ನೆತ್ತಿ ಸುಡುವ ರಣ ಬಿಸಿಲಿಗೆ ಜನತೆ ಸುಸ್ತು


Team Udayavani, Apr 19, 2022, 9:38 AM IST

1summer

ಆಳಂದ: ಎಂದಿನಂತೆ ಮಾರ್ಚ್‌ ಮುಗಿದು ಏಪ್ರಿಲ್‌ ಅರ್ಧ ಅವಧಿ ಮುಗಿಯುತ್ತಾ ಬಂದಿದೆ. ಪ್ರತಿವರ್ಷದಂತೆ ಈ ವರ್ಷವೂ ಬೇಸಿಗೆ ತಾಪ ಹೆಚ್ಚುತ್ತಲೇ ಇದ್ದು, ಗಡಿನಾಡಿನ ಜನರು ಬಸವಳಿದು ಹೋಗಿದ್ದರೇ, ಜಾನುವಾರುಗಳು ನೀರಿಗಾಗಿ ತತ್ವಾರ ಪಡುತ್ತಿವೆ.

ಮಕ್ಕಳು, ಯುವಕರು ಗಡಿನಾಡಿನಲ್ಲಿರುವ ಕೆರೆ, ಬಾವಿಗಳಲ್ಲಿ ಈಜಿ ಧಗೆ ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ವೃದ್ಧರು, ಶೆಡ್‌ ಮನೆಗಳನ್ನು ಹೊಂದಿದವರು ನೆರೆಯ ದೇವಸ್ಥಾನ, ಗಿಡ-ಮರಗಳ ನೆರಳನ್ನು ಆಶ್ರಯಿಸುತ್ತಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಅಧಿಕ ಮಳೆಯಾಗಿದ್ದರಿಂದ ಬಿಸಿಲಿನ ಪ್ರಖರತೆ ಕಡಿಮೆಯಾಗಬಹುದು ಎಂದು ಕೊಂಡಿದ್ದರೂ ಪ್ರತಿ ವರ್ಷ ಇರುವಷ್ಟೇ ಅಂದರೆ 40ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ಬಿಸಿಲಿದೆ. ಇದು ಜನ, ಜಾನುವಾರುಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ.

ಎರಡು ದಿನಗಳ ಹಿಂದೆ ತಾಲೂಕಿನ ಮಾದನ ಹಿಪ್ಪರಗಾ, ಖಜೂರಿಯಲ್ಲಿ ಕೊಂಚ ಅಕಾಲಿಕ ಮಳೆ ಸುರಿದು ತಂಪೇರಿದರೆ ಆಳಂದ ಮತ್ತು ನರೋಣಾ ವಲಯದ ವಾತಾವರಣ ಅಷ್ಟೇನು ತಂಪಾಗಿಲ್ಲ. ವಾರದಿಂದ ರಾತ್ರಿ ವೇಳೆ ಮೋಡಮುಸುಕಿದ ವಾತಾವರಣ ಹಾಗೂ ಕೆಲವೆಡೆ ಸುರಿದ ಕೊಂಚ ಜಿಟಿ, ಜಿಟಿ ಮಳೆಯಿಂದಾಗಿ ತಂಪೇರಿತ್ತಾದರೂ ಮರುದಿನದ ಎಂದಿನಂತೆ ಬಿಸಿಲಿನ ಪ್ರಕರತೆ ಹೆಚ್ಚುತ್ತಲೇ ಇದೆ. ಏಪ್ರಿಲ್‌ ತಿಂಗಳಲ್ಲೇ ತಾಲೂಕಿನಾದ್ಯಂತ ಹೆಚ್ಚಿನ ಜಾತ್ರೆ, ಉತ್ಸವಗಳು ಇವೆ. ಇವುಗಳಲ್ಲಿ ಪಾಲ್ಗೊಂಡ ಜನ ಹೈರಾಣಾಗುತ್ತಿದ್ದಾರೆ. ವಿವಾಹ, ನೆಂಟಸ್ಥನ, ಗೃಹ ಶಾಂತಿ, ಜಾತ್ರೆ, ಉತ್ಸವ ಹೀಗೆ ಬಿಸಿಲಿನ ಪ್ರಖರತೆಗೆ ಮೈಯೊಡ್ಡಿ ಜನತೆ ದಿನದೂಡುತ್ತಿದ್ದಾರೆ.

