ಕೋಳಕೂರ: 27ರಿಂದ ಕುಂಭಮೇಳ-ಧರ್ಮಸಭೆ


Team Udayavani, Apr 23, 2022, 12:25 PM IST

2meeting

ಜೇವರ್ಗಿ: ತಾಲೂಕಿನ ಸುಕ್ಷೇತ್ರ ಕೋಳಕೂರ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ಧಬಸವೇಶ್ವರ ಪುರಾಣ ಮಹಾ ಮಂಗಲೋತ್ಸವ ನಿಮಿತ್ತ ಕುಂಭಮೇಳ ಹಾಗೂ ಧಾರ್ಮಿಕ ಸಭೆ ಏ.27, 28ರಂದು ನಡೆಯಲಿದೆ.

ಕಳೆದ ಏ.2ರಿಂದ ಕೋಳಕೂರಿನ ಸಿದ್ಧಬಸವೇಶ್ವರ ಸಮುದಾಯ ಭವನದ ಆವರಣದಲ್ಲಿ ವಡಗೇರಾದ ನಾಗಯ್ಯಶಾಸ್ತ್ರೀಗಳಿಂದ ಸಿದ್ಧಬಸವೇಶ್ವರ ಪುರಾಣ ಪ್ರಾರಂಭವಾಗಿದೆ. ಏ.26ರಂದು ರಾತ್ರಿ 10 ಗಂಟೆಯಿಂದ ಗುರುನಾಥ ಮಾಸ್ತರ ಮತ್ತು ರೇಖಾ ಹರನಾಳ ಅವರಿಂದ ಡೊಳ್ಳಿನ ಪದ ಕಾರ್ಯಕ್ರಮ ಜರುಗುವುದು.

ಏ.27ರಂದು ಪುರವಂತರ ಸೇವೆ, ವಿವಿಧ ಕಲಾ ತಂಡಗಳೊಂದಿಗೆ ಊರಿನ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ. ಸಂಜೆ ಪುರಾಣ ಮಹಾಮಂಗಲಗೊಳ್ಳುವುದು. ಏ.28ರಂದು ಸಂಜೆ 5 ಗಂಟೆಗೆ ಬಾಳೆಹೊನ್ನೂರಿನ ಡಾ| ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರನ್ನು ಸಾರೋಟಿನಲ್ಲಿ ಮೆರವಣಿಗೆ ಮಾಡಿ, ಅದ್ಧೂರಿ ಸ್ವಾಗತ ಕೋರಲಾಗುತ್ತಿದೆ. ಸಂಜೆ 8 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ರಂಭಾಪುರಿ ಜಗದ್ಗುರು ಡಾ| ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಸಾನಿಧ್ಯ, ರೋಜಾಮಠದ ಕೆಂಚಬಸವ ಶಿವಾಚಾರ್ಯರು ನೇತೃತ್ವ ವಹಿಸುವರು.

ಸೊನ್ನದ ಡಾ| ಶಿವಾನಂದ ಸ್ವಾಮೀಜಿ, ಬಡದಾಳ ತೇರಿನಮಠದ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು, ಫಿರೋಜಾಬಾದನ ಗುರುಬಸವ ಸ್ವಾಮೀಜಿ, ಕಡಕೋಳದ ಡಾ| ರುದ್ರಮುನಿ ಶಿವಾಚಾರ್ಯರು, ಜೇರಟಗಿಯ ಮಹಾಂತ ಸ್ವಾಮೀಜಿ, ಶ್ರೀನಿವಾಸ ಸರಡಗಿಯ ರೇವಣಸಿದ್ಧ ಶಿವಾಚಾರ್ಯರು, ಹೊನ್ನಕಿರಣಗಿಯ ಚಂದ್ರಗುಂಡ ಶಿವಾಚಾರ್ಯರು, ಡಾ| ಅಪ್ಪಾರಾವ್‌ ಮುತ್ಯಾ ಮಹಾರಾಜರು, ಬಸವಕಲ್ಯಾಣದ ಡಾ| ಅಭಿನವ ಶರಣಶಂಕರಲಿಂಗ ಮಹಾರಾಜರು, ಬಸವಪಟ್ಟಣದ ಮರೆಪ್ಪ ಶರಣರು, ಚಿತ್ತಾಪುರದ ಸೋಮಶೇಖರ ಶಿವಾಚಾರ್ಯರು, ಕುಮಸಗಿಯ ಅಭಿನವ ವೆಂಕಟೇಶ್ವರ ಸ್ವಾಮೀಜಿ, ಬಬಲಾದನ ಶಿವಮೂರ್ತಿ ಶಿವಾಚಾರ್ಯರು, ಹಲಕರ್ಟಿ ಮುನೀಂದ್ರ ಶಿವಾಚಾರ್ಯರು ಪಾಲ್ಗೊಳ್ಳಿದ್ದಾರೆ.

ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಹಾಗೂ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೆಯ ಪಾಟೀಲ ರೇವೂರ ಧರ್ಮಸಭೆ ಉದ್ಘಾಟಿಸುವರು. ಶಾಸಕ ಡಾ| ಅಜಯಸಿಂಗ್‌ ಅದ್ಯಕ್ಷತೆ ವಹಿಸುವರು. ಸಂಸದ ಡಾ| ಉಮೇಶ ಜಾಧವ, ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಸೇಡಂ ದ್ವನಿ ಸುರುಳಿ ಬಿಡುಗಡೆ ಮಾಡುವರು. ಭಾವಚಿತ್ರಕ್ಕೆ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಪೂಜೆ ಸಲ್ಲಿಸುವರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ, ಮಾಜಿ ಎಂಎಲ್ಸಿ ಅಲ್ಲಮಪ್ರಭು ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮಾಜಿ ಮೇಯರ್‌ ಶರಣಕುಮಾರ ಮೋದಿ, ರಾಜಶೇಖರ ಸೀರಿ, ಅಶೋಕಸಾಹು ಗೋಗಿ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಇದೇ ವೇಳೆ ಉದ್ಯಮಿ ಬಸವಂತರಾವ್‌ ಪಾಟೀಲ ಕಣ್ಣಿ, ಸಾಹಿತಿ ಬಂಡೆಪ್ಪ ಹಳ್ಳಿ ಅವರನ್ನು ಸತ್ಕರಿಸಲಾಗುವುದು ಎಂದು ದೇವಸ್ಥಾನ ಟ್ರಸ್ಟ್‌ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.