![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 23, 2022, 3:01 PM IST
ಕಾಳಗಿ: ಶಾಲೆ -ಕಾಲೇಜಿಗೆ ತೆರಳುವ ಹಾಗೂ ಮರಳಿ ಬರುವ ವೇಳೆ ಸಮರ್ಪಕ ಸಾರಿಗೆ ಬಸ್ ನೀಡುವಂತೆ ಒತ್ತಾಯಿಸಿ, ಕೋಡ್ಲಿ ಕ್ರಾಸ್ ಬಳಿ ಬಸ್ ತಡೆದು ನಡು ರಸ್ತೆಯಲ್ಲೇ ವಿದ್ಯಾರ್ಥಿಗಳು, ಕರ್ನಾಟಕ ಪ್ರಾಂತ ರೈತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.
ತಾಲೂಕಿನ ವಿವಿಧ ಗ್ರಾಮಗಳಿಂದ ಕೋಡ್ಲಿ ಕ್ರಾಸ್ ಮಾರ್ಗವಾಗಿ ಪಟ್ಟಣಕ್ಕೆ ತೆರಳುವ ಬಸ್ ಮಾರ್ಗದಲ್ಲಿ ವಿದ್ಯಾರ್ಥಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದ ರಿಂದ ಅಗತ್ಯ ಬಸ್ ಸೌಲಭ್ಯ ಇಲ್ಲದೆ ಪರ ದಾಡುವಂತಾಗಿದೆ ಎಂದು ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ರಟಕಲ್, ಕಂಚನಾಳ, ಹುಲಸಗೂಡ, ಸುಂಠಾಣ, ಕೋಡ್ಲಿ ಕ್ರಾಸ್ ಮಾರ್ಗವಾಗಿ ಕಾಳಗಿ ಪಟ್ಟಣಕ್ಕೆ ಬರಲು ಶಾಲೆ ಕಾಲೇಜಿನ ಸಮಯಕ್ಕೆ ಸಾರಿಗೆ ಬಸ್ ಸೌಲಭ್ಯ ಇಲ್ಲದಿರುವುದರಿಂದ ತೊಂದರೆಯುಂಟಾಗುತ್ತಿದೆ. ಬಸ್ಸಿಗೆ ಜೋತು ಬಿದ್ದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ತಕ್ಷಣವೇ ಬಸ್ಸಿನ ಸೌಲಭ್ಯ ಒದಗಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಆಗ್ರಹಿಸಿದರು.
ನಂತರ ಕಾಳಗಿ ಬಸ್ ಘಟಕ ವ್ಯವಸ್ಥಾಪಕ ಯಶವಂತ ಯಾತನೂರ ಅವರಿಗೆ ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿದರು. ಅನಿಲಕುಮಾರ, ಅರುಣಕುಮಾರ ಹಾಗೂ ವಿದ್ಯಾರ್ಥಿಗಳು ಇದ್ದರು. ರಟಕಲ್ ಪಿಎಸ್ಐ ಚಂದ್ರಕಾಂತ ಮೇಕಾಲೆ ಬಂದೊಬಸ್ತ್ ಒದಗಿಸಿದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.