ಜನರ ಕೈಗೆ ಮಹಾನಗರ ಪಾಲಿಕೆ ಕಾರ್ಯಭಾರ


Team Udayavani, Mar 22, 2022, 9:32 AM IST

1authority

ಕಲಬುರಗಿ: “ನಮ್‌ ವಾರ್ಡ್‌ನಲ್ಲಿ ನಾವ್‌ ಹೇಳಿದ ಕೆಲಸ ಮಾಡ್ತಾ ಇಲ್ಲ. ವಾರ್ಡ್‌ನ ಪಾಲಿಕೆ ಸದಸ್ಯರು ತಮಗೆ ಮನಸ್ಸಿಗೆ ಬಂದಂತೆ, ಇಲ್ಲವೇ ವಾರ್ಡ್‌ನಲ್ಲಿ ಯಾರು ಬಲಾಡ್ಯ ಇರುತ್ತಾರೋ ಅವರ ಮಾತು ಕೇಳ್ತಾರೇ’ ಎನ್ನುವ ಇತ್ಯಾದಿ ಆರೋಪಗಳು, ದೂರುಗಳು ಬರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆ ಮಹತ್ತರ ಕಾರ್ಯಕ್ಕೆ ಮುಂದಾಗಿದೆ.

ಜನರ ಕೈಗೆ ಅಧಿಕಾರ ಎನ್ನುವ ನಿಟ್ಟಿನಲ್ಲಿ ವಾರ್ಡ್‌ ಸಮಿತಿ ರಚಿಸಲು ನಿರ್ಧರಿಸಿದ್ದು, ಬರುವ ಏಪ್ರಿಲ್‌ 5ರೊಳಗೆ ವಾರ್ಡ್‌ಗೆ ಸದಸ್ಯರಾಗ ಬಯಸುವರು ಅರ್ಜಿ ಹಾಕಲು ಮುಕ್ತ ಅವಕಾಶ ನೀಡಲಾಗಿದೆ.

ಪ್ರಮುಖವಾಗಿ ಸಾರ್ವಜನಿಕರಿಗೆ ವಾರ್ಡ್‌ ಸಮಿತಿ ರಚನೆ ಹಾಗೂ ಕಾರ್ಯವೈಖರಿಗೆ ಸಂಬಂಧಿಸಿದಂತೆ ಪಾಲಿಕೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಜತೆಗೆ ಇರುವ ಸಂಶಯಗಳನ್ನು ದೂರ ಮಾಡಲು ಪಾಲಿಕೆ ಮಾರ್ಚ್‌ 22ರಂದು ಬೆಳಗ್ಗೆ 11ಕ್ಕೆ ಪಾಲಿಕೆಯ ಇಂದಿರಾ ಸ್ಮಾರಕ ಭವನದಲ್ಲಿ ಮಹತ್ವದ ಸಭೆ ಕರೆಯಲಾಗಿದೆ.

ಜನಪ್ರತಿನಿಧಿಗಳಂತೆ ಜನರು ಸಹ ಅಭಿವೃದ್ಧಿ ಕಾರ್ಯಗಳಿಗೆ ಸಕ್ರಿಯವಾಗಿ ಆಸಕ್ತಿ ವಹಿಸುವ ಜತೆಗೆ ಆಯಾ ವಾರ್ಡ್‌ನಲ್ಲಿ ಏನೇನು ಅಭಿವೃದ್ದಿ ಕಾರ್ಯಗಳು ಆಗಬೇಕು ಎನ್ನುವ ನಿಟ್ಟಿನಲ್ಲಿ ಸೂಚಿಸುವ ಹಾಗೂ ಸಲಹೆ ನೀಡುವ ಪ್ರಮುಖ ವಾರ್ಡ್‌ ಸಮಿತಿಯೊಂದನ್ನು ರಚಿಸಲು ಪಾಲಿಕೆ ಮುಂದಾಗಿರುವುದು ಹೊಸ ಆಡಳಿತಕ್ಕೆ ನಾಂದಿ ಹಾಡುವಂತಾಗಿದೆ.

ವಾರ್ಡ್‌ ರಚನೆ ಹೇಗೆ?

ಮಹಾನಗರದಲ್ಲಿ 55 ವಾರ್ಡ್‌ಗಳಿವೆ. ಪ್ರತಿಯೊಂದು ವಾರ್ಡ್‌ಗೆ ಸಮಿತಿಯೊಂದನ್ನು ರಚಿಸಲಾಗುತ್ತಿದೆ. ಆಯಾ ವಾರ್ಡ್‌ನಲ್ಲಿ ಮತದಾರರ ಪಟ್ಟಿಯಲ್ಲಿರುವ ಹತ್ತು ಜನ ಸದಸ್ಯರನ್ನು ಸಮಿತಿಗೆ ಸದಸ್ಯರನ್ನಾಗಿ ಆಯ್ಕೆಗೊಳಿಸಲಾಗುತ್ತಿದೆ. ಸಮಿತಿ ಸದಸ್ಯರು ಸಭೆ ನಡೆಸಿ, ಅಭಿಪ್ರಾಯ ಪಡೆದು ಕೈಗೊಳ್ಳಬೇಕಾದ ಕಾಮಗಾರಿ ಇಲ್ಲವೇ ಕೆಲಸಗಳ ಕುರಿತು ಪಾಲಿಕೆ ಮುಖ್ಯ ಅಧಿಕಾರಿಗಳಿಗೆ ಸಲ್ಲಿಸಬೇಕು. ಪಾಲಿಕೆ ಆಡಳಿತ ಮಂಡಳಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ. ಒಟ್ಟಾರೆ ಇಲ್ಲಿ ವಾರ್ಡ್‌ ಸಮಿತಿ ನೀಡಿದ ಸಲಹೆ, ಶಿಫಾರಸುಗಳೇ ಕಾರ್ಯರೂಪಕ್ಕೆ ಬರುತ್ತಿರುವುದು ಗಮನಾರ್ಹ ಸಂಗತಿಯಾಗಿದೆ.

