ಸಮಾಜವಾದಿ ಕ್ರಾಂತಿ ಮುಂದುವರಿಸೋಣ: ಮಾನೆ


Team Udayavani, Apr 1, 2022, 10:48 AM IST

6maane

ವಾಡಿ: ಕೇವಲ ತನ್ನ 23ನೇ ವಯಸ್ಸಿನಲ್ಲಿ ಗಲ್ಲುಗಂಬಕ್ಕೆ ಮುತ್ತಿಟ್ಟು ಭಾರತ ಸ್ವಾತಂತ್ರ್ಯ ಚಳವಳಿ ದಿಕ್ಕು ಬದಲಿಸಿದ ಹುತಾತ್ಮ ಭಗತ್‌ಸಿಂಗ್‌ ಅವರ ಸಮಾಜವಾದಿ ಕ್ರಾಂತಿ ಹೋರಾಟ ಮುನ್ನಡೆಸುವ ಜವಾಬ್ದಾರಿ ಪ್ರತಿಯೊಬ್ಬ ಯುವಕ-ಯುವತಿಯರ ಮೇಲಿದೆ ಎಂದು ಆಲ್‌ ಇಂಡಿಯಾ ಕಿಸಾನ್‌ ಕೇತ್‌ ಮಜ್ದೂರ್‌ ಯೂನಿಯನ್‌ (ಎಐಕೆಕೆಎಂಎಸ್‌) ಜಿಲ್ಲಾಧ್ಯಕ್ಷ ಗಣಪತರಾವ್‌ ಮಾನೆ ಹೇಳಿದರು.

ಮಹಾನ್‌ ಕ್ರಾಂತಿಕಾರಿ ಶಹೀದ್‌ ಭಗತ್‌ಸಿಂಗ್‌ ಹುತಾತ್ಮದಿನದ ನಿಮಿತ್ತ ಹಳಕರ್ಟಿ ಗ್ರಾಮದಲ್ಲಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ, ಎಐಡಿವೈಒ ಯುವಜನ ಸಂಘಟನೆ, ಎಐಕೆಕೆಎಂಎಸ್‌ ರೈತ ಸಂಘಟನೆ ವತಿಯಿಂದ ಏರ್ಪಡಿಸಲಾಗಿದ್ದ ಪಂಜಿನ ಮೆರವಣಿಗೆ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರಾಂತಿಕಾರಿಗಳಾದ ಭಗತ್‌ಸಿಂಗ್‌, ರಾಜಗುರು, ಸುಖದೇವ ಬ್ರಿಟಿಷರಿಂದ ನೇಣಿಗೆ ಶರಣಾಗುವ ದಿನ ಭಾರತದಲ್ಲಿ ಯುವಜನರು ಇಂಕ್ವಿಲಾಬ್‌ ಜಿಂದಾಬಾದ್‌, ಕ್ರಾಂತಿ ಚಿರಾಯುವಾಗಲಿ ಎಂಬ ಘೋಷಣೆಗಳನ್ನು ಕೂಗಿ ಬಿಳಿಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಸಾವಿನಲ್ಲೂ ಹೋರಾಟದ ಕಿಚ್ಚು ಹೊತ್ತಿಸಿದ ಸಿಡಿಲಮರಿ ಭಗತ್‌ಸಿಂಗ್‌ ಕನಸಿನ ಸ್ವಾತಂತ್ರ್ಯ ಪಡೆಯಲು ಜಾತಿ ಧರ್ಮಗಳ ಬೇಧ ತೊರೆದು ಸಂಘಟಿತರಾಗಬೇಕು ಎಂದು ಕರೆ ನೀಡಿದರು. ಗ್ರಾಮದ ಮುಖಂಡ ಪಾಲ್ಗುಣಪ್ಪ ಗಂಜಿ ಅತಿಥಿಯಾಗಿದ್ದರು.

ಎಸ್‌ಯುಸಿಐ ವಾಡಿ ಕಾರ್ಯದರ್ಶಿ ವೀರಭದ್ರಪ್ಪ ಆರ್‌.ಕೆ, ಎಐಡಿಎಸ್‌ಒ ಅಧ್ಯಕ್ಷ ವೆಂಕಟೇಶ ದೇವದುರ್ಗ, ಎಐಯುಟಿಯುಸಿ ಜಿಲ್ಲಾ ಮುಖಂಡ ಶರಣು ಹೇರೂರ, ಎಐಕೆಕೆಎಂಎಸ್‌ ಅಧ್ಯಕ್ಷ ಚೌಡಪ್ಪ ಗಂಜಿ, ಮುಖಂಡರಾದ ದತ್ತು ಹುಡೇಕರ, ಮಲ್ಲಿನಾಥ ಹುಂಡೇಕಲ್‌, ಗೌತಮ ಪರತೂರಕರ, ದೊಡ್ಡಪ್ಪ ಹೊಸೂರ, ಅಯ್ಯಪ್ಪ ಹುಳಗೋಳ, ಶಿವುಕುಮಾರ ಆಂದೋಲಾ, ಸಾಬಣ್ಣ ಸುಣಗಾರ, ಗೋವಿಂದ ಯಳವಾರ, ಸಿದ್ಧು ಮದ್ರಿ, ಸಿದ್ಧಾರ್ಥ ತಿಪ್ಪನರ್‌, ಬಸವರಾಜ ನಾಟೀಕಾರ, ಶ್ರೀಶೈಲ ಕೆಂಚಗುಂಡಿ ಸೇರಿದಂತೆ ಗ್ರಾಮದ ನೂರಾರು ಯುವಕರು, ರೈತರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಗ್ರಾಮದ ವಿವಿಧ ಗಲ್ಲಿಗಳಲ್ಲಿ ಭಗತ್‌ಸಿಂಗ್‌ ಭಾವಚಿತ್ರ ಹಾಗೂ ದೀವಟಿಗೆ ಹಿಡಿದು ಮೆರವಣಿಗೆ ನಡೆಸಲಾಯಿತು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.