ನೀರು ನಿರ್ವಹಣೆಯಲ್ಲಿ ಸಹಭಾಗಿತ್ವ ಅಗತ್ಯ; ಶರಣಪ್ಪ ತಳವಾರ

ಬಳಕೆದಾರರ ಸಂಘಗಳಿಗೆ ತಲಾ ಒಂದು ಲಕ್ಷ ರೂ. ಚೆಕ್‌ ವಿತರಿಸಿ ಅವರು ಮಾತನಾಡಿದರು.

Team Udayavani, Jan 21, 2021, 3:41 PM IST

ನೀರು ನಿರ್ವಹಣೆಯಲ್ಲಿ ಸಹಭಾಗಿತ್ವ ಅಗತ್ಯ; ಶರಣಪ್ಪ ತಳವಾರ

ಶಹಾಪುರ: ನೀರು ಬಳಕೆದಾರ ಸಂಘಗಳ ಪದಾಧಿಕಾರಿಗಳು, ಸದಸ್ಯರು ನೀರು ಬಳಕೆ ಕುರಿತು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಇದರಲ್ಲಿ ರೈತರ ಸಹಭಾಗಿತ್ವ ಅಗತ್ಯವಿದ್ದು, ರೈತರು ನೀರು ನಿರ್ವಹಣೆ ಕುರಿತು ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಚರ್ಚಿಸಿ ಸೂಕ್ತ ಮಾಹಿತಿ ಪಡೆದುಕೊಳ್ಳಬೇಕು ಎಂದು ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ ತಿಳಿಸಿದರು.

ಭೀಮರಾಯನ ಗುಡಿ ಕೃಷಿ ಮಹಾ ವಿದ್ಯಾಲಯ ಸಭಾಂಗಣದಲ್ಲಿ ಕೃಷ್ಣಾ ಕಾಡಾ (ಸಹಕಾರ ವಿಭಾಗ) ವತಿಯಿಂದ ನಡೆದ ನೀರು ಬಳಕೆದಾರರ ಸಹಕಾರ ಸಂಘಗಳ ಪದಾಧಿ ಕಾರಿಗಳು ಹಾಗೂ ಸದಸ್ಯರಿಗೆ ನೀರು ನಿರ್ವಹಣೆ, ಪುನಶ್ಚೇತನ ಕುರಿತ ಕಾರ್ಯಾಗಾರ ಉದ್ಘಾಟನೆ ಮತ್ತು ಬಳಕೆದಾರರ
ಸಂಘಗಳಿಗೆ ತಲಾ ಒಂದು ಲಕ್ಷ ರೂ. ಚೆಕ್‌ ವಿತರಿಸಿ ಅವರು ಮಾತನಾಡಿದರು.

ನೀರಿನ ಬಳಕೆ ಸಾಮರ್ಥ್ಯ ಹೆಚ್ಚಿಸುವ ಕಾರ್ಯವಾಗಬೇಕಿದೆ. ನೀರು ಬಳಕೆಗೆ ಸಂಬಂಧಿಸಿದ ಅಧಿಕಾರಿ ಇಲಾಖೆಯೊಂದಿಗೆ ಒಡಂಬಡಿಕೆ ಮತ್ತು ನೀರಿನ ಹಂಚಿಕೆಯಲ್ಲಿ ಸಮಾನತೆ ತರುವ ಕಾರ್ಯ ಸೇರಿದಂತೆ ಭೂಮಿ ಮತ್ತು ನೀರಿನ ಉತ್ಪಾದಕತೆ  ಹೆಚ್ಚಿಸಬೇಕಿದೆ. ಈ ನಿಟ್ಟಿನಲ್ಲಿ ಬಳಕೆದಾರರ ಸಂಘ ಮತ್ತು ರೈತರಿಗೆ ಬೇಕಾದ ಸವಲತ್ತುಗಳನ್ನು ಕಲ್ಪಿಸುವ ಯೋಜನೆಗಳನ್ನು ರೂಪಿಸಲಾಗುವುದು. ಅದಕ್ಕೆ ಬೇಕಾದ ಸಮರ್ಪಕ ಕೆಲಸವನ್ನು ಸರ್ಕಾರದ ಜೊತೆ ಸಂಬ ಂಧಿಸಿದ ಇಲಾಖೆಯ  ಮುಖ್ಯಕಾರ್ಯದರ್ಶಿಗಳ ಜತೆ ಮಾತುಕತೆ ನಡೆಸಿ ರೈತರಿಗೆ ಅನುಕೂಲ ಕಲ್ಪಿಸುವ ಕಾರ್ಯ ಯೋಜನೆ ರೂಪಸಲಾಗುವುದು ಎಂದರು.

