Kalaburagi: ಕೀಟನಾಶಕ ಸಿಂಪಡಣೆ ಮಾಡುವಾಗ ನಿರ್ಲಕ್ಷ್ಯ ವಹಿಸಿದರೆ ಕಣ್ಣಿಗೆ ಅಪಾಯ:ಡಾ.ರಾಜಶ್ರೀ
Team Udayavani, Oct 9, 2024, 2:50 PM IST
ಕಲಬುರಗಿ: ಬೆಳೆಗಳಿಗೆ (ತೊಗರಿ, ಹತ್ತಿ ಇತ್ಯಾದಿ) ಕೀಟನಾಶಕ ಸಿಂಪಡಣೆ ಮಾಡುವಾಗ ಕಣ್ಣುಗಳ ಸಂರಕ್ಷಣೆ ವಹಿಸದಿದ್ದರೆ ದೃಷ್ಟಿ ದೋಷಕ್ಕೆ ಕಾರಣವಾಗಬೇಕಾಗುತ್ತದೆ ಎಂದು ಹಿರಿಯ ಖ್ಯಾತ ನೇತ್ರ ತಜ್ಞೆ, ಸಿದ್ದರಾಮೇಶ್ವರ ಕಣ್ಣಿನ ಆಸ್ಪತ್ರೆಯ ವೈದ್ಯೆ ಡಾ.ರಾಜಶ್ರೀ ವಿ. ರೆಡ್ಡಿ ಹೇಳಿದರು.
ಬೆಳೆಗಳಿಗೆ ಕೀಟನಾಶಕ ಸಿಂಪಡಣೆ ಮಾಡುವಾಗ ಸರಿಯಾದ ಜಾಗೃತಿ ವಹಿಸದೇ ಕಣ್ಣುಗಳಿಗೆ ತಾಗಿಸಿಕೊಂಡ ಪರಿಣಾಮ ತೊಂದರೆಗೆ ಒಳಗಾಗಿ ದಿನಾ ಹತ್ತಾರು ಜನರು ಆಸ್ಪತ್ರೆಗೆ ಬರುತ್ತಿದ್ದಾರೆ. ಹೀಗಾಗಿ ಎಲ್ಲರೂ ಕೀಟನಾಶಕ ಸಿಂಪಡಣೆ ಮಾಡುವಾಗ ಕಣ್ಣುಗಳ ಸುರಕ್ಷತಾ ಕ್ರಮಗಳನ್ನು ವಹಿಸಬೇಕೆಂದು ವಿಶ್ವ ದೃಷ್ಟಿ ದಿನದಂಗವಾಗಿ ಕರೆಯಲಾದ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಬೆಳೆ ಬಹಳ ಎತ್ತರವಾಗಿ ಬೆಳೆದಿದ್ದರಿಂದ ಜತೆಗೆ ಗಾಳಿಗೆ ವಿರುದ್ಧವಾಗಿ ಕೀಟನಾಶಕ ಸಿಂಪರಣೆ ಮಾಡುತ್ತಿರುವುದರಿಂದ ಕಣ್ಣಿಗೆ ತಾಕುತ್ತಿರುವುದರಿಂದ ಕಣ್ಣುಗಳ ದುಷ್ಪರಿಣಾಮ ಬೀರಿ ದೃಷ್ಟಿ ದೋಷಕ್ಕೆ ಕಾರಣವಾಗುತ್ತಿದೆ. ಹೀಗಾಗಿ ರೈತರು ಹಾಗೂ ಕೃಷಿ, ಕೂಲಿ ಕಾರ್ಮಿಕರು ನೇತ್ರದ ಬಗ್ಗೆ ಮುಂಜಾಗೃತೆ ವಹಿಸುವುದರ ಮುಖಾಂತರ ಕಣ್ಣುಗಳನ್ನು ಸಂರಕ್ಷಿಸಬೇಕೆಂದರು.
ಅ.10 ರಂದು ವಿಶ್ವ ದೃಷ್ಟಿ ದಿನವನ್ನು ಪ್ರತಿ ವರ್ಷದಂತೆ ಆಚರಿಸಲಾಗುತ್ತಿದ್ದು, ಈ ವರ್ಷದ ಧ್ಯೇಯವಾಕ್ಯ, ಮಕ್ಕಳೇ ನಿಮ್ಮ ಕಣ್ಣುಗಳನ್ನು ಪ್ರೀತಿಸಿ ಎಂಬುದಾಗಿದೆ.
ಈಗಾಗಲೇ ಸಿದ್ಧರಾಮಯ್ಯ ಅವರು ಕಣ್ಣಿನ ಆಸ್ಪತ್ರೆ ಸಂಸ್ಥೆಯ ವತಿಯಿಂದ ನೂರಾರು ಶಾಲೆಗಳಿಗೆ ಹೋಗಿ ಮಕ್ಕಳ ನೇತ್ರ ತಪಾಸಣೆಗೈದು, ಪ್ರಾಥಮಿಕ ದೋಷವಿರುವ ಮಕ್ಕಳಿಗೆ ಅಗತ್ಯ ಚಿಕಿತ್ಸಾ ಕ್ರಮಗಳನ್ನು ಉಚಿತವಾಗಿ ಕೈಗೊಳ್ಳಲಾಗಿದೆ ಎಂದು ವಿವರಣೆ ನೀಡಿದರು.
ಸಿದ್ದಾರಾಮೇಶ್ವರ ಆಸ್ಪತ್ರೆಯ ಡಾ. ವಿಶ್ವನಾಥ ರೆಡ್ಡಿ, ಡಾ.ಸಿದ್ದಲಿಂಗರೆಡ್ಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Kalaburagi: ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್
Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Delhi;ಕಾಂಗ್ರೆಸ್ ನೊಂದಿಗೆ ಮೈತ್ರಿ?: 2 ರಾಜ್ಯಗಳ ಫಲಿತಾಂಶದ ಬಳಿಕ ಆಪ್ ಹೇಳಿದ್ದೇನು?
Haryana: ಇಬ್ಬರು ಪಕ್ಷೇತರ ಶಾಸಕರು ಸೇರ್ಪಡೆ… ಬಿಜೆಪಿ ಸಂಖ್ಯಾ ಬಲ 50ಕ್ಕೆ ಏರಿಕೆ
Geethanjali Silks ಉಡುಪಿ ಪುರುಷರ ಬಟ್ಟೆಗಳ ವಿಶಾಲ ವಿಭಾಗ ಉದ್ಘಾಟನೆ
Sirsi ವಿಜ್ಞಾನ ಪ್ರಶ್ನೆ ಪತ್ರಿಕೆಯ ರಚನೆಯಲ್ಲಿ ಸೂಕ್ತ ಬದಲಾವಣೆಗೆ ಮನವಿ
Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.