ಪುಂಡಾಟಿಕೆ ಮೆರೆದರೆ ಮುಲಾಜಿಲ್ಲದೇ ಸೂಕ್ತ ಕ್ರಮ


Team Udayavani, Feb 15, 2022, 1:13 PM IST

12missbehavior

ಆಳಂದ: ಶಾಂತಿ ಸುವ್ಯವಸ್ಥೆ ಕಾಪಾಡುವುದು ನಾಗರಿಕರ ಕರ್ತವ್ಯವಾಗಿದೆ. ಇಷ್ಟಾಗಿಯೂ ಕ್ಷುಲಕ ಕಾರಣ ಮುಂದೆ ಮಾಡುವುದಾಗಲಿ ಶಾಲೆ, ಕಾಲೇಜುಗಳ ಮುಂದೆ ಹಿಜಾಬ್‌, ಕೇಸರಿ ಶಾಲು ವಿಷಯದಲ್ಲಿ ಪುಂಡಾಟಿಕೆ ಮೆರೆದರೆ ಯಾವುದೇ ಮುಲಾಜಿಲ್ಲದೇ ಪ್ರಕರಣ ದಾಖಲು ಮಾಡಲಾಗುವುದು ಎಂದು ಸ್ಥಳೀಯ ಡಿವೈಎಸ್‌ಪಿ ರವೀಂದ್ರ ಶಿರೂರ ಅವರು ಎಚ್ಚರಿಸಿದರು.

ಪಟ್ಟಣದ ಪೊಲೀಸ್‌ ಠಾಣೆ ಆವರಣದಲ್ಲಿ ಕರೆದ ನಾಗರಿಕ ಶಾಂತಿ ಸಮಿತಿ ಸಭೆ ಹಾಗೂ ದಲಿತ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂವಿಧಾನದಡಿ ಬದುಕಬೇಕಾಗಿದೆ. ಅದನ್ನು ಮೀರಿ ನಡೆಯಬಾರದು. ಮತ್ತೂಬ್ಬರ ಹಕ್ಕುಗಳಿಗೆ ಧಕ್ಕೆ ತರುವಂತಹ ಕೆಲಸ ಆಗಬಾರದು. ಮೊದಲು ದೇಶ ದೇಶವಿದ್ದರೆ ನಾವು ನೀವು, ಸ್ವಾರ್ಥಕ್ಕಾಗಿ ಜಾತಿ ಧರ್ಮದ ಆಧಾರದ ಮೇಲೆ ದೇಶ ಒಡೆಯುವುದು ಸಲ್ಲ. ಯಾವುದೇ ಧರ್ಮವು ಹಿಂಸೆಯನ್ನು ಮಾಡುವಂತೆ ಹೇಳುವುದಿಲ್ಲ. ಮಾನವೀಯತೆ ಮತ್ತು ಏಕತೆ ಕಾಪಾಡುವಂತೆ ಬೋಧಿಸಿವೆ. ಮಾನವೀಯತೆ ಮತ್ತೆ ಏಕತೆ ಕಟ್ಟುವರ ಕಡೆಗೆ ಇರಬೇಕು ಹೊರತು ಅದನ್ನು ಕೆಡವಲು ಪ್ರಯತ್ನಿಸುವ ಮನಸ್ಸುಗಳ ಕಡೆಗೆ ತಿರುಗಬಾರದು. ಶಿಕ್ಷಕರು ಎಂದರೆ ದೇಶವನ್ನು ಕಟ್ಟುವವರು ಅವರು ಮನಸ್ಸು ಮಾಡಿದರೆ ಏನೆಯಲ್ಲ ಮಾಡಬಲ್ಲರು ಗುರುವಿನ ಸ್ಥಾನ ದೊಡ್ಡದು ಅದನ್ನು ಗೌರವಿಸುವ ಕೆಲಸ ಆಗಬೇಕು. ಜಾತಿ ನಿಂದನೆ ಪ್ರಕರಣ ದಾಖಲಾದಾಗ ಅನ್ಯಾಯ ಆದವರಿಗೆ ಸರ್ಕಾರದ ಪರಿಹಾರ ನೀಡಲಾಗಿದೆ. ಜಗಳಗಳು ಮಾಡದಂತೆ ಎಲ್ಲ ಮುಖಂಡರು ಸೇರಿ ರಾಜಿಸಂಧಾನ ಪಂಚಾಯಿತಿ ನಡೆಸಿದರೆ ವಾತಾವರಣ ತಿಳಿಗೊಳ್ಳಲು ಸಾಧ್ಯವಾಗುತ್ತದೆ ಎಂದರು.

