ನಿರಗುಡಿ ಮುತ್ಯಾ ನೇತೃತ್ವದಲ್ಲಿ ಶೋಭಾಯಾತ್ರೆ


Team Udayavani, Apr 27, 2022, 10:22 AM IST

4ram-navami

ಆಳಂದ: ಎರಡು ದಿನಗಳ ಹಿಂದೆ (ಏ.24ರಂದು) ಶ್ರೀರಾಮ ಸೇನೆಯಿಂದ ಶ್ರೀ ರಾಮನವಮಿ ಅಂಗವಾಗಿ ಏರ್ಪಡಿಸಲಾಗಿದ್ದ ಭವ್ಯ ಶೋಭಾಯಾತ್ರೆ ಬೆನ್ನಲ್ಲೇ ಮಂಗಳವಾರ ಜೈ ಭಾರತ ಮಾತಾ ಸೇವಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಶ್ರೀ ಮಲ್ಲಯ್ಯ ಮುತ್ಯಾ ನಿರಗುಡಿ ನೇತೃತ್ವದಲ್ಲಿ ನಡೆದ ಭವ್ಯ ಶೋಭಾಯಾತ್ರೆಯಲ್ಲಿ ಮುಸ್ಲಿಮರು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರತ್ಯೇಕವಾಗಿ ಭಾಗವಹಿಸಿದ್ದರು.

ಪಟ್ಟಣದಲ್ಲಿ ಕಳೆದ ಮಾರ್ಚ್‌ ತಿಂಗಳಲ್ಲಿ ಲಾಡ್ಲೆಮಶಾಕ್‌ ದರ್ಗಾ ಮತ್ತು ರಾಘವಚೈತನ್ಯ ಲಿಂಗದ ಪೂಜೆಗೆ ಸಂಬಂಧಿಸಿದಂತೆ ಉಂಟಾಗಿದ್ದ ಅಶಾಂತಿ ವಾತಾವರಣ ನಡುವೆಯೂ ಶ್ರೀರಾಮನ ಪ್ರತಿಮೆ ಮೆರವಣಿಗೆ ಬಿಗಿಭದ್ರತೆಯಲ್ಲಿ ನಡೆದಿತ್ತು. ಮಂಗಳವಾರ ನಡೆದ ಶೋಭಾಯಾತ್ರೆಯೂ ಶಾಂತಿಯುತವಾಗಿ ಜರುಗಿತು. ಶೋಭಾಯಾತ್ರೆಯಲ್ಲಿ ಜಯ ಕರ್ನಾಟಕ ವೇದಿಕೆ, ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮುಖಂಡರು ಹಾಗೂ ಮುಸ್ಲಿಮ ಮುಖಂಡರು ಭಾಗವಹಿಸಿದ್ದರು.

ಮೆರವಣಿಗೆಯಲ್ಲಿ 15 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಸೇರಿ ಬುದ್ಧ, ಬಸವ, ಡಾ| ಬಿ.ಆರ್‌. ಅಂಬೇಡ್ಕರ್‌, ಮಠಾಧಿಧೀಶರು ಸೇರಿ ಹಲವು ಮಹನೀಯರ ಪ್ರತಿಮೆಗಳು, ಸ್ವಾತಂತ್ರ್ಯ ಸೇನಾನಿಗಳು, ಹುತಾತ್ಮರು, ಸಾಧಕರು, ಶ್ರಮಿಸಿದ ಶಾಸಕರು, ಕಲಾವಿದರು, ಸಾಹಿತಿಗಳ ಭಾವಚಿತ್ರ, ಕಟೌಟ್‌ಗಳು ಮೆರವಣಿಗೆಯುದ್ಧಕ್ಕೂ ರಾರಾಜಿಸಿದವು. ಈ ವೇಳೆ ಸಾವಿರಾರ ಉಜನರಿಗೆ ಮುತ್ಯಾ ಹಣ್ಣು ಹಂಪಲು ನೀಡಿದರು.

