ಸೇಡಂ ಕ್ಷೇತ್ರದ ಅಭಿವೃದ್ದಿಗೆ ಬದ್ದ: ತೇಲ್ಕೂರ


Team Udayavani, May 16, 2022, 11:38 AM IST

6development

ಕಲಬುರಗಿ: ಸೇಡಂ ಕ್ಷೇತ್ರದ ಜನರ ಆಶೀರ್ವಾದ ಹಾಗೂ ತಮ್ಮ ಪರಿಶ್ರಮದಿಂದ ಕ್ಷೇತ್ರದ ಅಭಿವೃದ್ಧಿಗೆ ಹೊಸ ಆಯಾಮ ರೂಪಿಸಿ ಮುನ್ನಡೆಯುವ ಪ್ರಯತ್ನದಲ್ಲಿ ಮೊದಲ ವರ್ಷ ಎದುರಾದದ್ದು, ಸಮ್ಮಿಶ್ರ ಸರ್ಕಾರವೆಂಬ ಸವಾಲು, ನಂತರದ ದಿನಗಳಲ್ಲಿ ಎರಡು ಬಾರಿ ನೆರೆಹಾವಳಿ, ಕೊರೊನಾ ಮೂರನೇ ಅಲೆಗೆ ಕ್ಷೇತ್ರ ಅಭಿವೃದ್ಧಿಯಲ್ಲಿ ಹಿಂದೆ ಬೀಳಬಹುದೆಂಬ ಯೋಚನೆ ಮೂಡಿದ್ದು ಸುಳ್ಳಲ್ಲ. ಆದರೆ ಸತತ ಪ್ರಯತ್ನದಿಂದ ಕ್ಷೇತ್ರದ ಅಭಿವೃದ್ಧಿಗೆ ಅನುದಾನವನ್ನು ತರುವಲ್ಲಿ ಯಶಸ್ವಿಯಾಗಿದ್ದೇನೆ. ಹೆಮ್ಮೆಯ ವಿಚಾರವೆಂದರೆ ಕಲ್ಯಾಣ ಕರ್ನಾಟಕ ಎಲ್ಲ ಶಾಸಕರಿಗಿಂತ ಹೆಚ್ಚಿನ ಅನುದಾನ ತರುವಲ್ಲಿಯೂ ಸಫಲನಾಗಿದ್ದೇನೆ ಎಂದು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.

ನೆರೆ ಹಾವಳಿ ಸಂಧರ್ಭದಲ್ಲಿ ನನ್ನ ನಂಬಿದ ಜನತೆಗೆ ಕೈಲಾದ ಸಹಾಯ, ಸಹಕಾರ ನೀಡಿ, ಕೋವಿಡ್‌ ಲಾಕ್‌ಡೌನ್‌ದಲ್ಲೂ ಸಹಿತ ಹಸಿದವರಿಗೆ ತೇಲ್ಕೂರ ಪಾಟೀಲ ಫೌಂಡೇಶನ್‌ ವತಿಯಿಂದ ಆಹಾರ ಸಾಮಗ್ರಿ ನೀಡಿ ಕಷ್ಟದಲ್ಲಿರುವವರಿಗೆ ನೆರವಾಗಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ ಎಂದು ತಿಳಿಸಿದ್ದಾರೆ.

ರದ್ದಾದ ಬೀದರ್‌-ಯಶವಂತಪುರ ರೈಲು ಮೊದಲಿನಂತೆ ಸಂಚರಿಸುವಂತೆ ಒತ್ತಡ ತಂದು ಯಶಸ್ವಿಯಾಗಿರುವುದು, ಸೇಡಂ ಪಟ್ಟಣದಲ್ಲಿ 500ಕೋಟಿ ರೂ. ವೆಚ್ಚದಲ್ಲಿ 700 ಮನೆಗಳ ನಿರ್ಮಾಣ, ಸೇಡಂ ಕ್ಷೇತ್ರದಲ್ಲಿ 12ಕೋಟಿ ರೂ. ವೆಚ್ಚದಲ್ಲಿ 100 ದೇವಾಲಯಗಳ ಅಭಿವೃದ್ಧಿ, ಅತಿವೃಷ್ಟಿ ಹಾನಿಗೆ ಹೆಚ್ಚಿನ ಪರಿಹಾರ ದೊರಕಿಸಿರುವುದು, ಇದರ ಹೊರತಾಗಿಯೂ ನನ್ನ ಮತ ಕ್ಷೇತ್ರ ಅಭಿವೃದ್ಧಿಯಲ್ಲಿ ಹಿಂದೆ ಬೀಳಲು ಎಡೆಮಾಡಿಕೊಡದೇ ಕುಡಿಯುವ ನೀರು, ಕೃಷಿ ಭೂಮಿಗೆ ನೀರಾವರಿ ಯೋಜನೆಗಳು, ರಸ್ತೆ, ಸೇತುವೆಗಳು, ಶಾಲೆ-ಕಾಲೇಜು ಕಟ್ಟಡಗಳು, ವಸತಿ ನಿಲಯಗಳು, ವಿದ್ಯುತ್‌ ಸಂಪರ್ಕ ಹೀಗೆ 500 ಕೋಟಿ ರೂ.ಗೂ ಅಧಿಕ ಅಭಿವೃದ್ಧಿ ಕಾಮಗಾರಿಗಳನ್ನು ತರುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ವಿವರಿಸಿದ್ದಾರೆ.

ಕ್ಷೇತ್ರದ ಶಾಸಕನಾಗಿ ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸುತ್ತಿರುವುದನ್ನು ಗುರುತಿಸಿ ಪಕ್ಷದ ರಾಜ್ಯದ ವಕ್ತಾರ ಹಾಗೂ ವಿಭಾಗೀಯ ಪ್ರಭಾರಿಯನ್ನಾಗಿ ನಿಯೋಜಿಸಲಾಗಿದೆ. ಹೀಗಾಗಿ ಪಕ್ಷದ ಸಂಘಟನೆ ಜತೆಗೆ 371(ಜೆ) ವಿಧಿ ಲೋಪದೋಷ ನಿವಾರಣೆಗೆ ಒತ್ತಡ ತಂದಿರುವುದು ಸೇರಿದಂತೆ ಹಲವಾರು ನಿಟ್ಟಿನಲ್ಲಿ ಶ್ರಮಿಸಿರುವುದು ತಮ್ಮೆಲ್ಲರಿಗೂ ಗೊತ್ತಿರುವ ವಿಷಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.