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದೆ ಎಂದು ಈ ಹಿಂದೆ ಸೇಡಂನ ಹಲವಾರು ಜನರು ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ. ಆದರೂ ಗುಣಮಟ್ಟ ಸರಿಪಡಿಸುವಲ್ಲಿ ಅಧಿಕಾರಿಗಳು ಎಡವಿದ್ದಾರೆ. ಈಗ ಬಿದ್ದಿರುವ ತಗ್ಗುಗಳಿಂದ ಏನಾದರೂ ಅನಾಹುತವಾದರೆ ಯಾರು ಹೊಣೆ? ಜನರ ಜೀವದ ಜೊತೆ ಚಲ್ಲಾಟವಾಡುವ ಹಕ್ಕು ಯಾರಿಗೂ ಇಲ್ಲ.
ಸಂತೋಷ ತಳವಾರ, ಪುರಸಭೆ ಸದಸ್ಯ

ಶಿವಕುಮಾರ ಬಿ. ನಿಡಗುಂದಾ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.