ಪಟ್ಟಣದ 2 ಕಿ.ಮೀ ಅಂತರದಲ್ಲಿನ ಹಳೆಯ ಚೆಕ್‌ಪೋಸ್ಟ್‌ ಹತ್ತಿರದಲ್ಲಿರುವ ಮಲ್ಲಯ್ನಾ ಮುತ್ಯಾ ಆಶ್ರಮದಿಂದ ಹೆದ್ದಾರಿ ಮೂಲಕ ಹೊರಟ ಮೆರವಣಿಗೆಯಲ್ಲಿ ಟಂಟಂ, ಕ್ರೂಸರ್‌, ಜೀಪು, ಟ್ರ್ಯಾಕ್ಟರ್‌ ಹೀಗೆ ಹಲವು ವಾಹನಗಲ್ಲಿ ಕಟೌಟ್‌, ಪ್ರತಿಮೆಗಳಿಟ್ಟು ವಾದ್ಯ ವೈಭವ, ಸೌಂಡ್‌ನೊಂದಿಗೆ ಸಹಸ್ರಾರು ಜನರು ಪಾಲ್ಗೊಂಡಿದ್ದರು. ಶೋಭಾಯಾತ್ರೆಯಲ್ಲಿ ಶ್ರೀರಾಮನ ಮತ್ತು ಬಸವಣ್ಣನವರ ಅಭಿಮಾನಿಗಳು ಭಗವಾ ಧ್ವಜ ಹಾರಿಸಿದರೇ, ಬುದ್ಧ ಮತ್ತು ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಅಭಿಮಾನಿಗಳು ನೀಲಿಧ್ವಜದೊಂದಿಗೆ ನೃತ್ಯ ಪ್ರದರ್ಶಿಸಿದರು.

ಲಂಬಾಣಿ ಮಹಿಳೆಯರ ಸಾಂಪ್ರದಾಯಿಕ ನೃತ್ಯ, ಹಲಗೆ ವಾದನ, ಬಾಜಾ-ಭಜಂತ್ರಿ ಕುಣಿತ ಆಶರ್ಷವಾಗಿ ಕಂಡಿತು. ಶೋಭಾಯಾತ್ರೆ ಬೆಳಗಿನ 11 ಗಂಟೆಯ ಸುಮಾರಿಗೆ ಹೊರಟು ಮಧ್ಯಾಹ್ನದ ಸುಡುಬಿಸಿಲಿನಲ್ಲೇ ಚೆಕ್‌ಪೋಸ್ಟ್‌ನಿಂದ ಬಸ್‌ ನಿಲ್ದಾಣ, ರಜ್ವಿರೋಡ, ತಹಶೀಲ್ದಾರ್‌ ಕಚೇರಿ ಮಾರ್ಗವಾಗಿ ಗ್ರಾಮದೇವತೆ ಹನುಮಾನ ದೇವಸ್ಥಾನದ ವರೆಗೆ ಸಾಗಿ ಹನುಮಾನ ದೇವರಿಗೆ ಮಂಗಳಾರುತಿ ಮಾಡಿ ಸಂಜೆ 5 ಗಂಟೆಯ ಹೊತ್ತಿಗೆ ಸಮಾರೋಪಗೊಂಡಿತು.

ಮುಖಂಡರಾದ ಜಫರ್‌ ಹುಸೇನ, ಅಫಜಲ್‌ ಅನ್ಸಾರಿ, ಆಸೀಫ್‌ ಅನ್ಸಾರಿ ಮಾತನಾಡಿ, ದೇಶ ಅಖಂಡಂತೆ ಕೋಮುಸೌಹಾರ್ದತೆಗಾಗಿ ನಾವು ಸಿದ್ಧರಾಗಿದ್ದೇವೆ. ಇಂಥ ಉತ್ಸವಗಳಲ್ಲಿ ನಾವು ಭಾಗವಹಿಸಿ ಎಲ್ಲ ರೀತಿಯಿಂದಲು ಸಹಕರಿಸುತ್ತೇವೆ. ಮಲ್ಲಯ್ನಾ ಮುತ್ಯಾ ಎಲ್ಲ ಧರ್ಮೀಯರನ್ನು ಒಗ್ಗೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.