![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 29, 2022, 11:35 AM IST
ವಾಡಿ: ನಗರಕ್ಕೆ ಹೋಗಿ ಪರೀಕ್ಷೆ ಬರೆಯಲು ಸಾರಿಗೆ ವ್ಯವಸ್ಥೆಯ ಸಂಕಷ್ಟ ಎದುರಿಸಿ ಚಿಂತಿತರಾಗಿದ್ದ ಗ್ರಾಮೀಣ ಭಾಗದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರಾಪಂ ಅಧ್ಯಕ್ಷನೋರ್ವ ಬಸ್ ವ್ಯವಸ್ಥೆ ಮಾಡುವ ಮೂಲಕ ಶಿಕ್ಷಣ ಕಾಳಜಿ ಮೆರೆದ ಘಟನೆ ಚಿತ್ತಾಪುರ ತಾಲೂಕಿನ ಯಾಗಾಪುರ ಗ್ರಾಮದಲ್ಲಿ ನಡೆದಿದೆ.
ಸೋಮವಾರದಿಂದ ಶುರುವಾದ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಯಾಗಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳು ಮತ್ತು ತಾಂಡಾಗಳ ಒಟ್ಟು 68 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು 18 ಕಿ.ಮೀ ದೂರದ ಹೋಬಳಿ ಕೇಂದ್ರಸ್ಥಾನ ನಾಲವಾರ ಪರೀಕ್ಷಾ ಕೇಂದ್ರಕ್ಕೆ ಹೋಗಬೇಕಿತ್ತು. ಯಾಗಾಪುರದಿಂದ ನಾಲವಾರಕ್ಕೆ ಸಾರಿಗೆ ಸೌಲಭ್ಯವಿಲ್ಲ. ಹಣ ಖರ್ಚು ಮಾಡಿ ಖಾಸಗಿ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಬೇಕಾದ ಪ್ರಸಂಗ ಎದುರಾಗಿತ್ತು. ಇದನ್ನು ಗಮನಿಸಿದ ಯಾಗಾಪುರ ಗ್ರಾಪಂ ಅಧ್ಯಕ್ಷ ಮದನ್ ರಾಠೋಡ, ತಕ್ಷಣವೇ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಪತ್ರ ಬರೆದು ಪರೀಕ್ಷೆ ಮುಗಿಯುವ ವರೆಗೆ ತಾತ್ಕಾಲಿಕ ವಿಶೇಷ ಬಸ್ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.
ಗ್ರಾಮೀಣ ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಸಾರಿಗೆ ಸಂಸ್ಥೆ ಅಧಿಕಾರಿಗಳು ಸೋಮವಾರ ಬೆಳಗ್ಗೆಯೇ ಯಾಗಾಪುರ ಗ್ರಾಮಕ್ಕೆ ಬಸ್ ಕಳುಹಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಗೆ ಉಚಿತವಾಗಿ ಪೆನ್ ವಿತರಿಸುವ ಮೂಲಕ ಗ್ರಾಪಂ ಅಧ್ಯಕ್ಷ ಮದನ್ ರಾಠೋಡ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಕ್ಕಳಿಗೆ ಶುಭಕೋರಿದ್ದಾರೆ.
ಮುಖಂಡರಾದ ವಿಜಯ್ ಕುಮಾರ್ ನಾಯಕ್, ರೆಡ್ಡಿ ಬಂಜಾರ, ಚಂದ್ರು ಗೌಡ, ಗುಳ್ಳಪ್ಪ ಮುಂತಾದವರು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.