ವಾರ್ಡ್‌ ಸಮಿತಿಗೆ ಆಯಾ ಪಾಲಿಕೆ ಸದಸ್ಯರೇ ಅಧ್ಯಕ್ಷರಾಗಿರುತ್ತಾರೆ. ವಾರ್ಡ್‌ವಾರು ಸಮಿತಿಗೆ ಸದಸ್ಯರ ಅವಧಿ ಐದು ವರ್ಷ ಇಲ್ಲವೇ ಎರಡು ವರ್ಷ ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಒಟ್ಟಾರೆ ಆಯಾ ವಾರ್ಡ್‍ನ ಕ್ರಿಯಾಶೀಲ ಮತದಾರರು, ಅಭಿವೃದ್ಧಿಪರ ಚಿಂತನೆಯುಳ್ಳವರು ಸದಸ್ಯರಾದಲ್ಲಿ ಸಮಿತಿಗೆ ಹೆಚ್ಚು ಅರ್ಥ ಬರುತ್ತದೆ. ಅಲ್ಲದೇ ಮಾದರಿ ಕಾರ್ಯಗಳಾಗಲು ಕಾರಣವಾಗುತ್ತಾರೆ. ಈ ನಿಟ್ಟಿನಲ್ಲಿ ಸಾಮಾಜಿಕ ಚಿಂತಕರು, ಅಭಿವೃದ್ಧಿಪರ ಧೋರಣೆಯುಳ್ಳವರು ಸಮಿತಿ ಸದಸ್ಯರಾಗಲು ಮುಂದೆ ಬರುವುದು ಅವಶ್ಯಕವಾಗಿದೆ.

ಪಾಲಿಕೆ ಸದಸ್ಯ ಕೆಲಸ ಮಾಡುತ್ತಿಲ್ಲ. ನಾವು ಹೇಳಿದ ಕೆಲಸ ಮಾಡುವುದೇ ಇಲ್ಲ ಎಂದು ಕೊರಗುವ ಹಾಗೂ ಆರೋಪ ಹೊರಿಸುವ ಬದಲು ವಾರ್ಡ್‌ವಾರು ಸಮಿತಿಗೆ ಸದಸ್ಯರಾದಲ್ಲಿ ಅವರೇ ಮುಂದೆ ನಿಂತು ಆಸಕ್ತಿ ವಹಿಸಿ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಬಹುದಾಗಿದೆ. ಅಲ್ಲದೇ ಕೆಲಸ ಕಾರ್ಯಗಳು ಗುಣಮಟ್ಟವಾಗಿರದೇ ಕಳಪೆಯಿಂದ ನಡೆಯುತ್ತಿದ್ದರೆ ಪಾಲಿಕೆ ಗಮನ ತರಬಹುದು. ಸಮಿತಿ ಸದಸ್ಯರೆಲ್ಲರೂ ಕಾಮಗಾರಿಗೆ ಸಂಬಂಧಿಸಿದಂತೆ ನಿಗಾ ವಹಿಸಬಹುದು. ಒಟ್ಟಾರೆ ಸಾರ್ವಜನಿಕರ ಕೈಯಲ್ಲಿ ಅಧಿಕಾರದ ಪ್ರಭುತ್ವ ಎಂಬುದಾಗಿ ಸ್ಪಷ್ಟವಾಗಿ ಹೇಳಬಹುದಾಗಿದೆ.
ವಾರ್ಡ್‌ನಲ್ಲಿ ಅತ್ಯಂಶ ಅವಶ್ಯಕ ಕೆಲಸಗಳಾಗಬೇಕು ಎನ್ನುವ ನಿಟ್ಟಿನಲ್ಲಿ ಮಾಹಿತಿ ನೀಡಲು ಜತೆಗೆ ಅಭಿಪ್ರಾಯ ಸಲ್ಲಿಸಲು ವಾರ್ಡ್‌ ಸಮಿತಿ ರಚಿಸಲು ಪಾಲಿಕೆ ಮುಂದಾಗಿದೆ. ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಜತೆಗೆ ಸಂಶಯ ನಿವಾರಣೆ ಮಾಡುವ ನಿಟ್ಟಿನಲ್ಲಿ ಮಾರ್ಚ್‌ 22ರಂದು ಬೆಳಗ್ಗೆ 11ಕ್ಕೆ ಪಾಲಿಕೆ ಇಂದಿರಾ ಸ್ಮಾರಕ ಭವನದಲ್ಲಿ ಸಭೆ ಕರೆಯಲಾಗಿದೆ. -ಸ್ನೇಹಲ್‌ ಸುಧಾರಕ ಲೋಖಂಡೆ, ಪಾಲಿಕೆ ಆಯುಕ್ತ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.