![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Nov 25, 2021, 11:57 AM IST
ಶಹಾಬಾದ: ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದರೂ, ಕೂಲಿ ಕಾರ್ಮಿಕರ ದಿನಗೂಲಿ ಹೆಚ್ಚಳವಾಗಿಲ್ಲ. ಇದರಿಂದ ಕಾರ್ಮಿಕರ ಬದುಕು ಅತಂತ್ರವಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಫೆಡರೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ ಹೇಳಿದರು.
ನಗರದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಫೆಡರೇಶನ್ ಕಟ್ಟಡ ಕಾರ್ಮಿಕರ ಮೂರನೇ ತಾಲೂಕು ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್ ವೇಳೆ ಕೆಲ ಕಟ್ಟಡ ಕಾರ್ಮಿಕರ ಬದುಕು ಬೀದಿ ಪಾಲಾಗಿತ್ತು. ಈ ಕುರಿತು ಯಾವ ಸರ್ಕಾರವು ಸರಿಯಾದ ನೆರವು ನೀಡಲಿಲ್ಲ. ಕಲ್ಯಾಣ ಮಂಡಳಿ ಕೆಲ ಸೌಲಭ್ಯಗಳನ್ನು ನೀಡಿದರೂ ಸಕಾಲಕ್ಕೆ ಕಾರ್ಮಿಕರಿಗೆ ತಲುಪಲೇ ಇಲ್ಲ. ಕಾರ್ಮಿಕರಿಗೆ ನೀಡಲಾದ ರೇಷನ್ ಕಿಟ್ನಲ್ಲೂ ಕೋಟ್ಯಂತರ ರೂ.ಗಳ ಅವ್ಯವಹಾರವಾಗಿದೆ ಎಂದು ದೂರಿದರು.
ಕೊರೊನಾ ಸಂದರ್ಭದಲ್ಲಿ ಲಕ್ಷಾಂತರ ಕಟ್ಟಡ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದಾಗ ಅವರ ನೆರವಿಗೆ ಕಾರ್ಮಿಕ ಸಂಘಗಳ ಜತೆ ಕಾರ್ಮಿಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಗಲು ರಾತ್ರಿ ಎನ್ನದೇ ಶ್ರಮಿಸಿದ್ದಾರೆ. ಇದರಿಂದಾಗಿ ಸಾವಿರಾರು ಕಾರ್ಮಿಕರು ಹಸಿವಿನ ದವಡೆಯಿಂದ ಪಾರಾಗಿದ್ದಾರೆ. ಇದು ಅಭಿನಂದನಾರ್ಹ ಕೆಲಸ. ಆದರೆ ಕೊರೊನಾ ಅಲೆಗಳಲ್ಲಿ ನಿರುದ್ಯೋಗಿಗಳಾಗಿರುವ ಲಕ್ಷಾಂತರ ಕಾರ್ಮಿಕರಿಗೆ ಸರ್ಕಾರ ಉದ್ಯೋಗ ಭದ್ರತೆ ಮತ್ತು ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀಮಂತ ಬಿರಾದಾರ ಮಾತನಾಡಿ, ಬಹುತೇಕ ದುಡಿಯುವ ವರ್ಗದ ಕಾರ್ಮಿಕರಿಗೆ ಕಾರ್ಮಿಕ ಗುರುತಿನ ಚೀಟಿ ಇಲ್ಲ. ಪರಿಣಾಮ ಕಾರ್ಮಿಕರು ಇಲಾಖೆ ನೀಡುವ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಆದರೆ ಜಮೀನು ಹೊಂದಿದ ವ್ಯಕ್ತಿಗಳಿಗೆ ಕಾರ್ಮಿಕರ ಗುರುತಿನ ಚೀಟಿ ನೀಡಲಾಗಿದೆ. ಆದ್ದರಿಂದ ಕೂಡಲೇ ನಕಲಿ ಚೀಟಿಗಳನ್ನು ರದ್ದು ಪಡಿಸಬೇಕು ಎಂದು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಯ್ಯಸ್ವಾಮಿ, ಕೆಪಿಆರ್ಎಸ್ ಚಿತ್ತಾಪುರ ತಾಲೂಕು ಅಧ್ಯಕ್ಷ ಸಾಯಬಣ್ಣಾ ಗುಡುಬಾ, ಸಿಐಟಿಯು ತಾಲೂಕು ಅಧ್ಯಕ್ಷೆ ಶೇಖಮ್ಮ ಕುರಿ, ಯುವ ಸಾಹಿತಿ ರವಿ ಬೆಳಮಗಿ, ದಲಿತ ಮುಖಂಡ ಶಂಕರ ಜಾನೆ ಮಾತನಾಡಿದರು. ನಾಗಪ್ಪ ರಾಯಚೂರುಕರ್ ನಿರೂಪಿಸಿದರು, ಭೀಮಶ್ಯಾ ಹಳ್ಳಿ, ರಾಮು ಜಾಧವ, ಅರ್ಜುನ್ ನಾಟಿಕಾರ ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.