ಇಎಸ್‌ಐ ಆಸ್ಪತ್ರೆಗೆ ಆಧುನಿಕ ಸ್ಪರ್ಶ


Team Udayavani, Feb 17, 2022, 9:52 AM IST

1ESI

ಕಲಬುರಗಿ: ಮೂಲಭೂತ ಸೌಕರ್ಯಗಳಿಲ್ಲದ ಜಿಲ್ಲೆಯ ಶಹಬಾದ ಪಟ್ಟಣದ ಇಎಸ್‌ಐ ಆಸ್ಪತ್ರೆ ಪುನಶ್ಚೇತನಕ್ಕೆ ತಕ್ಷಣವೇ ಕ್ರಿಯಾಯೋಜನೆ ರೂಪಿಸಬೇಕೆಂದು ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್‌. ನಿರಾಣಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೆಂಗಳೂರಿನ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಬುಧವಾರ ಸಭೆ ನಡೆಸಿದ ಸಚಿವರು, ಶಹಬಾದ್‌ನ ಇಎಸ್‌ಐ ಆಸ್ಪತ್ರೆ ಪುನಶ್ಚೇತನಗೊಳಿಸಲು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸಂಬಂಧಪಟ್ಟ ಅಧಿ ಕಾರಿಗಳಿಗೆ ನಿರ್ದೇಶನ ನೀಡಿದರು.

ಶಹಾಬಾದ ಪಟ್ಟಣದ ವಾಡಿ ರಸ್ತೆಯಲ್ಲಿರುವ ಶಿಥಿಲಾವಸ್ಥೆಯಲ್ಲಿರುವ ಇಎಸ್‌ಐ ಆಸ್ಪತೆಯನ್ನು ಆಧುನಿಕ ಸೌಲಭ್ಯ ಕಲ್ಪಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಬೇಕು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯೋನ್ಮುಖರಾಗಬೇಕು. ಆಸ್ಪತ್ರೆ ಆವರಣದಲ್ಲಿ ಬೆಳೆದಿರುವ ಗಿಡ-ಗಂಟೆಗಳು, ಬಿರುಕು ಬಿಟ್ಟಿರುವ ಗೋಡೆಗಳು, ಕೈಕೊಟ್ಟಿರುವ ವಿದ್ಯುತ್‌ ಸಂಪರ್ಕ, ಹಾಳಾಗಿರುವ ಬೆಡ್‌ ಗಳು, ಚಿಕಿತ್ಸಾ ಕೊಠಡಿ, ರೋಗಿಗಳು ತಂಗುವ ಕೊಠಡಿಗಳು, ಶೌಚಾಲಯ, ಅಡುಗೆ ಮನೆ, ಸ್ನಾನದ ಕೋಣೆ ಸೇರಿದಂತೆ ಎಲ್ಲ ರೀತಿಯ ಸವಲತ್ತು ಕಲ್ಪಿಸಬೇಕು ಎಂದು ಸಚಿವರು ಸೂಚಿಸಿದರು.

ಈ ಆಸ್ಪತ್ರೆ ಪುನಶ್ಚೇತನವಾದರೆ ಸಾವಿರಾರು ಜನರಿಗೆ ಆರೋಗ್ಯ ಸೌಲಭ್ಯ ಸಿಗಲಿದೆ. ಪಾಳು ಬಿದ್ದಿರುವ ಆಸ್ಪತ್ರೆಗೆ ಆಧುನಿಕ ಸ್ಪರ್ಶ ನೀಡಬೇಕು. ಸರ್ಕಾರದ ವತಿಯಿಂದ ಎಲ್ಲ ರೀತಿಯ ಆರ್ಥಿಕ ನೆರವು ನೀಡಲಾಗುವುದು. ಇದು ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆ ಆಗಿರುವುದರಿಂದ ಎಷ್ಟು ಸಾಧ್ಯವೋ ಅಷ್ಟು ಬೇಗ ಕೆಲಸ ಆರಂಭವಾಗಲಿ ಎಂದು ಹೇಳಿದರು.

ಕಾರ್ಮಿಕ ಸಚಿವ ಶಿವರಾಮ ಹೆಬ್ಟಾರ್‌ ಮಾತನಾಡಿ, ಐಎಸ್‌ಐ ಆಸ್ಪತ್ರೆಗಳು ಕೇಂದ್ರ ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಬರುವುದರಿಂದ ಇಲಾಖೆಯ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಜತೆಗೆ ನಮ್ಮ ಇಲಾಖೆಯಿಂದ ಆರ್ಥಿಕ ನೆರವು ಸೇರಿದಂತೆ ಅಗತ್ಯ ಸಹಕಾರ ನೀಡಲು ಸಿದ್ಧರಿದ್ದೇವೆ ಎಂದರು.

ಟಾಪ್ ನ್ಯೂಸ್

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

byndoor

Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ

1

Fire Accident: ಕುಂಬ್ರದಲ್ಲಿ ಗುಡಿಸಲು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.