ಸಿಪಿಐ ಮಂಜುನಾಥ ಮಾತನಾಡಿ, ಶಾಂತಿ ಸೌಹಾರ್ದತೆಗೆ ಇನ್ನೊಂದು ಹೆಸರು ಆಳಂದ ಆಗಿದೆ. ಎಲ್ಲರೂ ಪರಸ್ಪರ ಸ್ನೇಹಬಾಂಧವ್ಯದೊಂದಿಗೆ ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಕಾನೂನು ಪಾಲಿಸಬೇಕು ಎಂದರು.

ಪುರಸಭೆ ಸದಸ್ಯ ಶಿವಪುತ್ರ ನಡಗೇರಿ, ಫಿರದೋಷ ಅನ್ಸಾರಿ, ಅಮಜದಲಿ ಕರಜಗಿ, ಮುಖಂಡ ಪ್ರಕಾಶ ಮೂಲಭಾರತಿ, ದಯಾನಂದ ಶೇರಿಕಾರ, ಧರ್ಮಾ ಬಂಗರಗಿ, ಮಲ್ಲಿಕಾರ್ಜುನ ಬೋಳಣಿ, ಖಲೀಲ ಅನ್ಸಾರಿ, ದಸ್ತಗೀರ ಗೌರ, ಪರಮೇಶ್ವರ ಖೋಂಬಿನ, ರಾಘವೇಂದ್ರ ಹಿರೋಳಿ, ಸೂರ್ಯಕಾಂತ ತಟ್ಟೆ, ಮೋಹಿಜ ಕಾರಬಾರಿ, ದತ್ತಾತ್ರೇಯ ಅಟ್ಟೂರ ಭಾಗವಹಿಸಿ ಮಾತನಾಡಿ, ತಾಲೂಕಿನಲ್ಲಿ ಜಗಳಗಳು ಆದಾಗ ಯಾವುದೇ ಜನಪತ್ರಿನಿಧಿಗಳ ಮಾತು ಕೇಳಿ ಪ್ರಕರಣ ದಾಖಲಿಸುವುದು, ಕೈಬಿಡುವುದು ಮಾಡಬೇಡಿ. ಅನ್ಯಾಯವಾದಾಗ ನ್ಯಾಯ ನೀಡಿ ತಪ್ಪಿಸ್ಥರಿಗೆ ಶಿಕ್ಷೆಯಾಗಲಿ. ಇದನ್ನು ಬಿಟ್ಟು ತಾರತಮ್ಯ ನೀತಿ ಅನುಸರಿಸಬೇಡಿ ಎಂದು ಒತ್ತಾಯಿಸಿದರು.

ನರೋಣಾ ಪಿಎಸ್‌ಐ ವಾತ್ಸಲ್ಯ, ಮಾದನಹಿಪ್ಪರಗಾ ಪಿಎಸ್‌ಐ ಮಲ್ಲಣ್ಣ ಯಲಗೊಂಡ, ಭಗವಂತರಾಯ ಶಾಂತಿ ಸಭೆ, ದಲಿತ ದಿನಾಚರಣೆ ಉದ್ದೇಶಿಸಿ ಮಾತನಾಡಿದರು. ಮುಖಂಡ ಶ್ರೀಶೈಲ್‌ ಖಜೂರಿ, ಆಸೀಫ ಅನ್ಸಾರಿ, ಲಕ್ಷ್ಮಣ ಝಳಕಿ, ಸಂಜಯ ನಾಯಕ, ಸೀತಾರಾಮ ಜಮಾದಾರ, ಶೇಖರಗೌಡ ಪಾಟೀಲ್‌, ಸರಣು ನರೋಣಿ, ಸತ್ತಾರ ಮುರುಮಕರ್‌, ಸುಲೇಮಾನ್‌ ಮುಗುಟ, ಗುಲಾಮಹುಸೇನ ಟಪ್ಪೆವಾಲೆ ಇತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.