![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 23, 2020, 10:52 AM IST
ಸಾಂದರ್ಭಿಕ ಚಿತ್ರ
ಜೇವರ್ಗಿ: ಶಾಸಕ ಡಾ| ಅಜಯಸಿಂಗ್ ತಾಲೂಕಿನ ವಿವಿಧ ಕ್ವಾರಂಟೈನ್ ಕೇಂದ್ರಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ತಾಲೂಕಿಗೆ ಕಳೆದ 15 ದಿನಗಳ ಅವಧಿ ಯಲ್ಲಿ 1701 ಜನ ವಲಸೆ ಕಾರ್ಮಿಕರು ಮಹಾರಾಷ್ಟ್ರ ಹಾಗೂ ಆಂಧ್ರ ಪ್ರದೇಶದಿಂದ ವಲಸೆ ಬಂದಿದ್ದಾರೆ.
ಯಡ್ರಾಮಿ ತಾಲೂಕಿಗೆ 1735 ವಲಸೆ ಕಾರ್ಮಿಕರು ಬಂದಿದ್ದು, ಒಟ್ಟು 3436 ವಲಸೆ ಕಾರ್ಮಿಕರಿಗೆ ವಿವಿಧ ವಸತಿ ನಿಲಯಗಳಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಶಾಸಕ ಡಾ| ಅಜಯಸಿಂಗ್ ಹೇಳಿದರು. ಪ್ರತಿ ದಿನ 250-300 ಜನ ವಲಸೆ ಕಾರ್ಮಿಕರ ಗಂಟಲು ದ್ರವ ಸಂಗ್ರಹಿಸಿ ಕೋವಿಡ್ ನಿಗದಿತ ಆಸ್ಪತ್ರೆ ಜಿಮ್ಸ್ ಗೆ ಕಳುಹಿಸಲಾಗುತ್ತಿದೆ. ಮೂರು ದಿನಗಳ ನಂತರ ವರದಿ ಅಧಿಕಾರಿಗಳ ಕೈ ಸೇರಲಿದೆ. ಇಲ್ಲಿಯವರೆಗೆ 500 ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಯಾಳವಾರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಗೆ ಒಳಪಟ್ಟಿದ್ದ ಐವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದರು. ಕೋವಿಡ್ ಸೋಂಕು ಹರಡು ವುದನ್ನು ತಡೆಗಟ್ಟಲು ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ. ನಿಯಮಿತ ವಾಗಿ ಅಧಿಕಾರಿಗಳು ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಕ್ವಾರಂಟೈನ್ದಲ್ಲಿರುವ ವಲಸೆ ಕಾರ್ಮಿಕರಿಗೆ ಊಟ, ಉಪಹಾರ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಪರಿಶೀಲನೆ: ಪಟ್ಟಣದ ಸಾರಿಗೆ ಘಟಕದ ಬಳಿಯಿರುವ ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ವಸತಿ ನಿಲಯ, ಯಾಳವಾರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅಂಕಲಗಾ ಗ್ರಾಮದ ವಸತಿ ನಿಲಯಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಹಶೀಲ್ದಾರ್ ಸಿದರಾಯ ಭೋಸಗಿ, ಟಿಎಚ್ಒ ಡಾ| ಸಿದ್ಧು ಪಾಟೀಲ, ಅಶೋಕ ನಾಯಕ, ಪಿಎಸ್ಐ ಮಂಜುನಾಥ ಹೂಗಾರ, ರುಕುಂ ಪಟೇಲ ಇಜೇರಿ, ಕಾಶಿರಾಯಗೌಡ ಯಲಗೋಡ ಇನ್ನಿತರದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.