ಗ್ರಾಪಂ ಅಧಿಕಾರ ಸದ್ಬಳಕೆ ಮಾಡಿ: ಮಾಜಿ ಶಾಸಕ ಬಿ.ಆರ್‌.ಪಾಟೀಲ

ಅಧಿಕಾರ ವಿಕೇಂದ್ರಿಕರಣ ಮಾಡಿ ಚುನಾಯಿತ ಸದಸ್ಯರಿಗೆ ಅವರ ವ್ಯಾಪ್ತಿಗೆ ತಕ್ಕಂತೆ ಅಧಿಕಾರ ನೀಡಲಾಗಿದೆ.

Team Udayavani, Jul 7, 2021, 6:37 PM IST

Grama

ಆಳಂದ: ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಮಹತ್ವದ್ದುಳ್ಳದ್ದಾಗಿದ್ದು, ಅಧಿಕಾರವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಾಜಿ ಶಾಸಕ ಬಿ.ಆರ್‌. ಪಾಟೀಲ ಹೇಳಿದರು. ಪಟ್ಟಣದ ವಿವೇಕ ವರ್ಧಿನಿ ಪಬ್ಲಿಕ್‌ ಶಾಲೆ ಯಲ್ಲಿ ಹಮ್ಮಿಕೊಳ್ಳಲಾಗಿದ್ದ ಆಯ್ದ ಗ್ರಾಪಂ ಸದಸ್ಯರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಚೆಕ್‌ ಮೇಲೆ ಸಹಿ ಮಾಡುವ ಅಧಿಕಾರ ದೇಶದ ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಗಳಿಗಳಿಗೂ ಇಲ್ಲ. ಆ ಅಧಿಕಾರವನ್ನು ಗ್ರಾಪಂ ಅಧ್ಯಕ್ಷರಿಗೆ ನೀಡಲಾಗಿದೆ. ಇದನ್ನು ಅರಿಯಬೇಕು ಎಂದರು.

ದಿನ ಬೆಳಗಾದರೆ ಗ್ರಾಪಂ ಅಧ್ಯಕ್ಷರು ಪಿಡಿಒ ಮನೆ ಬಾಗಿಲಿಗೆ ಹೋಗಿ ನಿಲ್ಲುವುದನ್ನು ಬಿಡಬೇಕು. ಅಧಿಕಾರ ಬಳಸಿಕೊಂಡು ಗ್ರಾಮ ಅಭಿವೃದ್ಧಿಗೆ ಒತ್ತು ಕೊಡಬೇಕು ಎಂದು ಹೇಳಿದರು. ಗ್ರಾಮಾಭಿವೃದ್ಧಿಗೆ ಗ್ರಾಪಂಗಳೇ ನಿಜವಾದ ಶಕ್ತಿಸೌಧ, ಅಧಿಕಾರ ವಿಕೇಂದ್ರಿಕರಣ ಮಾಡಿ ಚುನಾಯಿತ ಸದಸ್ಯರಿಗೆ ಅವರ ವ್ಯಾಪ್ತಿಗೆ ತಕ್ಕಂತೆ ಅಧಿಕಾರ ನೀಡಲಾಗಿದೆ.

ಗ್ರಾಪಂ, ತಾಪಂ, ಜಿಪಂ ಕ್ಷೇತ್ರಗಳ ಕಾರ್ಯ ನಿರಂತರವಾಗಿ ನಡೆಯುತ್ತದೆ. ಮಾಜಿ ಮುಖ್ಯಮಂತ್ರಿ ದಿ| ರಾಮಕೃಷ್ಣ ಹೆಗಡೆ ಮತ್ತು  ಗ್ರಾಮಿಣಾಭಿವೃದ್ಧಿ ಸಚಿವರಾಗಿದ್ದ ಅಬ್ದುಲ್‌ ನಜೀರಸಾಬ್‌ ದೂರದೃಷ್ಟಿ ಇಟ್ಟುಕೊಂಡು ಗ್ರಾಪಂಗಳಿಗೆ ಹೆಚ್ಚಿನ ಅನುದಾನ, ಅಧಿಕಾರ ನೀಡುವ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ನೀಡಿದರು ಎಂದರು.

ಚುನಾಯಿತ ಗ್ರಾಪಂ ಸದಸ್ಯರು ಕುಡಿಯುವ ನೀರು, ಬೀದಿ ದೀಪ, ಚರಂಡಿ ಶುಚಿತ್ವ, ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಒದಗಿಸಲು ಆದ್ಯತೆ ನೀಡಬೇಕು. ನರೇಗಾದಲ್ಲಿ ಸಸಿಗಳನ್ನು ನೆಡುವದು, ಹೊಲಗಳಿಗೆ ಹೋಗುವ ದಾರಿ, ನಾಲಾ, ಚೆಕ್‌ ಡ್ಯಾಂ, ಬಾವಿಗಳ ಹೂಳೆತ್ತುವ ಕಾರ್ಯಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಪಂಚಾಯಿತಿ ಪರಿಷತ್‌ ಪ್ರಧಾನ ಕಾರ್ಯದರ್ಶಿ ಕೆ.ಎಸ್‌. ಸತೀಶ ಉಪನ್ಯಾಸ ನೀಡಿ, ಗ್ರಾಪಂ ಅಧ್ಯಕ್ಷರು, ಸದಸ್ಯರು ಶಾಸಕರು, ಸಂಸದರ ಕಡೆ ಮುಖ ಮಾಡದೇ ಗ್ರಾಪಂ ಅನುದಾನವನ್ನೇ ಬಳಸಿ ದಕ್ಷ ಹಾಗೂ ಪ್ರಮಾಣಿಕತೆಯಿಂದ ಸೇವೆ ಮಾಡಿದರೆ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಎಂದರು.

ಮುಖಂಡರಾದ ಶರಣಗೌಡ ಪಾಟೀಲ, ಸತೀಶ ಪನಶಟ್ಟಿ, ಗಣೇಶ ಪಾಟೀಲ, ಮಲ್ಲಿನಾಥ ಪಾಟೀಲ, ರಾಮಚಂದ್ರ ಸುತಾರ, ಶಿವಪುತ್ರಪ್ಪ ಕೊಟ್ಟರಕಿ ಇದ್ದರು. ನಂತರ ಗ್ರಾಪಂಗೆ ಒಂದರಂತೆ ಪಂಚಾಯತ್‌ ರಾಜ್‌ ಕಾಯ್ದೆ, ಸದಸ್ಯರ ಹಕ್ಕು, ಕರ್ತವ್ಯ, ಪಿಡಿಒ ಕೆಲಸ ಕುರಿತ ಪುಸ್ತಕ ವಿತರಿಸಲಾಯಿತು. ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರು, ಸದಸ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.