![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Nov 1, 2021, 11:17 AM IST
ಕಲಬುರಗಿ: ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಶ್ರೀಮಂತವಾಗಿರುವ ಕಲಬುರಗಿ ಈಗ ಮತ್ತೆ ಸಾಹಿತ್ಯ ಚಟುವಟಿಕೆಗಳ ಮೂಲಕವೇ ಗಮನ ಸೆಳೆಯುತ್ತಿದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ದಯಾನಂದ ಅಗಸರ ಹೇಳಿದರು.
ನಗರದ ಕಲಾ ಮಂಡಳದಲ್ಲಿ ರವಿವಾರ ಮಾತೋಶ್ರೀ ಈರಣ್ಣ ವಡ್ಡನಕೇರಿ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಐದನೇ ವರ್ಷದ ಅವ್ವ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಲಬುರಗಿಯಲ್ಲಿ ಇತ್ತೀಚೆಗೆ ನಿರಂತರವಾಗಿ ಸಾಹಿತ್ಯ ಚಟುವಟಿಕೆಗಳು ನಡೆಯುತ್ತಿವೆ. ಇದರ ಜತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿರುವವರನ್ನು ಗುರುತಿಸುವ ಕೆಲಸ ಸಂಘ-ಸಂಸ್ಥೆಗಳ ಮೂಲಕ ಆಗುತ್ತಿರುವುದು ಸಂತಸದ ಸಂಗತಿ ಎಂದರು.
ನಮ್ಮ ಭಾಗದ ಸಾಧಕರು ಬೆಂಗಳೂರು ಸೇರಿ ಇತರ ನಗರಗಳಲ್ಲಿ ಹೋಗಿ ಪ್ರಶಸ್ತಿಗಳನ್ನು ಸ್ವೀಕರಿಸುವ ಪರಿಸ್ಥಿತಿ ಇತ್ತು. ಆದರೆ, ಈಗ ಅಲ್ಲಿನ ಸಾಧಕರನ್ನು ನಾವೇ ಗುರುತಿಸಿ, ಬೆಂಗಳೂರಿಗರಿಗೂ ಪ್ರಶಸ್ತಿ ನೀಡುವಂತಾಗಿದೆ. ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೋಗುವುದನ್ನು ನಾನು ತಪ್ಪಿಸುವುದಿಲ್ಲ. ಏಕೆಂದರೆ ವಿಶ್ವವಿದ್ಯಾಲಯದಲ್ಲಿ ಈ ರೀತಿಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೇರಣೆ ನೀಡಿ ಪ್ರೋತ್ಸಾಹಿಸಬೇಕಿದೆ ಎಂದು ಹೇಳಿದರು.
ಅತ್ತಿವೇರಿ ಬಸವಧಾನದ ಬಸವೇಶ್ವರಿ ಮಾತಾಜಿ ಸಾನ್ನಿಧ್ಯ ವಹಿಸಿದ್ದರು. ಅಖಲ ಭಾರತ ಶರಣ ಸಾಹಿತ್ಯ ಪರಿಷತ್ ಉಪಾಧ್ಯಕ್ಷ ಅಪ್ಪಾರಾವ್ ಅಕ್ಕೋಣೆ ಅಧ್ಯಕ್ಷತೆ ವಹಿಸಿದ್ದರು. ಪ್ರತಿಷ್ಠಾನದ ಅಧ್ಯಕ್ಷ ಡಾ| ಶರಣಬಸಪ್ಪ ವಡ್ಡನಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಿದ್ಧಲಿಂಗ ಬುಕ್ ಡಿಪೋ ಪ್ರಕಾಶಕ ಬಸವರಾಜ ಕೊನೆಕ್, ಪ್ರಾಧ್ಯಾಪಕ ಡಾ| ವಿಜಯಕುಮಾರ ಪರುತೆ, ಪ್ರಮುಖರಾದ ರವೀಂದ್ರ ಮಾಲಿಪಾಟೀಲ, ಅಣವೀರಪ್ಪ, ಡಾ| ಸೋಮನಾಥ ಬಿರಾದಾರ, ಅಂಬಾರಾಯ ಬಟ್ಟೆ, ಅರುಣಕುಮಾರ, ಡಾ| ಗಿರೀಶ ಯಡ್ರಾಮಿ, ಶ್ವೇತಾ ವಡ್ಡನಕೇರಿ, ಲಕ್ಷ್ಮೀ ಪ್ರತಾಪ ಅಂಬಾಡೆ ಮುಂತಾದವರು ಪಾಲ್ಗೊಂಡಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.