ತಂಪು ಪಾನೀಯದ ಮೊರೆ

ಒಂದೂವರೆ ತಿಂಗಳಿಂದ ಪಟ್ಟಣದ ಹಳೆ ತಹಶೀಲ್ದಾರ್‌ ಕಚೇರಿ, ಬಸ್‌ ನಿಲ್ದಾಣ, ಮಾರುಕಟ್ಟೆ ಪ್ರದೇಶಗಳಲ್ಲಿ ವ್ಯಾಪಾರಿಗಳು ಜನರ ದಾಹ ತಣಿಸಲು ತಂಪು ಪಾನೀಯ ಅಂಗಡಿಗಳನ್ನು ತೆರೆದಿದ್ದು, ವ್ಯಾಪಾರ ಭರ್ಜರಿಯಿಂದ ನಡೆಯುತ್ತಿದೆ. ಕಲ್ಲಂಗಡಿ, ಕರಬೂಜ್‌, ಸೇಬು, ಅಂಜೂರು ಮತ್ತಿತರ ಹಣ್ಣಿನ ಪಾನೀಯ, ಕಬ್ಬಿನಹಾಲಿಗೆ ಬೇಡಿಕೆ ಹೆಚ್ಚುತ್ತಿದೆ. ಅಲ್ಲದೇ ಮಲೆನಾಡಿನಿಂದ ತರಿಸಿದ ಎಳೆನೀರು ಹೆಚ್ಚು ಮಾರಾಟವಾಗುತ್ತಿದೆ. ಮಳೆ ಉತ್ತಮವಾಗಿ ಆಗಿದ್ದರಿಂದ ತೋಟಗಳಲ್ಲಿ ತರಕಾರಿ ಬೆಳೆ ಉತ್ತಮವಾಗಿದೆ. ಜತೆಗೆ ಬೆಲೆಯೂ ಏರಿಕೆಯಾಗಿದೆ. ಮಣ್ಣಿನ ಮಡಿಕೆಗಳ ಮಾರಾಟ ಜೋರಾಗಿದೆ. ಬಡವರು ಮತ್ತು ಮಧ್ಯವರ್ಗದ ಜನರು ಮಣ್ಣಿನ ಮಡಿಕೆಯಲ್ಲೇ ನೀರು ತಂಪಾಗಿಸಿ ಕುಡಿದರೆ, ಅನುಕೂಲಸ್ತರು ಪ್ರಿಜ್‌ನಲ್ಲಿನ ನೀರು ಕುಡಿಯುತ್ತಿದ್ದಾರೆ.

ಅಧಿಕಾರಿಗಳು ಆರಾಮ, ಜನ ಹೈರಾಣ

ಹಬ್ಬಗಳಿಗೆ ಸರ್ಕಾರಿ ರಜೆ, ಎಡನೇ ಶನಿವಾರ ಹೀಗೆ ವಾರದ ರಜೆಗಳೇ ಹೆಚ್ಚಿರುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮರ್ಪಕವಾಗಿ ಲಭ್ಯವಾಗದೇ ಸಾಮಾನ್ಯ ಜನರು ಕಚೇರಿಗಳಿಗೆ ಅಲೆದಾಡಿ ಹೈರಾಣವಾಗುತ್ತಿದ್ದಾರೆ. ಇನ್ನೊಂದೆಡೆ ಬಹುತೇಕ ಇಲಾಖೆಗಳು ಮಿನಿವಿಧಾನಸೌಧ ಕಟ್ಟಡಕ್ಕೆ ಸ್ಥಳಾಂತರ ಆಗಿದ್ದರಿಂದ ದೂರದ ಕಚೇರಿಗೆ ಹೋಗಿ ಬರಲು ಗ್ರಾಮಸ್ಥರು ಪರದಾಡುವಂತೆ ಆಗಿದೆ. ಇದೇ ಪರಿಸ್ಥಿತಿ ಅಂಚೆ ಇಲಾಖೆಯಲ್ಲೂ ಇದೆ.

-ಮಹಾದೇವ ವಡಗಾಂವ

ಟಾಪ್ ನ್ಯೂಸ್

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

1-a-da

Rain; ಭಾರತ ಮತ್ತು ದಕ್ಷಿಣ ಆಫ್ರಿಕಾ ವನಿತಾ ಟಿ20 ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.