ರಾಜಕಾರಣಿಗಳಿಂದ ರೈತರು ದೂರವಿರಲಿ; ದಯಾನಂದ ಪಾಟೀಲ

ಕಾಳಜಿ ಇದ್ದರೆ ಅವರು ಬೆಳೆದ ಬೆಳೆಗೆ ಬೆಂಬಲ ಬೆಲೆ ಕೊಟ್ಟರಷ್ಟೇ ಸಾಕು

Team Udayavani, Sep 4, 2021, 5:41 PM IST

ರಾಜಕಾರಣಿಗಳಿಂದ ರೈತರು ದೂರವಿರಲಿ; ದಯಾನಂದ ಪಾಟೀಲ

ಮಾದನಹಿಪ್ಪರಗಿ: ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಪಿಎಂಸಿ ಕಾಯ್ದೆಯೆಂಬ ಅಸ್ತ್ರದಿಂದ ರೈತರ ಮೇಲೆ ಯುದ್ಧಸಾರಿವೆ.  ಹೀಗಾಗಿ ರೈತರು ರಾಜಕಾರಣಿಗಳಿಂದ ದೂರವಿರಿ ಎಂದು ನವಕರ್ನಾಟಕ ರಾಜ್ಯ ರೈತ ಸಂಘದ ರಾಜಾಧ್ಯಕ್ಷ ದಯಾನಂದ ಪಾಟೀಲ ಹೇಳಿದರು.

ಸ್ಥಳೀಯ ಶಿವಲಿಂಗೇಶ್ವರ ವಿರಕ್ತ ಮಠದದಲ್ಲಿ ಶುಕ್ರವಾರ ನಡೆದ ನವ ಕರ್ನಾಟಕ ರಾಜ್ಯ ರೈತ ಸಂಘದ ಆಳಂದ ತಾಲೂಕು ಅಧ್ಯಕ್ಷ ಮತ್ತು ಮಾದನಹಿಪ್ಪರಗಿ ಹೋಬಳಿ ಮಟ್ಟದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸಮಾರಂಭದಲ್ಲಿ ಅವರು ಮಾತನಾಡಿದರು. ಸರಕಾರಿ ಅಧಿಕಾರಿಗಳು ಕೃಷಿ ಕೂಲಿ ಕಾರ್ಮಿಕರಿಗೆ ಸರಕಾರದ ಸೌಲಭ್ಯಗಳು ನೇರವಾಗಿ ಕೊಡುತ್ತಿಲ್ಲ.

ಕೃಷಿ ಇಲಾಖೆಯು ಬೇರೆ ಬೇರೆ ಸಿರಿದಾನ್ಯಗಳನ್ನು ಬೆಳೆಯಲು ಹೇಳುತ್ತಾರೆ. ಆದರೆ ಅದರಿಂದ ಬಡ ರೈತರು ಬಾಳು ಬೆಳಗುವುದಿಲ್ಲ. ಅನ್ನ ಕೊಡುವ ರೈತರ ಬಗ್ಗೆ ಕಾಳಜಿ ಇದ್ದರೆ ಅವರು ಬೆಳೆದ ಬೆಳೆಗೆ ಬೆಂಬಲ ಬೆಲೆ ಕೊಟ್ಟರಷ್ಟೇ ಸಾಕು ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಸತೀಶ ಗುತ್ತೇದಾರ ಮಾತನಾಡಿ, ರೈತರು ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಎಪಿಎಂಎಸಿ ಕಾಯ್ದೆ ಮಾರಕವಾಗಿದೆ. ಇಂತಹವುಗಳ ಬಗ್ಗೆ ರೈತರು ಧ್ವನಿಯೆತ್ತಬೇಕಾಗಿದೆ ಎಂದರು. ನೂತನವಾಗಿ ಮಾದನಹಿಪ್ಪರಗಿ ಹೋಬಳಿ ಶಾಖೆಯ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿನಾಥ ಮೈಂದರಗಿ ಮಾತನಾಡಿ, ನಿಜವಾದ ರೈತರಿಗೆ ಸರಕಾರಿ ಸೌಲಭ್ಯಗಳು ಗೊತ್ತಿಲ್ಲ. ಸರಕಾರಿ ಸೌಲಭ್ಯಗಳು ರೈತರಿಗೆ ಸಿಗುವಂತಾಗಬೇಕಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದರು.

ನೂತನವಾಗಿ ತಾಲೂಕಾಧ್ಯಕ್ಷರಾಗಿ ಆಯ್ಕೆಯಾದ ದರ್ಗಾಶಿರೂರಿನ ಶಿವಲಿಂಗಪ್ಪ ಪೊಲೀಸ್‌ ಪಾಟೀಲ ಮಾತನಾಡಿದರು. ಮಠದ ಪೀಠಾಧಿಪತಿಗಳಾದ ಅಭಿನವ ಶಿವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು. ನವ ಕರ್ನಾಟಕ ರಾಜ್ಯ ರೈತರ ಸಂಘದ ಗೌರವಾಧ್ಯಕ್ಷ ಸಿದ್ದರಾಮ ಪೊಲೀಸ್‌ ಪಾಟೀಲ, ಜಿಲ್ಲಾಧ್ಯಕ್ಷ ಸತೀಶ ಗುತ್ತೇದಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಯ ಕಾಂಬಳೆ, ಅಮರನಾಥ ಝಳಕಿ, ಜಿಲ್ಲಾ ಉಪಾಧ್ಯಕ್ಷ ಸಂತೋಷ ಝಳಕಿ, ಜಿಲ್ಲಾ ವಕ್ತಾರ ಜಗದೇವ ಕುಂಬಾರ, ಸಂಘದ ಪ್ರಮುಖರಾದ ಚಂದ್ರಕಾಂತ ಓಗೆ, ಸೂರ್ಯಕಾಂತ ಕುಂಬಾರ, ರಾಜಣ್ಣ ಕುಂಬಾರ ಕಾರಬಾರಿ, ಚಿತ್ತಾಪುರ ತಾಲೂಕಾಧ್ಯಕ್ಷ ರವಿಗುತ್ತೇದಾರ, ಸಾತಲಿಂಗಪ್ಪ ಸಲಗರ ಶೀಪು ಕೊಳ್ಳೆ, ಘಾಳಪ್ಪ ಹಡಲಗಿ, ಮಹಾಂತಯ್ಯ ಸ್ವಾಮಿ, ಶಾಂತಮಲ್ಲ ಭಾವಿಕಟ್ಟಿ ಇದ್ದರು.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

3

Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

police crime

Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು

Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ

Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.