ಕಾಶಿಯಲ್ಲಿ 42 ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮ


Team Udayavani, Feb 11, 2022, 11:06 AM IST

2kashi

ಸೊಲ್ಲಾಪುರ: ಬಹುಭಾಷಾ ಪಂಡಿತ, ಧರ್ಮರತ್ನ ಡಾ| ಮಲ್ಲಿಕಾರ್ಜುನ ಶ್ರೀಗಳನ್ನು ಕಾಶಿ ಜ್ಞಾನ ಸಿಂಹಾಸನ ಪೀಠದ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಿದ್ದು, ಮೇ.13ರಂದು ಕಾಶಿಯಲ್ಲಿ ಅದ್ಧೂರಿ ಪಟ್ಟಾಭಿಷೇಕ ಸಮಾರಂಭ ನಡೆಯಲಿದೆ ಎಂದು ಕಾಶಿ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ತಿಳಿಸಿದರು.

ಇಲ್ಲಿನ ಅಕ್ಕಲಕೋಟ ರಸ್ತೆಯಲ್ಲಿರುವ ವೀರತಪಸ್ವಿ ಮಠದಲ್ಲಿ ನಡೆದ ಸಮಾಲೋಚನ ಸಭೆಯಲ್ಲಿ ಕಾಶಿ ಜಗದ್ಗುರುಗಳು ಈ ಮಾಹಿತಿ ನೀಡಿದರು. ಅಪ್ಪಂದಿರು ಕಷ್ಟಪಟ್ಟು ದುಡಿದಿದ್ದನ್ನೆಲ್ಲ ಮಕ್ಕಳಿ ಗಾಗಿ ಒಪ್ಪಿಸಿ ನಿವೃತ್ತರಾಗುತ್ತಾರೆ. ಅದೇ ರೀತಿ ಪೀಠಗಳು ತಮ್ಮ ಉತ್ತರಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಧಾರ್ಮಿಕ ಕಾರ್ಯಗಳನ್ನು ಮುನ್ನಡೆಯುವಂತೆ ಮಾಡಲಾಗುತ್ತದೆ. 32 ವರ್ಷದ ಹಿಂದೆ ಕಾಶಿ ಪೀಠಕ್ಕೆ ನಾನು ಆಯ್ಕೆಯಾಗಿದ್ದೆ. ಸಮಾಜಕ್ಕೆ ಸಾಧ್ಯವಾದಷ್ಟು ಉತ್ತಮ ಕಾರ್ಯ ಮಾಡಿರುವೆ. ಹೀಗಾಗಿ ಬದುಕಿರುವಾಗಲೇ ಸರಿಯಾದ ವ್ಯಕ್ತಿಗೆ ಜವಾಬ್ದಾರಿ ನೀಡಿ ನಿವೃತ್ತಿ ಹೊಂದುವ ಆಶಯದೊಂದಿಗೆ ಧರ್ಮ ಮತ್ತು ಸಾಮಾಜಿಕ ಕಾರ್ಯ ನಿರಂತರವಾಗಿ ನಡೆಯಬೇಕೆಂದು ಸಾಮರ್ಥ್ಯ ಹೊಂದಿದ ಡಾ| ಮಲ್ಲಿಕಾರ್ಜುನ ಶ್ರೀಗಳನ್ನು 87ನೇ ಪೀಠಾಧಿಪತಿ ಎಂದು ಅಧಿಕಾರ ವಹಿಸಲು ಅಧಿಕೃತವಾಗಿ ಪಟ್ಟಾಭಿಷೇಕ ಜರುಗಲಿದೆ ಎಂದರು.

ಏಪ್ರಿಲ್‌ 2ರ ಶನಿವಾರ ಯುಗಾದಿಯಿಂದ ಹಿಡಿದು ಮೇ 13ರ ವರೆಗೆ 42 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಇದಕ್ಕಾಗಿ ದೇಶದ ವಿವಿಧೆಡೆಗಳಿಂದ ಭಕ್ತ ಸಮೂಹ ಕಾಶಿಗೆ ಆಗಮಿಸಲಿದೆ. ಎಲ್ಲ ಭಕ್ತರು ತನು-ಮನ-ಧನದಿಂದ ಸೇವೆ ನೀಡಬೇಕು ಎಂದು ನುಡಿದರು.

