![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 1, 2022, 10:48 AM IST
ವಾಡಿ: ಕೇವಲ ತನ್ನ 23ನೇ ವಯಸ್ಸಿನಲ್ಲಿ ಗಲ್ಲುಗಂಬಕ್ಕೆ ಮುತ್ತಿಟ್ಟು ಭಾರತ ಸ್ವಾತಂತ್ರ್ಯ ಚಳವಳಿ ದಿಕ್ಕು ಬದಲಿಸಿದ ಹುತಾತ್ಮ ಭಗತ್ಸಿಂಗ್ ಅವರ ಸಮಾಜವಾದಿ ಕ್ರಾಂತಿ ಹೋರಾಟ ಮುನ್ನಡೆಸುವ ಜವಾಬ್ದಾರಿ ಪ್ರತಿಯೊಬ್ಬ ಯುವಕ-ಯುವತಿಯರ ಮೇಲಿದೆ ಎಂದು ಆಲ್ ಇಂಡಿಯಾ ಕಿಸಾನ್ ಕೇತ್ ಮಜ್ದೂರ್ ಯೂನಿಯನ್ (ಎಐಕೆಕೆಎಂಎಸ್) ಜಿಲ್ಲಾಧ್ಯಕ್ಷ ಗಣಪತರಾವ್ ಮಾನೆ ಹೇಳಿದರು.
ಮಹಾನ್ ಕ್ರಾಂತಿಕಾರಿ ಶಹೀದ್ ಭಗತ್ಸಿಂಗ್ ಹುತಾತ್ಮದಿನದ ನಿಮಿತ್ತ ಹಳಕರ್ಟಿ ಗ್ರಾಮದಲ್ಲಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ, ಎಐಡಿವೈಒ ಯುವಜನ ಸಂಘಟನೆ, ಎಐಕೆಕೆಎಂಎಸ್ ರೈತ ಸಂಘಟನೆ ವತಿಯಿಂದ ಏರ್ಪಡಿಸಲಾಗಿದ್ದ ಪಂಜಿನ ಮೆರವಣಿಗೆ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರಾಂತಿಕಾರಿಗಳಾದ ಭಗತ್ಸಿಂಗ್, ರಾಜಗುರು, ಸುಖದೇವ ಬ್ರಿಟಿಷರಿಂದ ನೇಣಿಗೆ ಶರಣಾಗುವ ದಿನ ಭಾರತದಲ್ಲಿ ಯುವಜನರು ಇಂಕ್ವಿಲಾಬ್ ಜಿಂದಾಬಾದ್, ಕ್ರಾಂತಿ ಚಿರಾಯುವಾಗಲಿ ಎಂಬ ಘೋಷಣೆಗಳನ್ನು ಕೂಗಿ ಬಿಳಿಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಸಾವಿನಲ್ಲೂ ಹೋರಾಟದ ಕಿಚ್ಚು ಹೊತ್ತಿಸಿದ ಸಿಡಿಲಮರಿ ಭಗತ್ಸಿಂಗ್ ಕನಸಿನ ಸ್ವಾತಂತ್ರ್ಯ ಪಡೆಯಲು ಜಾತಿ ಧರ್ಮಗಳ ಬೇಧ ತೊರೆದು ಸಂಘಟಿತರಾಗಬೇಕು ಎಂದು ಕರೆ ನೀಡಿದರು. ಗ್ರಾಮದ ಮುಖಂಡ ಪಾಲ್ಗುಣಪ್ಪ ಗಂಜಿ ಅತಿಥಿಯಾಗಿದ್ದರು.
ಎಸ್ಯುಸಿಐ ವಾಡಿ ಕಾರ್ಯದರ್ಶಿ ವೀರಭದ್ರಪ್ಪ ಆರ್.ಕೆ, ಎಐಡಿಎಸ್ಒ ಅಧ್ಯಕ್ಷ ವೆಂಕಟೇಶ ದೇವದುರ್ಗ, ಎಐಯುಟಿಯುಸಿ ಜಿಲ್ಲಾ ಮುಖಂಡ ಶರಣು ಹೇರೂರ, ಎಐಕೆಕೆಎಂಎಸ್ ಅಧ್ಯಕ್ಷ ಚೌಡಪ್ಪ ಗಂಜಿ, ಮುಖಂಡರಾದ ದತ್ತು ಹುಡೇಕರ, ಮಲ್ಲಿನಾಥ ಹುಂಡೇಕಲ್, ಗೌತಮ ಪರತೂರಕರ, ದೊಡ್ಡಪ್ಪ ಹೊಸೂರ, ಅಯ್ಯಪ್ಪ ಹುಳಗೋಳ, ಶಿವುಕುಮಾರ ಆಂದೋಲಾ, ಸಾಬಣ್ಣ ಸುಣಗಾರ, ಗೋವಿಂದ ಯಳವಾರ, ಸಿದ್ಧು ಮದ್ರಿ, ಸಿದ್ಧಾರ್ಥ ತಿಪ್ಪನರ್, ಬಸವರಾಜ ನಾಟೀಕಾರ, ಶ್ರೀಶೈಲ ಕೆಂಚಗುಂಡಿ ಸೇರಿದಂತೆ ಗ್ರಾಮದ ನೂರಾರು ಯುವಕರು, ರೈತರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಗ್ರಾಮದ ವಿವಿಧ ಗಲ್ಲಿಗಳಲ್ಲಿ ಭಗತ್ಸಿಂಗ್ ಭಾವಚಿತ್ರ ಹಾಗೂ ದೀವಟಿಗೆ ಹಿಡಿದು ಮೆರವಣಿಗೆ ನಡೆಸಲಾಯಿತು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.