ಅನ್ನ ದಾಸೋಹ ಸೇವಾಕಾರ್ಯ ದೊಡ್ಡದು

ಶ್ರೀಗುರು ವಿದ್ಯಾಪೀಠದ ಸಮಾಜ ಸೇವಾ ಕಾರ್ಯಕ್ಕೆ ಜಿಲ್ಲಾಧಿಕಾರಿ ಶರತ್‌ ಬಿ. ಅಭಿನಂದನೆ

Team Udayavani, May 28, 2020, 10:38 AM IST

28-May-01

ಕಲಬುರಗಿ: ಶ್ರೀಗುರು ವಿದ್ಯಾಪೀಠಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶರತ್‌ ಬಿ. ಅಡುಗೆ ನಿರ್ಮಾಣ ಕಾರ್ಯ ವೀಕ್ಷಿಸಿ, ಊಟ ಮಾಡಿದರು.

ಕಲಬುರಗಿ: ಅನ್ನದಾಸೋಹ ಹಾಗೂ ಆಶ್ರಯ ಕಲ್ಪಿಸುವುದು ದೊಡ್ಡ ಸೇವಾ ಕಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಹೇಳಿದರು. ಕೋವಿಡ್ ವಾರಿಯರ್ಗೆ ಆಹಾರ ಪೂರೈಸುತ್ತಿರುವ ನಗರದ ಹೊರ ವಲಯದಲ್ಲಿರುವ ತಾಲೂಕಿನ ಖಣದಾಳ ಗ್ರಾಮದ ಶ್ರೀಗುರು ವಿದ್ಯಾಪೀಠ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ, ಅಡುಗೆ ನಿರ್ಮಾಣ ಕಾರ್ಯ ವೀಕ್ಷಿಸಿ, ಜತೆಗೆ ಊಟ ಮಾಡಿ ಅವರು ಮಾತನಾಡಿದರು.

ಈ ಹಿಂದೆ ಬರಗಾಲದ ಸಮಯದಲ್ಲಿ ನಂದಿವನದಲ್ಲಿ ಎತ್ತುಗಳಿಗೆ ಹಾಗೂ ರೈತರಿಗೆ ಆಶ್ರಯ ಕಲ್ಪಿಸಿ, ಉಚಿತ ಮೇವು ಮತ್ತು ಊಟ ನೀಡುವ ಮೂಲಕ ಜತೆಗೆ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರಿನ ಸೌಕರ್ಯ ಹಾಗೂ ಕೋವಿಡ್‌ -19 ವಾರಿಯರ್ಸ್‌ಗೆ ಉಚಿತವಾಗಿ ಆಹಾರ ಪೂರೈಸುತ್ತಿರುವುದು ನಿಜಕ್ಕೂ ಮಾದರಿ ಕಾರ್ಯಗಳಾಗಿವೆ ಎಂದರು.

ವಿದ್ಯಾಪೀಠ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಬಸವರಾಜ ದಿಗ್ಗಾವಿ ನೇತೃತ್ವದಲ್ಲಿ ವಸತಿ ನಿಲಯದ ಉಪಹಾರ ಗೃಹದಲ್ಲಿ ಸತತವಾಗಿ ಸುಮಾರು ಎರಡು ತಿಂಗಳುಗಳಿಂದ ವೈದ್ಯರು, ನರ್ಸ್‌ಗಳು, ರೋಗಿಗಳಿಗೆ ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಕೋವಿಡ್ ವಾರಿಯರ್ಗಳಿಗಾಗಿ ಆಹಾರ ತಯಾರಿಸಿ ಪೂರೈಸಲಾಗುತ್ತಿದೆ. ಇದಕ್ಕೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ಹೇಳಿದರು.

ಶ್ರೀಗುರುವಿದ್ಯಾ ಪೀಠದ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಡಿಗ್ಗಾವಿ, ಕಾರ್ಯದರ್ಶಿ ಶಿವರಾಜ ಡಿಗ್ಗಾವಿ ಡಿಸಿ ಹಾಗೂ ಸಿಇಒ ಅವರನ್ನು ಸನ್ಮಾನಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಡಾ| ರಾಜಾ ಪಿ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಗೋಪಾಲ ಕೃಷ್ಣ, ಪವನಕುಮಾರ ವಳಕೇರಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್‌ ಠಾಕೂರ್‌, ಬಸವರಾಜ ದಿಗ್ಗಾವಿ ಅವರ ತಾಯಿ ಪ್ರಮೀಳಾಬಾಯಿ ದಿಗ್ಗಾವಿ, ನಾಗರತ್ನ ಬಿ. ದಿಗ್ಗಾವಿ ಮತ್ತು ಸಂಸ್ಥೆಯ ಸಿಬ್ಬಂದಿ ಮತ್ತಿತರರು ಇದ್ದರು.

ಪತ್ರಿ ನಿತ್ಯ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿಯ ಊಟ ಸೇರಿ ದಿನವೂ ಸುಮಾರು 1600 ಜನರಿಗೆ ಊಟದ ವ್ಯವಸ್ಥೆ ಒದಗಿಸುತ್ತಿರುವ ಬಸವರಾಜ ಡಿಗ್ಗಾವಿ ಹಾಗೂ ಶಿವರಾಜ ಡಿಗ್ಗಾವಿ ಸಹೋದರರು ಸದಾ ಸಮಾಜ ಸೇವೆಯಲ್ಲಿ ನಿರತರಾಗಿತ್ತಾರೆ. ಇದು ಎಲ್ಲರಿಗೂ ಮಾದರಿ.
ಶರತ್‌ ಬಿ.,
ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.