ಕಾಶಿ ಪೀಠದ ಉತ್ತರಾಧಿಕಾರಿ ಡಾ| ಮಲ್ಲಿಕಾರ್ಜುನ ಶ್ರೀಗಳು ಮಾತನಾಡಿ, ಹೊಟಗಿ ಮಠದ ಮಠಾಧೀಶರಾದ ಲಿಂ. ತಪೋರತ್ನಂ ಯೋಗಿರಾಜೇಂದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ಪಂಚಪೀಠಾಧೀಶ್ವರರಿಗೆ ಸಲ್ಲಿಸಿದ ಸೇವೆಯಿಂದ ನನಗೆ ಈ ಅವಕಾಶ ಒದಗಿ ಬಂದಿದೆ. ಕಾಶಿ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಮುಗಿಸಿರುವೆ. ಅವರ ಮಾರ್ಗದರ್ಶನದಲ್ಲಿ ಕಾಶಿ ಪೀಠದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದರು.

ಸೊಲ್ಲಾಪುರ ಶಾಸಕ ವಿಜಯಕುಮಾರ ದೇಶಮುಖ, ಮಾಜಿ ಶಾಸಕ ಸಿದ್ಧರಾಮ ಮೇತ್ರೆ, ವಿಶ್ವನಾಥ ಚಾಕೋತೆ ಮಾತನಾಡಿದರು. ಹೊಟಗಿ ಮಠದ ವತಿಯಿಂದ ಕಾಶಿ ನೂತನ ಪೀಠಾಧಿಪತಿ ಡಾ| ಮಲ್ಲಿಕಾರ್ಜುನ ಶ್ರೀಗಳು ಕಾಶಿ ಜಗದ್ಗುರುಗಳನ್ನು ಸತ್ಕರಿಸಿದರು.

ಮಂದ್ರೂಪದ ರೇಣುಕ ಶ್ರೀ, ನಾಗನಸೂರಿನ ಶ್ರೀಕಂಠ ಶ್ರೀ, ಚಿಟಗುಪ್ಪದ ಗುರುಲಿಂಗ ಶ್ರೀ, ಮೈಂದರಗಿಯ ನೀಲಕಂಠ ಶ್ರೀ, ಸುಗೂರೇಶ್ವರ ಶ್ರೀ, ಜಿಂತೂರಿನ ಅಮೃತೇಶ್ವರ ಶ್ರೀ ಸೇರಿದಂತೆ ನಾಡಿನ ಇತರ ಶ್ರೀಗಳು, ಎಪಿಎಂಸಿ ಮಾಜಿ ಅಧ್ಯಕ್ಷೆ ಇಂದುಮತಿ ಅಲಗೊಂಡಾ ಪಾಟೀಲ, ಸಂಚಾಲಕ ಕೇದಾರ ಉಂಬರಜೆ, ಸಿದ್ಧೇಶ್ವರ ಬಮಣಿ, ಹರೀಶ ಪಾಟೀಲ, ರಾಮಪ್ಪ ಚಿವಡಶೆಟ್ಟಿ, ಬಸವರಾಜ ಶಾಸ್ತ್ರೀ ಹಿರೇಮಠ, ಶಿವಯೋಗಿ ಶಾಸ್ತ್ರೀ ಹೊಳಿಮಠ, ಶಿವಾನಂದ ಪಾಟೀಲ, ಪ್ರಾಂಶುಪಾಲ ಗಜಾನನ ಧರಣೆ, ಡಾ| ರಾಜೇಂದ್ರ ಘೂಳಿ, ತಮ್ಮಾ ಮುಸ್ತಾರೆ, ರಾಜಶೇಖರ ಹಿರೇಹಬ್ಬು, ಸುಧಿಧೀರ ಥೋಬಡೆ, ಮಹೇಶ ಅಂದೇಲಿ, ಚಿದಾನಂದ ಮುಸ್ತಾರೆ, ರಾಜಶೇಖರ ಬುರ್ಕುಲೆ, ಪ್ರಭುರಾಜ ವಿಭೂತೆ ಹೊಟಗಿ, ಕುಂಭಾರಿ, ದರ್ಗಾನಹಳ್ಳಿ, ಧೋತ್ರಿ, ಮುಸ್ತಿ, ಬೋರಾಮಣಿ ಪಾಲ್ಗೊಂಡಿದ್ದರು. ಸಿದ್ಧಯ್ಯ ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆ ಕಾರ್ಯದರ್ಶಿ ಶಾಂತಯ್ಯ ಸ್ವಾಮಿ ನಿರೂಪಿಸಿದರು, ರಾಜಕುಮಾರ ಬೋರೆ ವಂದಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.