ಬಳಕೆದಾರರ ಸಂಘದ ಕಚೇರಿ ಹಾಗೂ ಗೋದಾಮು ನಿರ್ಮಾಣಕ್ಕೆ ಇಲಾಖೆಯಿಂದ 7.30 ಲಕ್ಷ ರೂ. ನಿಗದಿಪಡಿಸಲಾಗಿದ್ದು, ಅದರಲ್ಲಿ ಸಂಘವು ಪ್ರತಿಶತ 20ರಂತೆ 1.46 ಲಕ್ಷ ರೂ. ಸಾಲ ಕೊಡಬೇಕಾಗುವುದು. ಅಲ್ಲದೇ ಮೂಲ ಸೌಕರ್ಯ ಒದಗಿಸಲು ಮೂರು ಲಕ್ಷ ರೂ. ವರೆಗೆ ಅನುದಾನ
ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.

ಸದ್ಯ ಶಹಾಪುರ, ಸುರಪುರ, ಜೇವರ್ಗಿ, ಸಿಂದಗಿ, ಇಂಡಿ ವ್ಯಾಪ್ತಿಯ 83 ನೀರು ಬಳಕೆದಾರರ ಸಂಘಗಳಿಗೆ ತಲಾ ಒಂದು ಲಕ್ಷ ರೂ. ಚೆಕ್‌ ವಿತರಿಸಲಾಗಿದೆ. ಬಳಕೆದಾರರ ಸಂಘಗಳ ಪದಾಧಿ ಕಾರಿಗಳು, ಸದಸ್ಯರು ಜಾಗೃತರಾಗಿ ಕಾರ್ಯ ನಿರ್ವಹಿಸುವ ಮೂಲಕ ಪ್ರಗತಿಗಾಗಿ  ಶ್ರಮಿಸಬೇಕೆಂದು ಕರೆ ನೀಡಿದರು.

ಕೃಷ್ಣಾ ಕಾಡಾ ಆಡಳಿತಾ ಧಿಕಾರಿ ಶರಣಪ್ಪ ಬೆಣೂರ, ಕಾಡಾ ಮುಖ್ಯ ಲೆಕ್ಕಾ ಧಿಕಾರಿ ರಾಜಕುಮಾರ, ಕೃಷ್ಣಾ ಕಾಡಾ ಸಹಕಾರ ಸಂಘಗಳ ಸಹಾಯಕ
ನಿಬಂಧಕ ಮಹ್ಮದ್‌ ತಾಹೇರ ಹುಸೇನ್‌, ನೀರು ಬಳಕೆದಾರರ ಮಹಾ ಮಂಡಳ ಅಧ್ಯಕ್ಷ ರಂಗಣ್ಣ ಡೆಂಗಿ, ಕಾಡಾ ನಿರ್ದೇಶಕ ಬಾಗೇಶ ಓತಿನಮಡು
ಇದ್ದರು. ಕಾರ್ಯಗಾರದಲ್ಲಿ ಬಳಕೆದಾರರ ಸಂಘದ ಪದಾ ಕಾರಿಗಳು, ಸದಸ್ಯರು ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.